AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೈಕ್ಷಣಿಕ ಒತ್ತಡ ತಾಳಲಾರದೇ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ

ಎಮ್‌ಬಿಎ ವಿದ್ಯಾರ್ಥಿ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಮಲಾಡ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ಶೈಕ್ಷಣಿಕ ಒತ್ತಡ ಎಂದು ಪೋಲೀಸ್ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಶೈಕ್ಷಣಿಕ ಒತ್ತಡ ತಾಳಲಾರದೇ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ
7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ
ಅಕ್ಷತಾ ವರ್ಕಾಡಿ
|

Updated on: Jul 28, 2024 | 12:12 PM

Share

ಮುಂಬೈ: ಶೈಕ್ಷಣಿಕ ಒತ್ತಡ ತಾಳಲಾರದೇ ವಿದ್ಯಾರ್ಥಿಯೊರ್ವ 7ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಮುಂಬೈನ ಪಶ್ಚಿಮ ಮಲಾಡ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಧ್ರುವಿಲ್ ವೋರಾ(22) ಮೊದಲ ವರ್ಷದ ಎಮ್‌ಬಿಎ ವ್ಯಾಸಾಂಗ ಮಾಡುತ್ತಿದ್ದು, ಶುಕ್ರವಾರ(ಜು.26) ಸಂಜೆ 7 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಚ್‌ಪಾಡಾ ಎಂಬ ಪ್ರದೇಶದಲ್ಲಿರುವ ತಮ್ಮ ವಸತಿ ಕಟ್ಟಡ ವಾಸುದೇವಂನ 7 ನೇ ಮಹಡಿಯಿಂದ ಜಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಶೈಕ್ಷಣಿಕ ಒತ್ತಡ ಎಂದು ಪೋಲೀಸ್ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೂ ಮುನ್ನ ಮನೆಗೆ ಬಂದು ತಾಯಿ ಮತ್ತು ಸಹೋದರಿಯೊಂದಿಗೆ ಸಾಮಾನ್ಯವಾಗಿ ಮಾತನಾಡಿದ್ದ ಧ್ರುವಿಲ್, ಬಳಿಕ ಕೆಲಸಕ್ಕಾಗಿ ಹೊರಗೆ ಹೋಗಿದ್ದ ತನ್ನ ತಂದೆಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ. ಕೆಲ ಹೊತ್ತಿನ ನಂತರ ಸ್ಕೂಟರ್ ರಿಪೇರಿಗಾಗಿ ತೆಗೆದುಕೊಂಡು ಹೋಗುವ ನೆಪದಲಿ ಮನೆಯಿಂದ ಹೊರಟು, ಸೀದಾ ಕಟ್ಟಡದ ಏಳನೇ ಮಹಡಿಗೆ ಹೋಗಿ ಜಿಗಿದಿದ್ದಾರೆ.

ಇದನ್ನೂ ಓದಿ: ಕ್ಲಾಸ್​​ ರೂಮ್​​ನಲ್ಲೇ ನಿದ್ದೆಗೆ ಜಾರಿದ ಶಿಕ್ಷಕಿ, ಬೀಸಣಿಗೆಯಿಂದ ಗಾಳಿ ಹಾಕಿದ ಪುಟ್ಟ ಮಕ್ಕಳು: ವಿಡಿಯೋ ನೋಡಿ

ಪೋಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ ಧ್ರುವಿಲ್ ಶೈಕ್ಷಣಿಕ ಒತ್ತಡದಲ್ಲಿದ್ದರು ಎಂದು ತಿಳಿದುಬಂದಿದ್ದು,ಅವರ ಮನೆಯಲ್ಲಿ ಯಾವುದೇ ಆತ್ಮಹತ್ಯೆಯ ಪತ್ರ ಕಂಡುಬಂದಿಲ್ಲ. ಆತ್ಮಹತ್ಯೆ ಬೆಳಕಿಗೆ ಬಂದ ಕೂಡಲೇ ಧ್ರುವಿಲ್ ಕುಟುಂಬವು ಆತನನ್ನು ಪಶ್ಚಿಮ ಕಂಡಿವಲಿಯ ತುಂಗಾ ಆಸ್ಪತ್ರೆಗೆ ಒಯ್ದಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದು ತಿಳಿದುಬಂದಿದೆ. ಮಲಾಡ್ ಪೊಲೀಸರು ಶುಕ್ರವಾರ ಆಕಸ್ಮಿಕ ಸಾವಿನ ಎಂದು ವರದಿಯನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್