AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನರ್ತನದ ನಡುವೆ ದೇಶದಲ್ಲಿ ಮ್ಯೂಕೋಮೈಕೋಸಿಸ್ Mucormycosis ರೋಗ ಪತ್ತೆ

ಈ ಮ್ಯೂಕೋಮೈಕೋಸಿಸ್ Mucormycosis ರೋಗ ಮೂಗು, ಮೆದುಳು, ಶ್ವಾಸಕೋಶವನ್ನು ದುರ್ಬಲಗೊಳಿಸುವ ಜೊತೆಗೆ ಮೂಗಿನ ಸುತ್ತ ಊತ ಹಾಗೂ ಕಣ್ಣಿನ ನೋವು ಕಾಣಿಸಿಕೊಳ್ಳುತ್ತದೆ.

ಕೊರೊನಾ ನರ್ತನದ ನಡುವೆ ದೇಶದಲ್ಲಿ ಮ್ಯೂಕೋಮೈಕೋಸಿಸ್ Mucormycosis ರೋಗ ಪತ್ತೆ
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Dec 16, 2020 | 2:18 PM

Share

ದೆಹಲಿ: ಕೊರೊನಾ ಸೋಂಕಿನ ನರ್ತನದ ನಡುವೆ ಭಾರತದಲ್ಲೂ ಮ್ಯೂಕೋಮೈಕೋಸಿಸ್ Mucormycosis ರೋಗ ಪತ್ತೆಯಾಗಿದೆ. ಹೆಚ್ಚಾಗಿ ಫಂಗಸ್​ನಿಂದ ಬರುವ ರೋಗ ಇದಾಗಿದ್ದು, ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರ ಮೇಲೆ ಬೇಗ ಆಕ್ರಮಣ ಮಾಡಿ ಜೀವವನ್ನು ಹಿಂಡುತ್ತದೆ.

ಕೊರೊನಾ ಸೋಂಕಿನಿಂದ ಚೇತರಿಕೆ ಕಂಡವರಿಗೆ ಮತ್ತಷ್ಟು ಅಪಾಯಕ್ಕೆ ಕಾರಣವಾಗುವ ಈ ಭಯಾನಕ ರೋಗ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಹೆಚ್ಚಿದ್ದು. ಈ ಮ್ಯೂಕೋಮೈಕೋಸಿಸ್ ರೋಗಕ್ಕೆ ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡಾ ಬೆಚ್ಚಿ ಬಿದ್ದಿದೆ. ವಯಸ್ಸಾದವರು, ಕೋಮಾರ್ಬಡಿಟಿಯಿಂದ ಬಳಲುವವರು ಈ ರೋಗದಿಂದ ಎಚ್ಚರವಿರಬೇಕು. ಈಗಾಗಲೇ ಹಲವರ ಜೀವವನ್ನು ಬಲಿ ತೆಗೆದುಕೊಂಡಿರುವ ಈ ರಕ್ಕಸ ರೋಗದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಸ್ಟೀರಾಯ್ಡ್ ತೆಗೆದುಕೊಳ್ಳುತ್ತಿದ್ದರೆ ಇದರಿಂದ ಜೀವಕ್ಕೆ ಆಗುವ ಅಪಾಯ ತಪ್ಪಿದ್ದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಮ್ಯೂಕೋಮೈಕೋಸಿಸ್ ರೋಗ ಮೂಗು, ಮೆದುಳು, ಶ್ವಾಸಕೋಶವನ್ನು ದುರ್ಬಲಗೊಳಿಸುವ ಜೊತೆಗೆ ಮೂಗಿನ ಸುತ್ತ ಊತ ಹಾಗೂ ಕಣ್ಣಿನ ನೋವು ಕಾಣಿಸಿಕೊಳ್ಳುತ್ತದೆ. ಹೈಬಿಪಿ, ಶುಗರ್, ಕ್ಯಾನ್ಸರ್, ಕಿಡ್ನಿ, ಶ್ವಾಸಕೋಶ ಸಂಬಂಧಿ ಕಾಯಿಲೆ ಇದ್ದವರ ಮೇಲೆ ಈ ಮ್ಯೂಕೋಮೈಕೋಸಿಸ್ ರೋಗ ಅಟ್ಟಹಾಸ ಮೆರೆಯುವ ಪ್ರಮಾಣ ಹೆಚ್ಚಿದ್ದು, ಇದರ ಬಗ್ಗೆ ಉದಾಸೀನ ತೋರಿದರೆ ಮತ್ತಷ್ಟು ಸಮಸ್ಯೆಗೆ ಕಾರಣವಾಗುವುದರಲ್ಲಿ ಅನುಮಾನವಿಲ್ಲ.

ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರ ಮೇಲೆ ಟಾರ್ಗೆಟ್: ರೋಗ ಹತ್ತಿರ ಸುಳಿಯಬಾರದೆಂದರೆ ರೋಗ ನಿರೋಧಕ ಶಕ್ತಿ ಹೆಚ್ಚಿರಬೇಕು. ಕೊರೊನಾ ಸೋಂಕು ಹೆಚ್ಚು ಪತ್ತೆಯಾಗವುದು ಕೂಡಾ ಈ ರೋಗ ನಿರೋಧಕ ಶಕ್ತಿ ಕಡಿಮೆಯಾದರಲ್ಲಿ. ಅದರಂತೆ ಈ ಹೆಮ್ಮಾರಿ ಮ್ಯೂಕೋಮೈಕೋಸಿಸ್ ರೋಗವು ಕೂಡಾ ಅಂತವರನ್ನೆ ಟಾರ್ಗೆಟ್ ಮಾಡುತ್ತದೆ. ಅಲ್ಲದೇ ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ ಈ ಮ್ಯೂಕೋಮೈಕೋಸಿಸ್ ಕಡಿಮೆ ಸಮಯದಲ್ಲೇ ದೇಹವನ್ನು ಆವರಿಸಿಕೊಳ್ಳುತ್ತದೆ. ಟ್ರಾನ್ಸಪ್ಲಂಟ್ ರೋಗಿಗಳಲ್ಲಿ ಇದರ ಆಟ ಹೆಚ್ಚಿದ್ದು, ಕೊರೊನಾ ವೈರಸ್​ಗಿಂತಲೂ ಹೆಚ್ಚು ಅಪಾಯಕಾರಿ ಎಂದು ತಿಳಿದುಬಂದಿದೆ.

Corona Vaccine ಅಮೆರಿಕಾದಲ್ಲಿ ಬಳಕೆಗೆ ಲಭ್ಯವಾ ಫೈಜರ್, ಬಯೋಎನ್​ಟೆಕ್ ಲಸಿಕೆ?

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ