AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೀರಜ್ ಸಾಹು ಐಟಿ ದಾಳಿ ಕೇಸ್: ಭ್ರಷ್ಟಾಚಾರ ಅವರ ಸ್ವಭಾವದಲ್ಲೇ ಇದೆ: ಕಾಂಗ್ರೆಸ್​ ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ

ಕಾಂಗ್ರೆಸ್ ಸಂಸದ ಧೀರಜ್ ಸಾಹು ಐಟಿ ದಾಳಿಯಲ್ಲಿ 200 ಕೋಟಿ ರೂ.ಗೂ ಅಧಿಕ ನಗದು ವಶಪಡಿಸಿಕೊಂಡ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಮಾತನಾಡಿದ್ದು, ಸ್ವಾತಂತ್ರ್ಯದ ನಂತರ ಸಂಸದರೊಬ್ಬರ ಮನೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದು, ನನಗೆ ತುಂಬಾ ಆಶ್ಚರ್ಯವಾಗಿದೆ. ಆದರೆ ಭ್ರಷ್ಟಾಚಾರ ಅವರ ಸ್ವಭಾವದಲ್ಲಿಯೇ ಅಡಿಗಿರುವುದರಿಂದ ಕಾಂಗ್ರೆಸ್ ಮೌನಕ್ಕೆ ಶರಣಾಗಿದೆ ಎಂದಿದ್ದಾರೆ.

ಧೀರಜ್ ಸಾಹು ಐಟಿ ದಾಳಿ ಕೇಸ್: ಭ್ರಷ್ಟಾಚಾರ ಅವರ ಸ್ವಭಾವದಲ್ಲೇ ಇದೆ: ಕಾಂಗ್ರೆಸ್​ ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ
ಕೇಂದ್ರ ಸಚಿವ ಅಮಿತ್ ಶಾ
TV9 Web
| Edited By: |

Updated on:Dec 10, 2023 | 9:38 PM

Share

ಕಾಂಗ್ರೆಸ್ ಸಂಸದ ಧೀರಜ್ ಸಾಹು (Dheeraj sahu) ಗೆ ಸೇರಿದ ಒಡಿಶಾದ ಅತಿದೊಡ್ಡ ಮದ್ಯ ತಯಾರಿಕಾ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿ. ಕಚೇರಿಗಳ ಮೇಲೆ ಐಟಿ ದಾಳಿ ಮಾಡಿದ್ದು, ಈ ವೇಳೆ ಒಟ್ಟು 290 ಕೋಟಿ ರೂ. ನಗದು ಪತ್ತೆಯಾದ ಬಗ್ಗೆ ಮಾಹಿತಿ ಇದೆ. ಸದ್ಯ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದು, ಭ್ರಷ್ಟಾಚಾರ ಅವರ ಸ್ವಭಾವದಲ್ಲಿಯೇ ಅಡಿಗಿರುವುದರಿಂದ ಕಾಂಗ್ರೆಸ್ ಮೌನಕ್ಕೆ ಶರಣಾಗಿದೆ. ಸ್ವಾತಂತ್ರ್ಯದ ನಂತರ ಸಂಸದರೊಬ್ಬರ ಮನೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದು, ನನಗೆ ತುಂಬಾ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಧೀರಜ್ ಸಾಹು ಮನೆಯಲ್ಲಿ ಕೋಟ್ಯಂತರ ರೂ. ಹಣ ಸಿಕ್ಕಿದೆ. ಆದರೆ ಇಡೀ INDI ಮೈತ್ರಿಕೂಟವು ಈ ಭ್ರಷ್ಟಾಚಾರದ ಬಗ್ಗೆ ಮೌನವಹಿಸಿದೆ ಎಂದು ಕಿಡಿಕಾರಿದ್ದಾರೆ.

ಜೆಡಿಯು, ಆರ್​​ಜೆಡಿ, ಡಿಎಂಕೆ ಮತ್ತು ಎಸ್​ಪಿ ಎಲ್ಲರೂ ಮೌನವಾಗಿ ಕುಳಿತಿದ್ದಾರೆ. ಆದರೆ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಏಕೆ ಪ್ರಚಾರ ಮಾಡಲಾಗಿದೆ ಎಂದು ನನಗೆ ಈಗ ಅರ್ಥವಾಗಿದೆ. ಅವರ ಭ್ರಷ್ಟಾಚಾರದ ಎಲ್ಲಾ ರಹಸ್ಯಗಳು ಬಹಿರಂಗಗೊಳ್ಳುತ್ತವೆ ಎಂಬ ಭಯದಲ್ಲಿ ಹೀಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಐಟಿ ದಾಳಿ ನಡೆಯುವ ಮುನ್ನ ಇಲಾಖೆ ತಯಾರಿ ಹೇಗಿರುತ್ತೆ? ಸುಳ್ಳು ಕೇಸ್ ದಾಖಲಿಸುವುದಿಲ್ಲವಾ ಇಲಾಖೆ?

ಧೀರಜ್ ಸಾಹುಗೆ ಸೇರಿದ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿ. ಕಚೇರಿಗಳ ಮೇಲೆ 5ನೇ ದಿನವೂ ಐಟಿ ಅಧಿಕಾರಿಗಳಿಂದ ಹಣ ಎಣಿಕೆ ಕಾರ್ಯ ಮುಂದುವರೆದಿದೆ. ಐಟಿ ದಾಳಿ ವೇಳೆ ಒಟ್ಟು 290 ಕೋಟಿ ನಗದು ಪತ್ತೆಯಾದ ಬಗ್ಗೆ ಮಾಹಿತಿ ಇದೆ. ಈವರೆಗೆ 120 ಬ್ಯಾಗ್‌ಗಳಲ್ಲಿದ್ದ ಹಣವನ್ನು ಮಾತ್ರ ಅಧಿಕಾರಿಗಳು ಎಣಿಸಿದ್ದಾರೆ. ಉಳಿದ ಬ್ಯಾಗ್‌ಗಳಲ್ಲಿರುವ ನಗದು ಎಣಿಕೆ ಮಾಡಲಾಗುತ್ತಿದೆ. ನಗದು ಎಣಿಕೆ ಕಾರ್ಯ ಇಂದು ಮುಕ್ತಾಯ ಸಾಧ್ಯತೆ ಇದೆ. ಎಣಿಕೆ ವೇಳೆ ಹಲವು ಕ್ಯಾಷ್ ಕೌಂಟಿಂಗ್ ಮಷಿನ್‌ಗಳು ಕೆಟ್ಟು ಹೋಗಿವೆ ಎನ್ನಲಾಗುತ್ತಿದೆ.

ಧೀರಜ್ ಸಾಹು ಮನೆಯಲ್ಲೇ 100 ಕೋಟಿ ರೂ. ನಗದು ಪತ್ತೆಯಾಗಿತ್ತು. ಸಂಸದನ ಮನೆಯಲ್ಲಿ 9 ರಾಕ್‌ಗಳಲ್ಲಿ 100 ಕೋಟಿ ನಗದು ಪತ್ತೆ ಆಗಿತ್ತು. ಡಿಸೆಂಬರ್‌ 6ರಂದು ಒಡಿಶಾ, ಜಾರ್ಖಂಡ್‌, ಬಂಗಾಳದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Sun, 10 December 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ