AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಸೆಂಜರ್ ಆರ್​ಎನ್​ಎ ಕೊವಿಡ್ ಲಸಿಕೆಯಿಂದ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಬಹುದು; ಅಮೆರಿಕದ ವಿಜ್ಞಾನಿ ಎಚ್ಚರಿಕೆ

ಕೊವಿಡ್ ಲಸಿಕೆಗಳು ಹಠಾತ್ ಹೃದಯ ಸಂಬಂಧಿ ಸಾವನ್ನು ಉಂಟುಮಾಡಬಹುದು. ಇದಕ್ಕೆ ಪೂರಕವಾಗಿ ಶವಪರೀಕ್ಷೆಯ ಅಧ್ಯಯನಗಳನ್ನು ಮಾಡಲಾಗಿದೆ ಎಂದು ಲೂಸಿಯಾನಾದ ಕ್ಲಿನಿಕಲ್ ವಿಜ್ಞಾನಿ ಜೋಸೆಫ್ ಫ್ರೈಮನ್ ಹೇಳಿದ್ದಾರೆ.

ಮೆಸೆಂಜರ್ ಆರ್​ಎನ್​ಎ ಕೊವಿಡ್ ಲಸಿಕೆಯಿಂದ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಬಹುದು; ಅಮೆರಿಕದ ವಿಜ್ಞಾನಿ ಎಚ್ಚರಿಕೆ
ಅಮೆರಿಕದ ಸಂಶೋಧಕ ಜೋಸೆಫ್ ಫ್ರೈಮನ್ Image Credit source: Times of India
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 09, 2023 | 7:56 PM

ನವದೆಹಲಿ: ಮೆಸೆಂಜರ್ ಆರ್​ಎನ್​ಎ (mRNA) ಕೊವಿಡ್​-19 ಲಸಿಕೆಯಿಂದ ಹಠಾತ್ ಹೃದಯಾಘಾತದ ಸಾವುಗಳು ಸೇರಿದಂತೆ ಜನರಲ್ಲಿ ಗಂಭೀರ ಸಮಸ್ಯೆಗಳು ಉಂಟಾಗಬಹುದು ಎಂದು ಲೂಸಿಯಾನಾದ ಕ್ಲಿನಿಕಲ್ ವಿಜ್ಞಾನಿ ಜೋಸೆಫ್ ಫ್ರೈಮನ್ ಹೇಳಿದ್ದಾರೆ. ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ mRNA COVID-19 ಲಸಿಕೆಗಾಗಿ ಫಿಜರ್ ಮತ್ತು ಮಾಡರ್ನಾ ಪ್ರಯೋಗಗಳನ್ನು ಮರು-ವಿಶ್ಲೇಷಣೆ ಮಾಡಿದ್ದಾರೆ.

ಮತ್ತೊಂದು ಅಧ್ಯಯನವನ್ನು ಉಲ್ಲೇಖಿಸಿರುವ ಅವರು, ಕೊವಿಡ್ ಲಸಿಕೆಗಳು ಹಠಾತ್ ಹೃದಯ ಸಂಬಂಧಿ ಸಾವನ್ನು ಉಂಟುಮಾಡಬಹುದು. ಇದಕ್ಕೆ ಪೂರಕವಾಗಿ ಶವಪರೀಕ್ಷೆಯ ಅಧ್ಯಯನಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಅಧಿಕ mRNAಗಳ ಲಸಿಕೆಯನ್ನು ತೆಗೆದುಕೊಳ್ಳುವ ರಾಷ್ಟ್ರಗಳು ಹೆಚ್ಚಿನ ಮರಣದ ಹೆಚ್ಚಿನ ದರಗಳ ಪರಸ್ಪರ ಸಂಬಂಧವನ್ನು ಹೊಂದಿವೆ. ಈ ಮರಣದ ಕಾರಣ ತಿಳಿದಿಲ್ಲವಾದರೂ, ಈ ಡೇಟಾವನ್ನು ವಿಶ್ಲೇಷಿಸುವ ಸಂಶೋಧಕರು ಲಸಿಕೆಗಳನ್ನು ಹೊರತುಪಡಿಸಿ ಹೆಚ್ಚುವರಿ ಸಾವಿನ ಯಾವುದೇ ಕಾರಣವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Covid-19 4th Wave: ಚೀನಾದ ಹೊಸ ಕೊವಿಡ್ ರೂಪಾಂತರಿ ಮನುಷ್ಯನ ಮೆದುಳಿನ ಮೇಲೆ ದಾಳಿ ಮಾಡುತ್ತದಾ?; ತಜ್ಞರು ಹೇಳೋದಿಷ್ಟು

ಮತ್ತೊಂದು ಟ್ವೀಟ್‌ನಲ್ಲಿ ಅವರು, ಅಮೆರಿಕಾದ ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್‌ಡಿಎ) ಪ್ರಕಟಿಸಿದ ಅಧ್ಯಯನದ ದತ್ತಾಂಶವು ಫಿಜರ್ ಕೋವಿಡ್ ಲಸಿಕೆ ಶ್ವಾಸಕೋಶದ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಶೇ. 50ರಷ್ಟು ಹೆಚ್ಚಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಭಾರತದಲ್ಲಿ ಬೂಸ್ಟರ್ ಡೋಸ್:

ಒಮಿಕ್ರಾನ್ ವೈರಸ್​ನ​ ರೂಪಾಂತರಿಯಾದ ಬಿಎಎಫ್​ 7 ಭಾರತದಲ್ಲಿ ಪತ್ತೆಯಾದ ಬಳಿಕ ಹಲವು ಎಚ್ಚರಿಕೆ ನಿಯಮಗಳನ್ನು ಘೋಷಿಸಲಾಗಿದೆ. ಮಾಸ್ಕ್​, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದೆ. ಈ ಮಧ್ಯೆ ಬೂಸ್ಟರ್​ ಡೋಸ್​ ಆಗಿ ಸೀರಂ ಸಂಸ್ಥೆ ತಯಾರಿಸಿದ ಕೊವೊವ್ಯಾಕ್ಸ್​ ಲಸಿಕೆಗೆ ಅನುಮೋದನೆ ಕೋರಿದೆ. ಭಾರತದಲ್ಲಿ ಕೊರೊನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 170 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೊವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,80,094ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,721ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಂದು ಕೊವಿಡ್ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,371ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 221 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 44147002ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ 85,282 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೂ 91,21,92,538 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ