AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೈಕ್ಷಣಿಕ ಒತ್ತಡ ತಾಳಲಾರದೇ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ

ಎಮ್‌ಬಿಎ ವಿದ್ಯಾರ್ಥಿ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಮಲಾಡ್ ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ಶೈಕ್ಷಣಿಕ ಒತ್ತಡ ಎಂದು ಪೋಲೀಸ್ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಶೈಕ್ಷಣಿಕ ಒತ್ತಡ ತಾಳಲಾರದೇ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ
7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ MBA ವಿದ್ಯಾರ್ಥಿ
ಅಕ್ಷತಾ ವರ್ಕಾಡಿ
|

Updated on: Jul 28, 2024 | 12:12 PM

Share

ಮುಂಬೈ: ಶೈಕ್ಷಣಿಕ ಒತ್ತಡ ತಾಳಲಾರದೇ ವಿದ್ಯಾರ್ಥಿಯೊರ್ವ 7ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಮುಂಬೈನ ಪಶ್ಚಿಮ ಮಲಾಡ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಧ್ರುವಿಲ್ ವೋರಾ(22) ಮೊದಲ ವರ್ಷದ ಎಮ್‌ಬಿಎ ವ್ಯಾಸಾಂಗ ಮಾಡುತ್ತಿದ್ದು, ಶುಕ್ರವಾರ(ಜು.26) ಸಂಜೆ 7 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಚ್‌ಪಾಡಾ ಎಂಬ ಪ್ರದೇಶದಲ್ಲಿರುವ ತಮ್ಮ ವಸತಿ ಕಟ್ಟಡ ವಾಸುದೇವಂನ 7 ನೇ ಮಹಡಿಯಿಂದ ಜಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಶೈಕ್ಷಣಿಕ ಒತ್ತಡ ಎಂದು ಪೋಲೀಸ್ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೂ ಮುನ್ನ ಮನೆಗೆ ಬಂದು ತಾಯಿ ಮತ್ತು ಸಹೋದರಿಯೊಂದಿಗೆ ಸಾಮಾನ್ಯವಾಗಿ ಮಾತನಾಡಿದ್ದ ಧ್ರುವಿಲ್, ಬಳಿಕ ಕೆಲಸಕ್ಕಾಗಿ ಹೊರಗೆ ಹೋಗಿದ್ದ ತನ್ನ ತಂದೆಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ. ಕೆಲ ಹೊತ್ತಿನ ನಂತರ ಸ್ಕೂಟರ್ ರಿಪೇರಿಗಾಗಿ ತೆಗೆದುಕೊಂಡು ಹೋಗುವ ನೆಪದಲಿ ಮನೆಯಿಂದ ಹೊರಟು, ಸೀದಾ ಕಟ್ಟಡದ ಏಳನೇ ಮಹಡಿಗೆ ಹೋಗಿ ಜಿಗಿದಿದ್ದಾರೆ.

ಇದನ್ನೂ ಓದಿ: ಕ್ಲಾಸ್​​ ರೂಮ್​​ನಲ್ಲೇ ನಿದ್ದೆಗೆ ಜಾರಿದ ಶಿಕ್ಷಕಿ, ಬೀಸಣಿಗೆಯಿಂದ ಗಾಳಿ ಹಾಕಿದ ಪುಟ್ಟ ಮಕ್ಕಳು: ವಿಡಿಯೋ ನೋಡಿ

ಪೋಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ ಧ್ರುವಿಲ್ ಶೈಕ್ಷಣಿಕ ಒತ್ತಡದಲ್ಲಿದ್ದರು ಎಂದು ತಿಳಿದುಬಂದಿದ್ದು,ಅವರ ಮನೆಯಲ್ಲಿ ಯಾವುದೇ ಆತ್ಮಹತ್ಯೆಯ ಪತ್ರ ಕಂಡುಬಂದಿಲ್ಲ. ಆತ್ಮಹತ್ಯೆ ಬೆಳಕಿಗೆ ಬಂದ ಕೂಡಲೇ ಧ್ರುವಿಲ್ ಕುಟುಂಬವು ಆತನನ್ನು ಪಶ್ಚಿಮ ಕಂಡಿವಲಿಯ ತುಂಗಾ ಆಸ್ಪತ್ರೆಗೆ ಒಯ್ದಿದ್ದಾರೆ, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದು ತಿಳಿದುಬಂದಿದೆ. ಮಲಾಡ್ ಪೊಲೀಸರು ಶುಕ್ರವಾರ ಆಕಸ್ಮಿಕ ಸಾವಿನ ಎಂದು ವರದಿಯನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್