AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಜೆಟ್​ ಅಧಿವೇಶನದ ಮೊದಲ ದಿನ ಮುಲಾಯಂ ಸಿಂಗ್​ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದ ಸಚಿವೆ ಸ್ಮೃತಿ ಇರಾನಿ

ಇಂದು ಸಂಸತ್ತಿಗೆ ತಲುಪಿದ ಮುಲಾಯಂ ಸಿಂಗ್ ಯಾದವ್​ ಹಾಲ್​​ನ್ನು ಪ್ರವೇಶಿಸುತ್ತಿದ್ದರು. ವಯಸ್ಸಾದ ಕಾರಣ ತುಂಬ ನಿಧಾನವಾಗಿ ಅಲ್ಲಿನ ಮೆಟ್ಟಿಲುಗಳನ್ನು ಇಳಿಯುತ್ತಿದ್ದರು. ಅವರನ್ನು ನೋಡುತ್ತಿದ್ದಂತೆ ಸ್ಮೃತಿ ಇರಾನಿ ಅವರ ಸಮೀಪ ತೆರಳಿದರು.

Video: ಬಜೆಟ್​ ಅಧಿವೇಶನದ ಮೊದಲ ದಿನ ಮುಲಾಯಂ ಸಿಂಗ್​ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದ ಸಚಿವೆ ಸ್ಮೃತಿ ಇರಾನಿ
ಮುಲಾಯಂ ಸಿಂಗ್​ ಯಾದವ್​ಗೆ ನಮಸ್ಕರಿಸಿದ ಸ್ಮೃತಿ ಇರಾನಿ
TV9 Web
| Edited By: |

Updated on: Jan 31, 2022 | 5:22 PM

Share

ರಾಜಕಾರಣಿಗಳು ಕೆಲವರು ಬೇರೆಬೇರೆ ಪಕ್ಷದಲ್ಲಿದ್ದರೂ, ಸೈದ್ಧಾಂತಿಕವಾಗಿ ಒಬ್ಬರನ್ನೊಬ್ಬರು, ಒಂದು ಪಕ್ಷವನ್ನು ಮತ್ತೊಂದು ಪಕ್ಷ ವಿರೋಧಿಸಿದರೂ ಕೂಡ ವೈಯಕ್ತಿಕವಾಗಿ ಸ್ನೇಹದಿಂದ ಇರುತ್ತಾರೆ. ಇನ್ನೊಂದು ಪಕ್ಷದ ಹಿರಿಯರನ್ನು ಗೌರವಿಸುತ್ತಾರೆ, ಎರಡು ಪಕ್ಷಗಳ ನಾಯಕರು ಪರಸ್ಪರ ಆದರಿಸಿಕೊಳ್ಳುತ್ತಾರೆ. ಇಂಥ ಅನೇಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಅದಕ್ಕೊಂದು ಸೇರ್ಪಡೆಯಾಗಿ ಇದೀಗ ಬಿಜೆಪಿ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani )ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್​​ರ (Mulayam Singh Yadav) ವಿಡಿಯೋವೊಂದು ವೈರಲ್​ ಆಗುತ್ತಿದೆ. ಇಂದಿನಿಂದ ಸಂಸತ್ತಿನ ಬಜೆಟ್​ ಅಧಿವೇಶನ(Budget Session)  ಪ್ರಾರಂಭವಾಗಿದ್ದು, ಪರಸ್ಪರ ವಿವಿಧ ಪಕ್ಷಗಳ ಸಂಸದರು ಸಂಸತ್ತಿನ ಆವರಣದಲ್ಲಿ ಭೇಟಿಯಾದರು. ಹೀಗೆ ಮುಲಾಯಂ ಸಿಂಗ್ ಯಾದವ್​ರನ್ನು ಭೇಟಿಯಾದ ಸ್ಮೃತಿ ಇರಾನಿ ಬಾಗಿ ಅವರ ಪಾದ ಮುಟ್ಟಿ ನಮಸ್ಕರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಮುಲಾಯಂ ಸಿಂಗ್​ ಯಾದವ್​ ಅವರು ಸ್ಮೃತಿ ಇರಾನಿ ತಲೆಯನ್ನು ಮುಟ್ಟಿ ಆಶೀರ್ವದಿಸಿದ್ದಾರೆ. 

ಇಂದು ಸಂಸತ್ತಿಗೆ ತಲುಪಿದ ಮುಲಾಯಂ ಸಿಂಗ್ ಯಾದವ್​ ಹಾಲ್​​ನ್ನು ಪ್ರವೇಶಿಸುತ್ತಿದ್ದರು. ವಯಸ್ಸಾದ ಕಾರಣ ತುಂಬ ನಿಧಾನವಾಗಿ ಅಲ್ಲಿನ ಮೆಟ್ಟಿಲುಗಳನ್ನು ಇಳಿಯುತ್ತಿದ್ದರು. ಅವರನ್ನು ನೋಡುತ್ತಿದ್ದಂತೆ ಸಮೀಪ ಧಾವಿಸಿದ ಸ್ಮೃತಿ ಇರಾನಿ ಬಾಗಿ ಮುಲಾಯಂ ಸಿಂಗ್ ಯಾದವ್​ ಪಾದವನ್ನು ಸ್ಪರ್ಶಿಸಿ ಆಶೀರ್ವಾದ ಪಡೆದರು.  ಅವರೂ ಕೂಡ ಅಷ್ಟೇ ಅಪ್ಯಾಯಮಾನದಿಂದ ಸ್ಮೃತಿ ತಲೆಯನ್ನು ಸವರಿದ್ದಾರೆ.

ಇಂದಿನಿಂದ 2022-23ನೇ ಸಾಲಿನ ಬಜೆಟ್​ ಅಧಿವೇಶನ ಶುರುವಾಗಿದ್ದು, ಮೊದಲ ದಿನ ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2021-22ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ. ನಾಳೆ ಅವರು ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ.  ಬಜೆಟ್​ ಅಧಿವೇಶನದ ಮೊದಲ ಅವಧಿ ಇಂದಿನಿಂದ ಫೆ.11ರವರೆಗೆ ನಡೆಯಲಿದ್ದು, ಎರಡನೇ ಅವಧಿ ಮಾರ್ಚ್​ 14ರಿಂದ ಏಪ್ರಿಲ್​ 8ರ ತನಕ ಇರಲಿದೆ.

ಇದನ್ನೂ ಓದಿ: ‘ಹೃತಿಕ್​ ರೋಷನ್​ ಜತೆ ನೀವು ಡೇಟಿಂಗ್​ ಮಾಡ್ತಾ ಇದ್ದೀರಾ?’; ನೇರ ಪ್ರಶ್ನೆಗೆ ಸಬಾ ಉತ್ತರ ಏನಿತ್ತು?

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ