AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನರ್ತನದ ನಡುವೆ ದೇಶದಲ್ಲಿ ಮ್ಯೂಕೋಮೈಕೋಸಿಸ್ Mucormycosis ರೋಗ ಪತ್ತೆ

ಈ ಮ್ಯೂಕೋಮೈಕೋಸಿಸ್ Mucormycosis ರೋಗ ಮೂಗು, ಮೆದುಳು, ಶ್ವಾಸಕೋಶವನ್ನು ದುರ್ಬಲಗೊಳಿಸುವ ಜೊತೆಗೆ ಮೂಗಿನ ಸುತ್ತ ಊತ ಹಾಗೂ ಕಣ್ಣಿನ ನೋವು ಕಾಣಿಸಿಕೊಳ್ಳುತ್ತದೆ.

ಕೊರೊನಾ ನರ್ತನದ ನಡುವೆ ದೇಶದಲ್ಲಿ ಮ್ಯೂಕೋಮೈಕೋಸಿಸ್ Mucormycosis ರೋಗ ಪತ್ತೆ
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Dec 16, 2020 | 2:18 PM

Share

ದೆಹಲಿ: ಕೊರೊನಾ ಸೋಂಕಿನ ನರ್ತನದ ನಡುವೆ ಭಾರತದಲ್ಲೂ ಮ್ಯೂಕೋಮೈಕೋಸಿಸ್ Mucormycosis ರೋಗ ಪತ್ತೆಯಾಗಿದೆ. ಹೆಚ್ಚಾಗಿ ಫಂಗಸ್​ನಿಂದ ಬರುವ ರೋಗ ಇದಾಗಿದ್ದು, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರ ಮೇಲೆ ಬೇಗ ಆಕ್ರಮಣ ಮಾಡಿ ಜೀವವನ್ನು ಹಿಂಡುತ್ತದೆ.

ಕೊರೊನಾ ಸೋಂಕಿನಿಂದ ಚೇತರಿಕೆ ಕಂಡವರಿಗೆ ಮತ್ತಷ್ಟು ಅಪಾಯಕ್ಕೆ ಕಾರಣವಾಗುವ ಈ ಭಯಾನಕ ರೋಗ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಹೆಚ್ಚಿದ್ದು. ಈ ಮ್ಯೂಕೋಮೈಕೋಸಿಸ್ ರೋಗಕ್ಕೆ ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡಾ ಬೆಚ್ಚಿ ಬಿದ್ದಿದೆ. ವಯಸ್ಸಾದವರು, ಕೋಮಾರ್ಬಡಿಟಿಯಿಂದ ಬಳಲುವವರು ಈ ರೋಗದಿಂದ ಎಚ್ಚರವಿರಬೇಕು. ಈಗಾಗಲೇ ಹಲವರ ಜೀವವನ್ನು ಬಲಿ ತೆಗೆದುಕೊಂಡಿರುವ ಈ ರಕ್ಕಸ ರೋಗದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಸ್ಟೀರಾಯ್ಡ್ ತೆಗೆದುಕೊಳ್ಳುತ್ತಿದ್ದರೆ ಇದರಿಂದ ಜೀವಕ್ಕೆ ಆಗುವ ಅಪಾಯ ತಪ್ಪಿದ್ದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಮ್ಯೂಕೋಮೈಕೋಸಿಸ್ ರೋಗ ಮೂಗು, ಮೆದುಳು, ಶ್ವಾಸಕೋಶವನ್ನು ದುರ್ಬಲಗೊಳಿಸುವ ಜೊತೆಗೆ ಮೂಗಿನ ಸುತ್ತ ಊತ ಹಾಗೂ ಕಣ್ಣಿನ ನೋವು ಕಾಣಿಸಿಕೊಳ್ಳುತ್ತದೆ. ಹೈಬಿಪಿ, ಶುಗರ್, ಕ್ಯಾನ್ಸರ್, ಕಿಡ್ನಿ, ಶ್ವಾಸಕೋಶ ಸಂಬಂಧಿ ಕಾಯಿಲೆ ಇದ್ದವರ ಮೇಲೆ ಈ ಮ್ಯೂಕೋಮೈಕೋಸಿಸ್ ರೋಗ ಅಟ್ಟಹಾಸ ಮೆರೆಯುವ ಪ್ರಮಾಣ ಹೆಚ್ಚಿದ್ದು, ಇದರ ಬಗ್ಗೆ ಉದಾಸೀನ ತೋರಿದರೆ ಮತ್ತಷ್ಟು ಸಮಸ್ಯೆಗೆ ಕಾರಣವಾಗುವುದರಲ್ಲಿ ಅನುಮಾನವಿಲ್ಲ.

ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರ ಮೇಲೆ ಟಾರ್ಗೆಟ್: ರೋಗ ಹತ್ತಿರ ಸುಳಿಯಬಾರದೆಂದರೆ ರೋಗ ನಿರೋಧಕ ಶಕ್ತಿ ಹೆಚ್ಚಿರಬೇಕು. ಕೊರೊನಾ ಸೋಂಕು ಹೆಚ್ಚು ಪತ್ತೆಯಾಗವುದು ಕೂಡಾ ಈ ರೋಗ ನಿರೋಧಕ ಶಕ್ತಿ ಕಡಿಮೆಯಾದರಲ್ಲಿ. ಅದರಂತೆ ಈ ಹೆಮ್ಮಾರಿ ಮ್ಯೂಕೋಮೈಕೋಸಿಸ್ ರೋಗವು ಕೂಡಾ ಅಂತವರನ್ನೆ ಟಾರ್ಗೆಟ್ ಮಾಡುತ್ತದೆ. ಅಲ್ಲದೇ ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ ಈ ಮ್ಯೂಕೋಮೈಕೋಸಿಸ್ ಕಡಿಮೆ ಸಮಯದಲ್ಲೇ ದೇಹವನ್ನು ಆವರಿಸಿಕೊಳ್ಳುತ್ತದೆ. ಟ್ರಾನ್ಸಪ್ಲಂಟ್ ರೋಗಿಗಳಲ್ಲಿ ಇದರ ಆಟ ಹೆಚ್ಚಿದ್ದು, ಕೊರೊನಾ ವೈರಸ್​ಗಿಂತಲೂ ಹೆಚ್ಚು ಅಪಾಯಕಾರಿ ಎಂದು ತಿಳಿದುಬಂದಿದೆ.

Corona Vaccine ಅಮೆರಿಕಾದಲ್ಲಿ ಬಳಕೆಗೆ ಲಭ್ಯವಾ ಫೈಜರ್, ಬಯೋಎನ್​ಟೆಕ್ ಲಸಿಕೆ?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್