AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!
6 ರಿಂದ 9ನೇ ತರಗತಿ ಸ್ಥಗಿತ
TV9 Web
| Edited By: |

Updated on:Apr 07, 2022 | 5:40 PM

Share

ಭೋಪಾಲ್​: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳು ಶಾಲಾ-ಕಾಲೇಜು ಆರಂಭ ದಿನಾಂಕವನ್ನು ಮುಂದೂಡುತ್ತಲೇ ಬಂದಿವೆ. ಈಗ ಮಧ್ಯಪ್ರದೇಶ ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಂದಿನ ಮಾರ್ಚ್​​ 31ರವರೆಗೂ ತೆರೆಯದೇ ಇರಲು ನಿರ್ಧರಿಸಿದೆ.

ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “1 ರಿಂದ 8ನೇ ತರಗತಿಯವರಿಗೆ ಮಾರ್ಚ್​ವರೆಗೂ ಶಾಲೆ ಇರುವುದಿಲ್ಲ. ಅವರು ಸಿದ್ಧಪಡಿಸಿದ ಪ್ರಾಜೆಕ್ಟ್​​ಗಳ ಆಧಾರದ ಮೇಲೆ ಮಾರ್ಕ್ಸ್​​ ನೀಡಲಾಗುತ್ತದೆ,” ಎಂದಿದ್ದಾರೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಶೀಘ್ರವೇ ತರಗತಿಗಳು ಆರಂಭಗೊಳ್ಳಲಿವೆಯಂತೆ. ” 10 ಹಾಗೂ 12ನೇ ವರ್ಗದವರಿಗೆ ಶಾಲೆ ಆರಂಭಿಸುತ್ತೇವೆ. ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಅವರಿಗೆ ಪರೀಕ್ಷೆ ನಡೆಯಲಿದೆ. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಇನ್ನು, 9 ಹಾಗೂ 11ನೇ ವರ್ಗದವರಿಗೂ ತರಗತಿ ಇರಲಿದೆ. ಆದರೆ, ಅವರು ವಾರದಲ್ಲಿ ಒಂದು ಅಥವಾ ಎರಡು ದಿನ ಮಾತ್ರ ತರಗತಿಗೆ ಬಂದರೆ ಸಾಕು,” ಎಂದು ಚೌಹಾಣ್​ ತಿಳಿಸಿದ್ದಾರೆ.

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ. ಈ ಕಾರಣಕ್ಕೆ  ಶಾಲಾ ಕಾಲೇಜು ಆರಂಭ ದಿನಾಂಕವನ್ನು ಮಧ್ಯಪ್ರದೇಶ ಸರ್ಕಾರ ಮುಂದೂಡುತ್ತಲೇ ಬಂದಿತ್ತು. ಈಗ ಅದನ್ನು ಮಾರ್ಚ್​ವರೆಗೆ ಮುಂದೂಡುವ ಮೂಲಕ ಪಾಲಕರಿಗೆ ನೆಮ್ಮದಿ ನೀಡಿದೆ.

ಶಾಲಾ ಶುಲ್ಕ ಪಾವತಿಸದಿದ್ರೆ ಆನ್​ಲೈನ್ ಕ್ಲಾಸ್ ಬಂದ್ ಮಾಡ್ತೀವಿ.. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಧಮ್ಕಿ

Published On - 2:50 pm, Sat, 5 December 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ