AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ತಂದೆ, ತಾಯಿ ಇಬ್ಬರಿಗೂ ಕೊರೊನಾ ಪಾಸಿಟಿವ್​; ರಾಂಚಿಯ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು

ಎಂ.ಎಸ್​.ಧೋನಿ ತಂದೆ ಪಾನ್​ ಸಿಂಗ್ ಹಾಗೂ ತಾಯಿ ದೇವಿಕಾ ದೇವಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರಿಗೂ ರಾಂಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಧೋನಿ ತಂದೆ, ತಾಯಿ ಇಬ್ಬರಿಗೂ ಕೊರೊನಾ ಪಾಸಿಟಿವ್​; ರಾಂಚಿಯ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು
ಎಂ.ಎಸ್.ಧೋನಿ
Skanda
|

Updated on: Apr 21, 2021 | 11:07 AM

Share

ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರ ತಂದೆ, ತಾಯಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ದೇಶದೆಲ್ಲೆಡೆ ಅತ್ಯಂತ ವೇಗವಾಗಿ ಹಬ್ಬುತ್ತಿರುವ ಕೊರೊನಾ ಸೋಂಕಿನ ಎರಡನೇ ಅಲೆ ಜನಜೀವನವನ್ನು ಮತ್ತೆ ಅಲ್ಲೋಲಕಲ್ಲೋಲಗೊಳಿಸಿದ್ದು, ಜನಸಾಮಾನ್ಯರಿಂದ ಅತಿ ಗಣ್ಯರ ತನಕ ಎಲ್ಲರೂ ಸೋಂಕಿಗೆ ತತ್ತರಿಸಿದ್ದಾರೆ. ಇದೀಗ ಕ್ರಿಕೆಟಿಗ ಧೋನಿ ಅವರ ತಂದೆ, ತಾಯಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿರುವುದು ತಿಳಿದುಬಂದಿದೆ.

ಎಂ.ಎಸ್​.ಧೋನಿ ತಂದೆ ಪಾನ್​ ಸಿಂಗ್ ಹಾಗೂ ತಾಯಿ ದೇವಿಕಾ ದೇವಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇಬ್ಬರಿಗೂ ರಾಂಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಧೋನಿ ಐಪಿಎಲ್ 14ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದು, ಇಂದು ಈ ಆವೃತ್ತಿಯ 15ನೇ ಪಂದ್ಯದಲ್ಲಿ ಚೆನ್ನೈ ತಂಡ ಮುಂಬೈನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು ಎದುರಿಸಲಿದೆ.

ಸದ್ಯ ಧೋನಿಯ ತಂದೆ, ತಾಯಿ ಇಬ್ಬರಿಗೂ ರಾಂಚಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿಗಳೇನೂ ಆಸ್ಪತ್ರೆ ಕಡೆಯಿಂದ ಲಭ್ಯವಾಗಿಲ್ಲ. ಕಳೆದ ಬಾರಿ ಯುಎಇ ಮೈದಾನಗಳಲ್ಲಿ ನಡೆದ ಐಪಿಎಲ್​ನಲ್ಲಿ ಭಾಗವಹಿಸಿದ ತವರಿಗೆ ವಾಪಾಸಾದ ನಂತರ ಧೋನಿ ಹೆಚ್ಚಿನ ಸಮಯವನ್ನು ತಮ್ಮ ಕುಟುಂಬದೊಂದಿಗೆ ಕಳೆದಿದ್ದರು.

ಇದನ್ನೂ ಓದಿ: ಕೊರೊನಾ ಮೂರನೇ ಬಾರಿಗೆ ರೂಪಾಂತರ; ಅಕ್ಟೋಬರ್​ನಲ್ಲೇ ಸುಳಿವಿದ್ದರೂ ಮೈಮರೆತುಬಿಟ್ಟಿತಾ ಭಾರತ? 

ಹೃದಯ ಸಂಬಂಧಿ ಚಿಕಿತ್ಸೆಗಾಗಿ ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್