AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ತಂದೆ, ತಾಯಿ ಇಬ್ಬರಿಗೂ ಕೊರೊನಾ ಪಾಸಿಟಿವ್​; ರಾಂಚಿಯ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು

ಎಂ.ಎಸ್​.ಧೋನಿ ತಂದೆ ಪಾನ್​ ಸಿಂಗ್ ಹಾಗೂ ತಾಯಿ ದೇವಿಕಾ ದೇವಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರಿಗೂ ರಾಂಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಧೋನಿ ತಂದೆ, ತಾಯಿ ಇಬ್ಬರಿಗೂ ಕೊರೊನಾ ಪಾಸಿಟಿವ್​; ರಾಂಚಿಯ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು
ಎಂ.ಎಸ್.ಧೋನಿ
Skanda
|

Updated on: Apr 21, 2021 | 11:07 AM

Share

ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರ ತಂದೆ, ತಾಯಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ದೇಶದೆಲ್ಲೆಡೆ ಅತ್ಯಂತ ವೇಗವಾಗಿ ಹಬ್ಬುತ್ತಿರುವ ಕೊರೊನಾ ಸೋಂಕಿನ ಎರಡನೇ ಅಲೆ ಜನಜೀವನವನ್ನು ಮತ್ತೆ ಅಲ್ಲೋಲಕಲ್ಲೋಲಗೊಳಿಸಿದ್ದು, ಜನಸಾಮಾನ್ಯರಿಂದ ಅತಿ ಗಣ್ಯರ ತನಕ ಎಲ್ಲರೂ ಸೋಂಕಿಗೆ ತತ್ತರಿಸಿದ್ದಾರೆ. ಇದೀಗ ಕ್ರಿಕೆಟಿಗ ಧೋನಿ ಅವರ ತಂದೆ, ತಾಯಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿರುವುದು ತಿಳಿದುಬಂದಿದೆ.

ಎಂ.ಎಸ್​.ಧೋನಿ ತಂದೆ ಪಾನ್​ ಸಿಂಗ್ ಹಾಗೂ ತಾಯಿ ದೇವಿಕಾ ದೇವಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರಿಗೂ ರಾಂಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಧೋನಿ ಐಪಿಎಲ್ 14ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದು, ಇಂದು ಈ ಆವೃತ್ತಿಯ 15ನೇ ಪಂದ್ಯದಲ್ಲಿ ಚೆನ್ನೈ ತಂಡ ಮುಂಬೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು ಎದುರಿಸಲಿದೆ.

ಸದ್ಯ ಧೋನಿಯ ತಂದೆ, ತಾಯಿ ಇಬ್ಬರಿಗೂ ರಾಂಚಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಳೇನೂ ಆಸ್ಪತ್ರೆ ಕಡೆಯಿಂದ ಲಭ್ಯವಾಗಿಲ್ಲ. ಕಳೆದ ಬಾರಿ ಯುಎಇ ಮೈದಾನಗಳಲ್ಲಿ ನಡೆದ ಐಪಿಎಲ್​ನಲ್ಲಿ ಭಾಗವಹಿಸಿದ ತವರಿಗೆ ವಾಪಾಸಾದ ನಂತರ ಧೋನಿ ಹೆಚ್ಚಿನ ಸಮಯವನ್ನು ತಮ್ಮ ಕುಟುಂಬದೊಂದಿಗೆ ಕಳೆದಿದ್ದರು.

ಇದನ್ನೂ ಓದಿ: ಕೊರೊನಾ ಮೂರನೇ ಬಾರಿಗೆ ರೂಪಾಂತರ; ಅಕ್ಟೋಬರ್​ನಲ್ಲೇ ಸುಳಿವಿದ್ದರೂ ಮೈಮರೆತುಬಿಟ್ಟಿತಾ ಭಾರತ? 

ಹೃದಯ ಸಂಬಂಧಿ ಚಿಕಿತ್ಸೆಗಾಗಿ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!