AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ತ ಸೇರಿ ಬೇಸಿಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಶೇ 62ರಷ್ಟು ಹೆಚ್ಚಳ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಸಾಮಾನ್ಯವಾಗಿ ಕೇಂದ್ರ ಸರ್ಕಾರವು ಪ್ರತಿ 2 ವರ್ಷಗಳಿಗೆ ಒಮ್ಮೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುತ್ತದೆ. ಚಳಿಗಾಲದ ಬಿತ್ತನೆಗೂ ಮುನ್ನ ಮತ್ತು ಬೇಸಿಗೆ ಬೆಳೆಗಳ ಕೊಯ್ಲಿನ ಅವಧಿಯಲ್ಲಿ ಈ ಘೋಷಣೆ ಹೊರಬೀಳುವುದು ವಾಡಿಕೆ.

ಭತ್ತ ಸೇರಿ ಬೇಸಿಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಶೇ 62ರಷ್ಟು ಹೆಚ್ಚಳ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
ಗ್ರಾಮೀಣ ಆರ್ಥಿಕತೆಯ ಜೀವನಾಡಿ ಕೃಷಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 09, 2021 | 6:21 PM

ದೆಹಲಿ: ಬೇಸಿಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಶೇ 62ರಷ್ಟು ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಚಿವ ಸಂಪುಟ ಬುಧವಾರ ತೆಗೆದುಕೊಂಡಿದೆ. ಬೆಳೆ ಉತ್ಪಾದನೆಗೆ ಆಗಿರುವ ಖರ್ಚಿನ ಮೇಲೆ ಶೇ 50ರಷ್ಟು ಹೆಚ್ಚುವರಿ ದರ ಸಿಗುವಂತೆ ಮಾಡಬೇಕು ಎಂಬ ಕೇಂದ್ರದ ನಿರ್ಧಾರಕ್ಕೆ ಅನುಗುಣವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೊಮಾರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಸಾಮಾನ್ಯವಾಗಿ ಕೇಂದ್ರ ಸರ್ಕಾರವು ಪ್ರತಿ 2 ವರ್ಷಗಳಿಗೆ ಒಮ್ಮೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುತ್ತದೆ. ಚಳಿಗಾಲದ ಬಿತ್ತನೆಗೂ ಮುನ್ನ ಮತ್ತು ಬೇಸಿಗೆ ಬೆಳೆಗಳ ಕೊಯ್ಲಿನ ಅವಧಿಯಲ್ಲಿ ಈ ಘೋಷಣೆ ಹೊರಬೀಳುವುದು ವಾಡಿಕೆ. ಖಾಸಗಿ ವ್ಯಾಪಾರಿಗಳಿಗೆ ಕನಿಷ್ಠ ಎಷ್ಟು ಬೆಲೆಗೆ ಬೆಳೆಗಳನ್ನು ಖರೀದಿಸಬೇಕು ಎಂಬ ಸೂಚನೆ ನೀಡಲು ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತದೆ. ಸರ್ಕಾರಿ ಸ್ವಾಮ್ಯದ ಭಾರತೀಯ ಆಹಾರ ನಿಗಮದ ಮೂಲಕ ಭಾರಿ ಪ್ರಮಾಣದ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬಲೆ ನೀಡಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಧಾನ್ಯಗಳನ್ನು ಪಡಿತರ ವಿತರಣೆ ವ್ಯವಸ್ಥೆ ಮೂಲಕ ಸಾರ್ವಜನಿಕರಿಗೆ ತಲುಪಿಸಲಾಗುತ್ತಿದೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಜಾರಿ ಮಾಡಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಅವಿರತ ಹೋರಾಟಗಳ ಮಧ್ಯೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಪ್ರತಿಭಟನಾನಿರತ ರೈತರ ಜೊತೆಗಿನ ಮಾತುಕತೆಗೆ ಸರ್ಕಾರ ಈಗಲೂ ಸಿದ್ಧವಿದೆ. ಸಂಧಾನದ ಬಾಗಿಲನ್ನು ನಾವು ಮುಚ್ಚಿಲ್ಲ. ಈವರೆಗೆ 11 ಸುತ್ತುಗಳ ಮಾತುಕತೆ ನಡೆದಿದೆ. ಈ ಕಾನೂನುಗಳ ಬಗ್ಗೆ ರೈತರು ತಮ್ಮ ನಿರ್ದಿಷ್ಟ ಆಕ್ಷೇಪಗಳನ್ನು ತಿಳಿಸಬೇಕು. ಆದರೆ ಈವರೆಗೆ ವಿರೋಧಪಕ್ಷದ ನಾಯಕರಾಗಲಿ, ರೈತರಾಗಲಿ ನಿರ್ದಿಷ್ಟ ಅಂಶವನ್ನು ನಮ್ಮ ಮುಂದೆ ತಂದಿಲ್ಲ ಎಂದು ತೊಮಾರ್ ಹೇಳಿದರು.

ಭತ್ತದ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್​ಗೆ ₹ 1869ರಿಂದ ₹ 1940ಕ್ಕೆ ಹೆಚ್ಚಿಸಲಾಗಿದೆ. ಜೋಳ ಮತ್ತು ಬಾಜ್ರಾ ಧಾರಣೆಯನ್ನು ₹118ರಷ್ಟು ಹೆಚ್ಚಿಸಲಾಗಿದೆ. ಈ ಹಿಂದೆ ಒಂದು ಕ್ವಿಂಟಲ್​ ಬಾಜ್ರಾಕ್ಕೆ ₹ 2,738 ದರವಿತ್ತು. ಈಗ ಇದನ್ನು ₹ 2,250ಕ್ಕೆ ಹೆಚ್ಚಿಸಲಾಗಿದೆ. ಕಾಳುಗಳ ಧಾರಣೆಯನ್ನು ₹300ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಒಂದು ಕ್ವಿಂಟಲ್ ದ್ವಿದಳ ಧಾನ್ಯಕ್ಕೆ ₹ 6300 ಧಾರಣೆ ಇರುತ್ತದೆ.

(MSP for Paddy and other crops increased Govt hikes Minimum Support Price for various kharif crops)

ಇದನ್ನೂ ಓದಿ: ಕನಿಷ್ಠ ಬೆಂಬಲ ಬೆಲೆ, ರೈತರ ಅನಿಶ್ಚಿತ ಆದಾಯ, ಎಪಿಎಂಸಿ ಬಗ್ಗೆ ಪ್ರಕಾಶ್ ಕಮ್ಮರಡಿ ಎಕ್ಸ್​ಕ್ಲೂಸಿವ್ ಸಂದರ್ಶನ

ಇದನ್ನೂ ಓದಿ: ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ ಎಂದು ಅಂಕಿ-ಅಂಶಗಳ ಜತೆಗೆ ಸರ್ಕಾರದ ವಿರುದ್ಧ ಯೋಗೇಂದ್ರ ಯಾದವ್ ಕಿಡಿ

Published On - 6:20 pm, Wed, 9 June 21

ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ