AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ತಮ್ಮ ಜತೆ ಅನುಚಿತವಾಗಿ ನಡೆದುಕೊಂಡಿರುವ ಬಗ್ಗೆ ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಭವ್ ಕುಮಾರ್ ಎಫ್​​​ಐಆರ್​ ಕೂಡ ದಾಖಲಾಗಿತ್ತು. ಇದೀಗ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಬಂಧನ
ಅಕ್ಷಯ್​ ಪಲ್ಲಮಜಲು​​
|

Updated on:May 18, 2024 | 1:20 PM

Share

ದೆಹಲಿ, ಮೇ.18: ಎಎಪಿ ಸಂಸದೆ ಸ್ವಾತಿ ಮಲಿವಾಲ್ (MP Swati Maliwal) ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಮೇ 13ರಂದು ಸ್ವಾತಿ ಮಲಿವಾಲ್ ಅರವಿಂದ್ ಕೇಜ್ರಿವಾಲ್​ರನ್ನು ಭೇಟಿಯಾಗಲು ನಿವಾಸಕ್ಕೆ ಬಂದಿದ್ದರು. ಡ್ರಾಯಿಂಗ್​ ರೂಮ್​ನಲ್ಲಿ ಕಾಯುತ್ತಿರುವಾಗ ವಿಭವ್ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸ್ವಾತಿ ದೂರಿನಲ್ಲಿ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಮೂರು ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ನೀಡುವಂತೆ ಹೇಳಿದೆ. ವರದಿಯನ್ನು ಸಿದ್ಧಪಡಿಸುವಂತೆ ಸಂಬಂಧ ಹೆಚ್ಚುವರಿ ಪೊಲೀಸ್​ ಆಯುಕ್ತ ಪಿಎಸ್​ ಕುಶ್ವಾಹ ನೇತೃತ್ವದ ದ್ವಿಸದಸ್ಯರ ತಂಡ ದೆಹಲಿಯಲ್ಲಿರುವ ಸ್ವಾತಿ ಮಲಿವಾಲ್ ನಿವಾಸಕ್ಕೆ ಭೇಟಿ ನೀಡಿದ್ದು, ಮೇ 13ರಂದು ನಡೆದ ಘಟನೆಯನ್ನು ಸಂಪೂರ್ಣವಾಗಿ ಸ್ವಾತಿ ಪಡೆದುಕೊಂಡಿತ್ತು. ಅವರ ಹೇಳಿಕೆ ಆಧಾರದ ಮೇಲೆ ಅರವಿಂದ್​​​ ಆಪ್ತ ಕಾರ್ಯದರ್ಶಿ ವಿಭವ್ ಅವರನ್ನು ಬಂಧಿಸಲಾಗಿದೆ.

7-8 ಬಾರಿ ಕಪಾಳಮೋಕ್ಷ, ಎದೆ, ಹೊಟ್ಟೆಗೆ ಒದೆದಿದ್ದಾನೆ

ತನ್ನ ಮೇಲೆ ಹಲ್ಲೆ ಮಾಡಿದ ಬಗ್ಗೆ ದೆಹಲಿ ಪೊಲೀಸರಿಗೆ ವಿಸ್ತಾರವಾಗಿ ವಿವರಿಸಿದ್ದಾರೆ. ನನ್ನ ಮೇಲೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ, ನನ್ನನ್ನು ಎಳೆದೊಯ್ದು ಎದೆಗೆ ಒದೆದಿದ್ದಾನೆ ಎಂದು ಸ್ವಾತಿ ಮಲಿವಾಲ್ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಮನೆ ಭೇಟಿ ನೀಡಿದಾಗ ನನ್ನನ್ನೂ ರೂಮ್​​ ಒಂದರಲ್ಲಿ ಕಾಯುವಂತೆ ಹೇಳಿದ್ದಾರೆ. ಈ ವೇಳೆ ವಿಭವ್ ಕುಮಾರ್​​ ಬಂದು ಕೆಟ್ಟದಾಗಿ ಬೈದು ಏಳೆಂಟು ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನನ್ನ ಎದೆ, ಹೊಟ್ಟೆ ಮತ್ತು ಸೂಕ್ಷ್ಮ ಭಾಗಗಳಿಗೆ ಹೊಡೆದಿದ್ದಾನೆ ಎಂದು ಹೇಳಿದ್ದಾರೆ.

ಈ ಸಮಯದಲ್ಲಿ ನನ್ನನ್ನೂ ಬಿಡುವಂತೆ ಬೇಡಿಕೊಂಡಿದ್ದೇನೆ. ಅದರ ಆತ ನನ್ನನ್ನೂ ಬಿಡದೆ ನಿರಂತರವಾಗಿ ನನ್ನ ಮೇಲೆ ದಾಳಿ ನಡೆಸಿದ್ದಾನೆ. ನಾನು ನಿನ್ನನ್ನೂ ಸುಮ್ಮನೆ ಬಿಡುವುದಿಲ್ಲ ಎಂದೆಲ್ಲ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ. ಆತನ ಕಾಲಿಗೆ ಬಿದ್ದು ಬಿಡುವಂತೆ ಕೇಳಿಕೊಂಡರು ನನಗೆ ಥಳಿಸಿದ್ದಾನೆ ಎಂದು ಪೊಲೀಸ್​​​ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಜತೆ ನಡೆದಿದ್ದು ತುಂಬಾ ಕೆಟ್ಟ ಘಟನೆ, ಕಳೆದ ಕೆಲ ದಿನಗಳು ತುಂಬಾ ಕಷ್ಟಕರವಾಗಿತ್ತು: ಸಂಸದೆ ಸ್ವಾತಿ ಮಲಿವಾಲ್

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ವೈರಲ್​​:

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವೊಂದು ವೈರಲ್​​ ಆಗಿದೆ. ಸಿಎಂ ಅರವಿಂದ್​​ ಕೇಜ್ರಿವಾಲ್​​​ ಮನೆಗೆ ಭೇಟಿ ನೀಡಿದಾಗ ನಡೆದ ಜಗಳದ ಬಗ್ಗೆ ಒಂದು ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೊದಲ್ಲಿ ಸ್ವಾತಿ ಮಲಿವಾಲ್ ಅವರನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿಗಳು ಅವರನ್ನು ಒತ್ತಾಯಿಸುತ್ತಾರೆ. ಸ್ವಾತಿ ಮಲಿವಾಲ್ ಮತ್ತು ಅವರ ಮಧ್ಯೆ ಜಗಳಗಳು ನಡೆಯುತ್ತದೆ. ಭದ್ರತಾ ಸಿಬ್ಬಂದಿ ನೀವು ಇಲ್ಲಿಂದ ಹೊರಗೆ ಹೋಗಿ ಎಂದು ಹೇಳಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು, ಇದಕ್ಕೆ ಪ್ರತಿಕ್ರಿಯಿಸಿದ ಸ್ವಾತಿ ಮಲಿವಾಲ್ ನಾನು ಹೋಗುವುದಿಲ್ಲ ಎಂದು ಕೋಪದಲ್ಲಿ ಹೇಳುತ್ತಾರೆ. ನನ್ನ ಮೇಲೆ ನೀವು ದರ್ಪ ತೋರಿಸುತ್ತಿದ್ದೀರಾ ನಾನು ಪೊಲೀಸರಿಗೆ ದೂರು ನೀಡುವೇ, ನಾನು ಬಂದಿರುವ ಕೆಲಸವನ್ನು ಮುಗಿಸಿ ಹೋಗುವುದು. ಇದನ್ನು ಜನರಿಗೆ ತಿಳಿಸುತ್ತೇನೆ ಎಂದು ಹೇಳುತ್ತಾರೆ. ಈ ಎಲ್ಲ ನಾಟಕ ಇಲ್ಲಿ ನಡೆಯುವುದಿಲ್ಲ, ಈಗ ನಮ್ಮ ಜತೆಗೆ ಬನ್ನಿ ಎಂದು ಭದ್ರತಾ ಸಿಬ್ಬಂದಿ ಹೇಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:54 pm, Sat, 18 May 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?