AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ನಾಯಕ ಮುಲಾಯಾಂ ಸಿಂಗ್​ ಯಾದವ್ ಸೊಸೆ ಇಂದು ಬಿಜೆಪಿಗೆ ಸೇರ್ಪಡೆ; ಟ್ವೀಟ್​ ಮಾಡಿದ ಬಿಜೆಪಿ ನಾಯಕ

ಸಾಲುಸಾಲು ಬಿಜೆಪಿ ಶಾಸಕರು ಪಕ್ಷ ಬಿಟ್ಟಿದ್ದರಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಿಕೊಳ್ಳಲು ಬಿಜೆಪಿಗೆ ಇದೊಂದು ಸದಾವಕಾಶ. ಹಿಂದುಳಿದ ವರ್ಗಗಳ ನಾಯಕರಾಗಿದ್ದ ಸ್ವಾಮಿ ಪ್ರಸಾದ್​ ಮೌರ್ಯ ಬಿಜೆಪಿ ಸೇರುತ್ತಿದ್ದಂತೆ, ಅವರ ಹಿಂದೆ ಹಲವರು ಹೋಗಿದ್ದರು.

ಸಮಾಜವಾದಿ ಪಕ್ಷದ ನಾಯಕ ಮುಲಾಯಾಂ ಸಿಂಗ್​ ಯಾದವ್ ಸೊಸೆ ಇಂದು ಬಿಜೆಪಿಗೆ ಸೇರ್ಪಡೆ; ಟ್ವೀಟ್​ ಮಾಡಿದ ಬಿಜೆಪಿ ನಾಯಕ
ಅಪರ್ಣಾ ಯಾದವ್​
Follow us
TV9 Web
| Updated By: Lakshmi Hegde

Updated on:Jan 19, 2022 | 7:54 AM

 ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್​ ಯಾದವ್​ ಸೊಸೆ ಅಪರ್ಣಾ ಯಾದವ್​ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಲವಾದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿಯೇ ಅವರು ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಧ್ಯಾನಶಂಕರ್​ ಸಿಂಗ್​ ಜತೆ ದೆಹಲಿಗೆ ತೆರಳಿದ್ದು, ಇಂದು ರಾಷ್ಟ್ರೀಯ ಅಧ್ಯಕ್ಷ  ಜೆಪಿ ನಡ್ಡಾ ಸಮ್ಮುಖದಲ್ಲಿ ಕಮಲ ಪಕ್ಷಕ್ಕೆ ಸೇರಲಿದ್ದಾರೆ ಎಂದು ಹೇಳಲಾಗಿದೆ. ಅಪರ್ಣಾ ಯಾದವ್​ ಅವರು  ಮುಲಾಯಾಂ ಸಿಂಗ್​ ಕಿರಿಯ ಪುತ್ರ ಪ್ರತೀಕ್​ ಯಾದವ್​ ಪತ್ನಿ. ಇವರು 2017ರ ವಿಧಾನಸಭೆ ಚುನಾವಣೆಯಲ್ಲಿ ಲಖನೌದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಆಗ ಬಿಜೆಪಿಯ ಬಹುಗುಣ ಜೋಶಿ ವಿರುದ್ಧ ಸೋತಿದ್ದರು. ಇವರ ಪತಿ ಪ್ರತೀಕ್​ ಯಾದವ್​ ರಾಜಕೀಯದಿಂದ ದೂರವುಳಿದಿದ್ದಾರೆ. 

ಅಪರ್ಣಾ ಯಾದವ್​ ಬಿಜೆಪಿ ಸೇರುವ ಬಗ್ಗೆ ಹಲವು ದಿನಗಳಿಂದಲೂ ಮಾತು ಕೇಳಿಬರುತ್ತಿತ್ತು. ಆದರೆ ಯಾವುದೇ ವಿಷಯವೂ ದೃಢಪಟ್ಟಿರಲಿಲ್ಲ.ಇನ್ನು ಕಳೆದ ವಾರ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಮೂರು ಸಚಿವರು ಸೇರಿ ಹಲವು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಬ್ಬರು ಶಾಸಕರು ಈಗಾಗಲೇ ಎಸ್​ಪಿಯಿಂದ ಬಿಜೆಪಿಗೆ ಬಂದಿದ್ದಾರೆ. ಈ ಮಧ್ಯೆ ಹರ್ಯಾಣ ಬಿಜೆಪಿ ಉಸ್ತುವಾರಿ ಅರುಣ್​ ಯಾದವ್​ ನಿನ್ನೆ ಟ್ವೀಟ್ ಮಾಡಿ, ಮುಲಾಯಂ ಸಿಂಗ್ ಯಾದವ್​ ಅವರ ಕಿರಿಯ ಪುತ್ರ ಪ್ರತೀಕ್​ ಯಾದವ್ ಪತ್ನಿ ಅಪರ್ಣಾ ಯಾದವ್​ ಬುಧವಾರ ಬಿಜೆಪಿ ಸೇರಲಿದ್ದಾರೆ. ಈ ವೇಳೆ ಯೋಗಿ ಆದಿತ್ಯನಾಥ್​ ಕೂಡ ಇರುವರು ಎಂದು ತಿಳಿಸಿದ್ದಾರೆ.

ಸಾಲುಸಾಲು ಬಿಜೆಪಿ ಶಾಸಕರು ಪಕ್ಷ ಬಿಟ್ಟಿದ್ದರಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಿಕೊಳ್ಳಲು ಬಿಜೆಪಿಗೆ ಇದೊಂದು ಸದಾವಕಾಶ. ಹಿಂದುಳಿದ ವರ್ಗಗಳ ನಾಯಕರಾಗಿದ್ದ ಸ್ವಾಮಿ ಪ್ರಸಾದ್​ ಮೌರ್ಯ ಬಿಜೆಪಿ ಸೇರುತ್ತಿದ್ದಂತೆ, ಅವರ ಹಿಂದೆ ಹಲವರು ಹೋಗಿದ್ದರು. ಇದು ಬಿಜೆಪಿ ಪಾಲಿಗೂ ನುಂಗಲಾರದ ತುತ್ತು. ಅವರು ಬಿಜೆಪಿ ಬಿಡುತ್ತಿದ್ದಂತೆ,  ಇತರ ಹಿಂದುಳಿದ ವರ್ಗಕ್ಕೆ ಸೇರಿದವರ ಮತ ಗಳಿಸಲು ಬಿಜೆಪಿ ಇನ್ನಿಲ್ಲದಂತೆ ಪ್ರಯತ್ನ ಮಾಡುವ ಸ್ಥಿತಿ ಬಂದಿದೆ. ಇನ್ನು ಅಪರ್ಣಾ ಯಾದವ್​ ಸಮಾಜವಾದಿ ಪಕ್ಷ ಬಿಟ್ಟಿದ್ದು ಆ ಪಕ್ಷಕ್ಕೆ ಹಿನ್ನೆಡೆಯೂ ಹೌದು. ಫೆ.10ರಿಂದ ಒಟ್ಟು ಏಳುಹಂತದಲ್ಲಿ ಉತ್ತರಪ್ರದೇಶ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಡಿಯೋಡರೆಂಟ್ ಬಳಕೆ ಕ್ಯಾನ್ಸರ್​ಗೆ ಕಾರಣವಾಗುತ್ತದೆಯೇ? ಇಲ್ಲಿದೆ ಮಾಹಿತಿ ಪರಿಶೀಲಿಸಿ

Published On - 7:53 am, Wed, 19 January 22

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ