AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mukesh Ambani: ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ, 400 ಕೋಟಿ ರೂ.ಗೆ ಬೇಡಿಕೆ

ಉದ್ಯಮಿ ಮುಕೇಶ್​ ಅಂಬಾನಿಗೆ ಮತ್ತೆ ಜೀವ ಬೆದರಿಕೆಯ ಇ-ಮೇಲ್ ಬಂದಿದ್ದು, ಈ ಬಾರಿ 400 ಕೋಟಿ ರೂ. ಕೊಡುವಂತೆ ಬೇಡಿಕೆ ಇಡಲಾಗಿದೆ. ಒಂದೊಮ್ಮೆ ಹಣವನ್ನು ನೀಡಲು ವಿಫಲವಾದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಒಂದು ವಾರದಲ್ಲಿ ಮೂರನೇ ಬಾರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕಂಪನಿಯ ಮೇಲ್ ಐಡಿಗೆ ಶುಕ್ರವಾರ ಮೊದಲ ಇ-ಮೇಲ್ ಬಂದಿತ್ತು, ಶನಿವಾರ ಮತ್ತೊಂದು ಇ-ಮೇಲ್ ಬಂದಿದೆ.

Mukesh Ambani: ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ, 400 ಕೋಟಿ ರೂ.ಗೆ ಬೇಡಿಕೆ
ಮುಕೇಶ್​ ಅಂಬಾನಿImage Credit source: Business Standard
Follow us
ನಯನಾ ರಾಜೀವ್
|

Updated on:Oct 31, 2023 | 9:21 AM

ಉದ್ಯಮಿ ಮುಕೇಶ್​ ಅಂಬಾನಿ(Mukesh Ambani)ಗೆ ಮತ್ತೆ ಜೀವ ಬೆದರಿಕೆಯ ಇ-ಮೇಲ್ ಬಂದಿದ್ದು, ಈ ಬಾರಿ 400 ಕೋಟಿ ರೂ. ಕೊಡುವಂತೆ ಬೇಡಿಕೆ ಇಡಲಾಗಿದೆ. ಒಂದೊಮ್ಮೆ ಹಣವನ್ನು ನೀಡಲು ವಿಫಲವಾದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಒಂದು ವಾರದಲ್ಲಿ ಮೂರನೇ ಬಾರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕಂಪನಿಯ ಮೇಲ್ ಐಡಿಗೆ ಶುಕ್ರವಾರ ಮೊದಲ ಇ-ಮೇಲ್ ಬಂದಿತ್ತು, ಶನಿವಾರ ಮತ್ತೊಂದು ಇ-ಮೇಲ್ ಬಂದಿದೆ.

ಅಂಬಾನಿ ನೀಡಿದ ದೂರಿನ ಆಧಾರದ ಮೇಲೆ, ಗಾಮ​ದೇವಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಶಾದಬ್ ಖಾನ್ ಎಂಬ ಹೆಸರಿನಲ್ಲಿ ಇ-ಮೇಲ್ ಬಂದಿದೆ, ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಮೊದಲು 20 ಕೋಟಿ ರೂ. ಹಾಗೂ 200 ಕೋಟಿ ರೂ,ಗೆ ಆರೋಪಿ ಬೇಡಿಕೆ ಇಟ್ಟಿದ್ದ, ಇದೀಗ 400 ಕೋಟಿ ರೂ,ಗೆ ಬೇಡಿಕೆ ಇಟ್ಟಿದ್ದಾನೆ.

ಮತ್ತಷ್ಟು ಓದಿ: ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ

ಶನಿವಾರ (ಅಕ್ಟೋಬರ್ 27) ಮುಕೇಶ್ ಅಂಬಾನಿ ಅವರ ಇಮೇಲ್ ಖಾತೆಗೆ ಮೇಲ್ ಬಂದಿದ್ದು, ಅದರಲ್ಲಿ ಮುಕೇಶ್ ಅಂಬಾನಿಗೆ 20 ಕೋಟಿ ರೂ.ಗೆ ಬೆದರಿಕೆ ಹಾಕಿದ್ದ ಮತ್ತು ಹಣ ನೀಡದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದ. ಹಿಂದಿನ ಬೆದರಿಕೆ ಇ-ಮೇಲ್‌ನಲ್ಲಿ,ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್​ಗಳನ್ನು ಹೊಂದಿದ್ದೇವೆ ಎಂದು ಬೆದರಿಕೆ ಹಾಕಿದ್ದರು.

ಈ ಮೇಲ್ ಅನ್ನು ಯಾವ IP ವಿಳಾಸದಿಂದ ಕಳುಹಿಸಲಾಗಿದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಲು ಪ್ರಾರಂಭಿಸಿದೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ, ವ್ಯಕ್ತಿಯೊಬ್ಬರು ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು, ನಂತರ ಪೊಲೀಸರು ತಕ್ಷಣವೇ ಆಂಟಿಲಿಯಾ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:11 am, Tue, 31 October 23

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ