AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!
6 ರಿಂದ 9ನೇ ತರಗತಿ ಸ್ಥಗಿತ
TV9 Web
| Edited By: |

Updated on:Apr 07, 2022 | 5:40 PM

Share

ಭೋಪಾಲ್​: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳು ಶಾಲಾ-ಕಾಲೇಜು ಆರಂಭ ದಿನಾಂಕವನ್ನು ಮುಂದೂಡುತ್ತಲೇ ಬಂದಿವೆ. ಈಗ ಮಧ್ಯಪ್ರದೇಶ ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಂದಿನ ಮಾರ್ಚ್​​ 31ರವರೆಗೂ ತೆರೆಯದೇ ಇರಲು ನಿರ್ಧರಿಸಿದೆ.

ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “1 ರಿಂದ 8ನೇ ತರಗತಿಯವರಿಗೆ ಮಾರ್ಚ್​ವರೆಗೂ ಶಾಲೆ ಇರುವುದಿಲ್ಲ. ಅವರು ಸಿದ್ಧಪಡಿಸಿದ ಪ್ರಾಜೆಕ್ಟ್​​ಗಳ ಆಧಾರದ ಮೇಲೆ ಮಾರ್ಕ್ಸ್​​ ನೀಡಲಾಗುತ್ತದೆ,” ಎಂದಿದ್ದಾರೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಶೀಘ್ರವೇ ತರಗತಿಗಳು ಆರಂಭಗೊಳ್ಳಲಿವೆಯಂತೆ. ” 10 ಹಾಗೂ 12ನೇ ವರ್ಗದವರಿಗೆ ಶಾಲೆ ಆರಂಭಿಸುತ್ತೇವೆ. ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಅವರಿಗೆ ಪರೀಕ್ಷೆ ನಡೆಯಲಿದೆ. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಇನ್ನು, 9 ಹಾಗೂ 11ನೇ ವರ್ಗದವರಿಗೂ ತರಗತಿ ಇರಲಿದೆ. ಆದರೆ, ಅವರು ವಾರದಲ್ಲಿ ಒಂದು ಅಥವಾ ಎರಡು ದಿನ ಮಾತ್ರ ತರಗತಿಗೆ ಬಂದರೆ ಸಾಕು,” ಎಂದು ಚೌಹಾಣ್​ ತಿಳಿಸಿದ್ದಾರೆ.

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ. ಈ ಕಾರಣಕ್ಕೆ  ಶಾಲಾ ಕಾಲೇಜು ಆರಂಭ ದಿನಾಂಕವನ್ನು ಮಧ್ಯಪ್ರದೇಶ ಸರ್ಕಾರ ಮುಂದೂಡುತ್ತಲೇ ಬಂದಿತ್ತು. ಈಗ ಅದನ್ನು ಮಾರ್ಚ್​ವರೆಗೆ ಮುಂದೂಡುವ ಮೂಲಕ ಪಾಲಕರಿಗೆ ನೆಮ್ಮದಿ ನೀಡಿದೆ.

ಶಾಲಾ ಶುಲ್ಕ ಪಾವತಿಸದಿದ್ರೆ ಆನ್​ಲೈನ್ ಕ್ಲಾಸ್ ಬಂದ್ ಮಾಡ್ತೀವಿ.. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಧಮ್ಕಿ

Published On - 2:50 pm, Sat, 5 December 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?