AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!
6 ರಿಂದ 9ನೇ ತರಗತಿ ಸ್ಥಗಿತ
TV9 Web
| Edited By: |

Updated on:Apr 07, 2022 | 5:40 PM

Share

ಭೋಪಾಲ್​: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳು ಶಾಲಾ-ಕಾಲೇಜು ಆರಂಭ ದಿನಾಂಕವನ್ನು ಮುಂದೂಡುತ್ತಲೇ ಬಂದಿವೆ. ಈಗ ಮಧ್ಯಪ್ರದೇಶ ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಂದಿನ ಮಾರ್ಚ್​​ 31ರವರೆಗೂ ತೆರೆಯದೇ ಇರಲು ನಿರ್ಧರಿಸಿದೆ.

ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “1 ರಿಂದ 8ನೇ ತರಗತಿಯವರಿಗೆ ಮಾರ್ಚ್​ವರೆಗೂ ಶಾಲೆ ಇರುವುದಿಲ್ಲ. ಅವರು ಸಿದ್ಧಪಡಿಸಿದ ಪ್ರಾಜೆಕ್ಟ್​​ಗಳ ಆಧಾರದ ಮೇಲೆ ಮಾರ್ಕ್ಸ್​​ ನೀಡಲಾಗುತ್ತದೆ,” ಎಂದಿದ್ದಾರೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಶೀಘ್ರವೇ ತರಗತಿಗಳು ಆರಂಭಗೊಳ್ಳಲಿವೆಯಂತೆ. ” 10 ಹಾಗೂ 12ನೇ ವರ್ಗದವರಿಗೆ ಶಾಲೆ ಆರಂಭಿಸುತ್ತೇವೆ. ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಅವರಿಗೆ ಪರೀಕ್ಷೆ ನಡೆಯಲಿದೆ. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಇನ್ನು, 9 ಹಾಗೂ 11ನೇ ವರ್ಗದವರಿಗೂ ತರಗತಿ ಇರಲಿದೆ. ಆದರೆ, ಅವರು ವಾರದಲ್ಲಿ ಒಂದು ಅಥವಾ ಎರಡು ದಿನ ಮಾತ್ರ ತರಗತಿಗೆ ಬಂದರೆ ಸಾಕು,” ಎಂದು ಚೌಹಾಣ್​ ತಿಳಿಸಿದ್ದಾರೆ.

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ. ಈ ಕಾರಣಕ್ಕೆ  ಶಾಲಾ ಕಾಲೇಜು ಆರಂಭ ದಿನಾಂಕವನ್ನು ಮಧ್ಯಪ್ರದೇಶ ಸರ್ಕಾರ ಮುಂದೂಡುತ್ತಲೇ ಬಂದಿತ್ತು. ಈಗ ಅದನ್ನು ಮಾರ್ಚ್​ವರೆಗೆ ಮುಂದೂಡುವ ಮೂಲಕ ಪಾಲಕರಿಗೆ ನೆಮ್ಮದಿ ನೀಡಿದೆ.

ಶಾಲಾ ಶುಲ್ಕ ಪಾವತಿಸದಿದ್ರೆ ಆನ್​ಲೈನ್ ಕ್ಲಾಸ್ ಬಂದ್ ಮಾಡ್ತೀವಿ.. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಧಮ್ಕಿ

Published On - 2:50 pm, Sat, 5 December 20

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!