AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ

ಮತ್ತೊಂದು ರಾಜ್ಯದಲ್ಲಿ ಮುಂದಿನ ಮಾರ್ಚ್​​ 31ರವರೆಗೆ ಶಾಲೆಗಳು ಬಂದ್​!
6 ರಿಂದ 9ನೇ ತರಗತಿ ಸ್ಥಗಿತ
TV9 Web
| Edited By: |

Updated on:Apr 07, 2022 | 5:40 PM

Share

ಭೋಪಾಲ್​: ಕೊರೊನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳು ಶಾಲಾ-ಕಾಲೇಜು ಆರಂಭ ದಿನಾಂಕವನ್ನು ಮುಂದೂಡುತ್ತಲೇ ಬಂದಿವೆ. ಈಗ ಮಧ್ಯಪ್ರದೇಶ ಸರ್ಕಾರ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಂದಿನ ಮಾರ್ಚ್​​ 31ರವರೆಗೂ ತೆರೆಯದೇ ಇರಲು ನಿರ್ಧರಿಸಿದೆ.

ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಈ ರೀತಿಯ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, “1 ರಿಂದ 8ನೇ ತರಗತಿಯವರಿಗೆ ಮಾರ್ಚ್​ವರೆಗೂ ಶಾಲೆ ಇರುವುದಿಲ್ಲ. ಅವರು ಸಿದ್ಧಪಡಿಸಿದ ಪ್ರಾಜೆಕ್ಟ್​​ಗಳ ಆಧಾರದ ಮೇಲೆ ಮಾರ್ಕ್ಸ್​​ ನೀಡಲಾಗುತ್ತದೆ,” ಎಂದಿದ್ದಾರೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಶೀಘ್ರವೇ ತರಗತಿಗಳು ಆರಂಭಗೊಳ್ಳಲಿವೆಯಂತೆ. ” 10 ಹಾಗೂ 12ನೇ ವರ್ಗದವರಿಗೆ ಶಾಲೆ ಆರಂಭಿಸುತ್ತೇವೆ. ಮಾರ್ಚ್​ ಅಥವಾ ಏಪ್ರಿಲ್​ನಲ್ಲಿ ಅವರಿಗೆ ಪರೀಕ್ಷೆ ನಡೆಯಲಿದೆ. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಇನ್ನು, 9 ಹಾಗೂ 11ನೇ ವರ್ಗದವರಿಗೂ ತರಗತಿ ಇರಲಿದೆ. ಆದರೆ, ಅವರು ವಾರದಲ್ಲಿ ಒಂದು ಅಥವಾ ಎರಡು ದಿನ ಮಾತ್ರ ತರಗತಿಗೆ ಬಂದರೆ ಸಾಕು,” ಎಂದು ಚೌಹಾಣ್​ ತಿಳಿಸಿದ್ದಾರೆ.

ಕೊರೊನಾ ವೈರಸ್​​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಶಾಲಾ-ಕಾಲೇಜು ಆರಂಭವಾದರೂ ಮಕ್ಕಳನ್ನು ಪಾಲಕರು ಕಳುಹಿಸುತ್ತಿಲ್ಲ. ಈ ಕಾರಣಕ್ಕೆ  ಶಾಲಾ ಕಾಲೇಜು ಆರಂಭ ದಿನಾಂಕವನ್ನು ಮಧ್ಯಪ್ರದೇಶ ಸರ್ಕಾರ ಮುಂದೂಡುತ್ತಲೇ ಬಂದಿತ್ತು. ಈಗ ಅದನ್ನು ಮಾರ್ಚ್​ವರೆಗೆ ಮುಂದೂಡುವ ಮೂಲಕ ಪಾಲಕರಿಗೆ ನೆಮ್ಮದಿ ನೀಡಿದೆ.

ಶಾಲಾ ಶುಲ್ಕ ಪಾವತಿಸದಿದ್ರೆ ಆನ್​ಲೈನ್ ಕ್ಲಾಸ್ ಬಂದ್ ಮಾಡ್ತೀವಿ.. ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಧಮ್ಕಿ

Published On - 2:50 pm, Sat, 5 December 20

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?