AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಬೆಂಗಾವಲು ಪಡೆಗೆ ನಾಲ್ಕು ಐಷಾರಾಮಿ ಬೆಂಜ್​ ಎಸ್​ಯುವಿ ಸೇರ್ಪಡೆ: ಹೇಗಿದೆ ಗೊತ್ತಾ ಭದ್ರತೆ?

ಬೆಂಜ್​ ಜಿ63 ಎಎಂಜಿ ಎಸ್​ಯುವಿ ಐಷಾರಾಮಿ ಜೊತೆಗೆ ಸಾಕಷ್ಟು ಆಯ್ಕೆ ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 4.5 ಸೆಕೆಂಡ್​ನಲ್ಲಿ ಮುಟ್ಟುವ ಸಾಮರ್ಥ್ಯವನ್ನು ಈ ವಾಹನ ಹೊಂದಿದೆ. ಗರಿಷ್ಠ 220 ಕಿ.ಮೀ ವೇಗದಲ್ಲಿ ಇದು ಸಂಚರಿಸಬಲ್ಲದು.

ಅಂಬಾನಿ ಬೆಂಗಾವಲು ಪಡೆಗೆ ನಾಲ್ಕು ಐಷಾರಾಮಿ ಬೆಂಜ್​ ಎಸ್​ಯುವಿ ಸೇರ್ಪಡೆ: ಹೇಗಿದೆ ಗೊತ್ತಾ ಭದ್ರತೆ?
ಅಂಬಾನಿ ಸಂಚಾರ ಮಾಡುತ್ತಿರುವ ವಾಹನ
ರಾಜೇಶ್ ದುಗ್ಗುಮನೆ
|

Updated on:Jan 17, 2021 | 6:24 PM

Share

ಮುಂಬೈ: ಭಾರತದ ಶ್ರೀಮಂತರ ಸಾಲಿನಲ್ಲಿ ಮೊದಲಿಗರಾಗಿರುವ ರಿಲಯನ್ಸ್​ ಸಂಸ್ಥೆಯ ಒಡೆಯ ಮುಕೇಶ್​ ಅಂಬಾನಿಗೆ Z+ ಭದ್ರತೆ ಒದಗಿಸಲಾಗುತ್ತಿದೆ. ವಿಶೇಷ ಎಂದರೆ, ಈಗ ಅವರ ಬೆಂಗಾವಲು ಪಡೆಗೆ ನಾಲ್ಕು ಮರ್ಸಿಡಿಸ್​ ಬೆಂಜ್​ ಜಿ63 ಎಎಂಜಿ ಎಸ್​ಯುವಿ ಸೇರ್ಪಡೆ ಆಗಿದೆ.

ಹೌದು, ಮುಂಬೈ ರಸ್ತೆಯಲ್ಲಿ ಅಂಬಾನಿ ಸಂಚಾರ ಮಾಡಿದ್ದು, ಈ ವೇಳೆ ಹೊಸದಾಗಿ ಸೇರ್ಪಡೆ ಆಗಿರುವ ಬೆಂಜ್​ ಜಿ63 ಎಎಂಜಿ ಕಾಣಿಸಿದೆ. ನಾಲ್ಕು ವಾಹನಗಳ ಮೌಲ್ಯ ಸುಮಾರು 12 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಂದರೆ, ಒಂದು ವಾಹನದ ಬೆಲೆ ಮೂರು ಕೋಟಿ ರೂಪಾಯಿ.

ಇದರ ಜೊತೆಗೆ ಸಾಕಷ್ಟು ಐಷಾರಾಮಿ ಕಾರುಗಳು ಅಂಬಾನಿ ಅವರ ಭದ್ರತಾ ಪಡೆಯಲ್ಲಿವೆ. ಲ್ಯಾಂಡ್​ ರೋವರ್ ಡಿಸ್ಕವರಿ ಸ್ಪೋರ್ಟ್ಸ್​​, ಬಿಎಂಡಬ್ಲ್ಯು 5, ಫೋರ್ಡ್ ಎಂಡೀವರ್​, ಟೊಯಾಟೋ ಫಾರ್ಚೂನರ್​ ವಾಹನಗಳು ಅಂಬಾನಿಗೆ ಭದ್ರತೆ ನೀಡುತ್ತಿವೆ.

ಬೆಂಜ್​ ಜಿ63 ಎಎಂಜಿ ಎಸ್​ಯುವಿ ಐಷಾರಾಮಿ ಜೊತೆಗೆ ಸಾಕಷ್ಟು ಆಯ್ಕೆಗಳನ್ನು ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 4.5 ಸೆಕೆಂಡ್​ನಲ್ಲಿ ತಲುಪುವ ಸಾಮರ್ಥ್ಯವನ್ನು ಈ ವಾಹನ ಹೊಂದಿದೆ. ಗರಿಷ್ಠ 220 ಕಿ.ಮೀ ವೇಗದಲ್ಲಿ ಸಂಚಾರ ಸಾಧ್ಯ.  ಅಲ್ಲದೆ, ಸಾಕಷ್ಟು ಸುರಕ್ಷಿತ ವಾಹನಗಳ ಸಾಲಿನಲ್ಲಿ ಮರ್ಸಿಡಿಸ್​ ಬೆಂಜ್​ ಜಿ63 ಎಎಂಜಿ ಎಸ್​ಯುವಿ ಕೂಡ ಇದೆ.

ಪ್ರತಿ ತಿಂಗಳು ಅಂಬಾನಿ ಭದ್ರತೆಗೆ 15-16 ಲಕ್ಷ ವೆಚ್ಚವಾಗಲಿದೆ. ಈ ಹಣವನ್ನು ಸರ್ಕಾರಕ್ಕೆ ಅಂಬಾನಿ ಪಾವತಿ ಮಾಡುತ್ತಾರೆ. ಹೀಗಾಗಿ, ಇಲ್ಲಿ ಭದ್ರತಾ ಸಿಬ್ಬಂದಿಗೆ ವಾಹನ ನೀಡಿದ್ದು ಕೂಡ ಅಂಬಾನಿಯೇ.

ಷೇರು ಬೆಲೆಯಲ್ಲಿ ಮೋಸ: ಮುಕೇಶ್ ಅಂಬಾನಿಗೂ ದಂಡ.. ರಿಲಯನ್ಸ್ ಸಮೂಹಕ್ಕೆ 70 ಕೋಟಿ ರೂ ದಂಡ ವಿಧಿಸಿದ ಸೆಬಿ

Published On - 1:37 pm, Sun, 17 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ