AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mukesh Ambani: ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ, 400 ಕೋಟಿ ರೂ.ಗೆ ಬೇಡಿಕೆ

ಉದ್ಯಮಿ ಮುಕೇಶ್​ ಅಂಬಾನಿಗೆ ಮತ್ತೆ ಜೀವ ಬೆದರಿಕೆಯ ಇ-ಮೇಲ್ ಬಂದಿದ್ದು, ಈ ಬಾರಿ 400 ಕೋಟಿ ರೂ. ಕೊಡುವಂತೆ ಬೇಡಿಕೆ ಇಡಲಾಗಿದೆ. ಒಂದೊಮ್ಮೆ ಹಣವನ್ನು ನೀಡಲು ವಿಫಲವಾದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಒಂದು ವಾರದಲ್ಲಿ ಮೂರನೇ ಬಾರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕಂಪನಿಯ ಮೇಲ್ ಐಡಿಗೆ ಶುಕ್ರವಾರ ಮೊದಲ ಇ-ಮೇಲ್ ಬಂದಿತ್ತು, ಶನಿವಾರ ಮತ್ತೊಂದು ಇ-ಮೇಲ್ ಬಂದಿದೆ.

Mukesh Ambani: ಉದ್ಯಮಿ ಮುಕೇಶ್ ಅಂಬಾನಿಗೆ ಮತ್ತೆ ಜೀವ ಬೆದರಿಕೆ, 400 ಕೋಟಿ ರೂ.ಗೆ ಬೇಡಿಕೆ
ಮುಕೇಶ್​ ಅಂಬಾನಿImage Credit source: Business Standard
ನಯನಾ ರಾಜೀವ್
|

Updated on:Oct 31, 2023 | 9:21 AM

Share

ಉದ್ಯಮಿ ಮುಕೇಶ್​ ಅಂಬಾನಿ(Mukesh Ambani)ಗೆ ಮತ್ತೆ ಜೀವ ಬೆದರಿಕೆಯ ಇ-ಮೇಲ್ ಬಂದಿದ್ದು, ಈ ಬಾರಿ 400 ಕೋಟಿ ರೂ. ಕೊಡುವಂತೆ ಬೇಡಿಕೆ ಇಡಲಾಗಿದೆ. ಒಂದೊಮ್ಮೆ ಹಣವನ್ನು ನೀಡಲು ವಿಫಲವಾದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಒಂದು ವಾರದಲ್ಲಿ ಮೂರನೇ ಬಾರಿಗೆ ಬೆದರಿಕೆಯ ಇ-ಮೇಲ್ ಬಂದಿದೆ. ಕಂಪನಿಯ ಮೇಲ್ ಐಡಿಗೆ ಶುಕ್ರವಾರ ಮೊದಲ ಇ-ಮೇಲ್ ಬಂದಿತ್ತು, ಶನಿವಾರ ಮತ್ತೊಂದು ಇ-ಮೇಲ್ ಬಂದಿದೆ.

ಅಂಬಾನಿ ನೀಡಿದ ದೂರಿನ ಆಧಾರದ ಮೇಲೆ, ಗಾಮ​ದೇವಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಶಾದಬ್ ಖಾನ್ ಎಂಬ ಹೆಸರಿನಲ್ಲಿ ಇ-ಮೇಲ್ ಬಂದಿದೆ, ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಮೊದಲು 20 ಕೋಟಿ ರೂ. ಹಾಗೂ 200 ಕೋಟಿ ರೂ,ಗೆ ಆರೋಪಿ ಬೇಡಿಕೆ ಇಟ್ಟಿದ್ದ, ಇದೀಗ 400 ಕೋಟಿ ರೂ,ಗೆ ಬೇಡಿಕೆ ಇಟ್ಟಿದ್ದಾನೆ.

ಮತ್ತಷ್ಟು ಓದಿ: ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ

ಶನಿವಾರ (ಅಕ್ಟೋಬರ್ 27) ಮುಕೇಶ್ ಅಂಬಾನಿ ಅವರ ಇಮೇಲ್ ಖಾತೆಗೆ ಮೇಲ್ ಬಂದಿದ್ದು, ಅದರಲ್ಲಿ ಮುಕೇಶ್ ಅಂಬಾನಿಗೆ 20 ಕೋಟಿ ರೂ.ಗೆ ಬೆದರಿಕೆ ಹಾಕಿದ್ದ ಮತ್ತು ಹಣ ನೀಡದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದ. ಹಿಂದಿನ ಬೆದರಿಕೆ ಇ-ಮೇಲ್‌ನಲ್ಲಿ,ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್​ಗಳನ್ನು ಹೊಂದಿದ್ದೇವೆ ಎಂದು ಬೆದರಿಕೆ ಹಾಕಿದ್ದರು.

ಈ ಮೇಲ್ ಅನ್ನು ಯಾವ IP ವಿಳಾಸದಿಂದ ಕಳುಹಿಸಲಾಗಿದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಲು ಪ್ರಾರಂಭಿಸಿದೆ. ಈ ವರ್ಷದ ಫೆಬ್ರವರಿ ತಿಂಗಳಲ್ಲಿ, ವ್ಯಕ್ತಿಯೊಬ್ಬರು ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು, ನಂತರ ಪೊಲೀಸರು ತಕ್ಷಣವೇ ಆಂಟಿಲಿಯಾ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:11 am, Tue, 31 October 23

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ