AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜವಾದಿ ಪಕ್ಷದ ನಾಯಕ ಮುಲಾಯಾಂ ಸಿಂಗ್​ ಯಾದವ್ ಸೊಸೆ ಇಂದು ಬಿಜೆಪಿಗೆ ಸೇರ್ಪಡೆ; ಟ್ವೀಟ್​ ಮಾಡಿದ ಬಿಜೆಪಿ ನಾಯಕ

ಸಾಲುಸಾಲು ಬಿಜೆಪಿ ಶಾಸಕರು ಪಕ್ಷ ಬಿಟ್ಟಿದ್ದರಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಿಕೊಳ್ಳಲು ಬಿಜೆಪಿಗೆ ಇದೊಂದು ಸದಾವಕಾಶ. ಹಿಂದುಳಿದ ವರ್ಗಗಳ ನಾಯಕರಾಗಿದ್ದ ಸ್ವಾಮಿ ಪ್ರಸಾದ್​ ಮೌರ್ಯ ಬಿಜೆಪಿ ಸೇರುತ್ತಿದ್ದಂತೆ, ಅವರ ಹಿಂದೆ ಹಲವರು ಹೋಗಿದ್ದರು.

ಸಮಾಜವಾದಿ ಪಕ್ಷದ ನಾಯಕ ಮುಲಾಯಾಂ ಸಿಂಗ್​ ಯಾದವ್ ಸೊಸೆ ಇಂದು ಬಿಜೆಪಿಗೆ ಸೇರ್ಪಡೆ; ಟ್ವೀಟ್​ ಮಾಡಿದ ಬಿಜೆಪಿ ನಾಯಕ
ಅಪರ್ಣಾ ಯಾದವ್​
TV9 Web
| Edited By: |

Updated on:Jan 19, 2022 | 7:54 AM

Share

 ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್​ ಯಾದವ್​ ಸೊಸೆ ಅಪರ್ಣಾ ಯಾದವ್​ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಲವಾದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿಯೇ ಅವರು ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಧ್ಯಾನಶಂಕರ್​ ಸಿಂಗ್​ ಜತೆ ದೆಹಲಿಗೆ ತೆರಳಿದ್ದು, ಇಂದು ರಾಷ್ಟ್ರೀಯ ಅಧ್ಯಕ್ಷ  ಜೆಪಿ ನಡ್ಡಾ ಸಮ್ಮುಖದಲ್ಲಿ ಕಮಲ ಪಕ್ಷಕ್ಕೆ ಸೇರಲಿದ್ದಾರೆ ಎಂದು ಹೇಳಲಾಗಿದೆ. ಅಪರ್ಣಾ ಯಾದವ್​ ಅವರು  ಮುಲಾಯಾಂ ಸಿಂಗ್​ ಕಿರಿಯ ಪುತ್ರ ಪ್ರತೀಕ್​ ಯಾದವ್​ ಪತ್ನಿ. ಇವರು 2017ರ ವಿಧಾನಸಭೆ ಚುನಾವಣೆಯಲ್ಲಿ ಲಖನೌದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಆಗ ಬಿಜೆಪಿಯ ಬಹುಗುಣ ಜೋಶಿ ವಿರುದ್ಧ ಸೋತಿದ್ದರು. ಇವರ ಪತಿ ಪ್ರತೀಕ್​ ಯಾದವ್​ ರಾಜಕೀಯದಿಂದ ದೂರವುಳಿದಿದ್ದಾರೆ. 

ಅಪರ್ಣಾ ಯಾದವ್​ ಬಿಜೆಪಿ ಸೇರುವ ಬಗ್ಗೆ ಹಲವು ದಿನಗಳಿಂದಲೂ ಮಾತು ಕೇಳಿಬರುತ್ತಿತ್ತು. ಆದರೆ ಯಾವುದೇ ವಿಷಯವೂ ದೃಢಪಟ್ಟಿರಲಿಲ್ಲ.ಇನ್ನು ಕಳೆದ ವಾರ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಮೂರು ಸಚಿವರು ಸೇರಿ ಹಲವು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಬ್ಬರು ಶಾಸಕರು ಈಗಾಗಲೇ ಎಸ್​ಪಿಯಿಂದ ಬಿಜೆಪಿಗೆ ಬಂದಿದ್ದಾರೆ. ಈ ಮಧ್ಯೆ ಹರ್ಯಾಣ ಬಿಜೆಪಿ ಉಸ್ತುವಾರಿ ಅರುಣ್​ ಯಾದವ್​ ನಿನ್ನೆ ಟ್ವೀಟ್ ಮಾಡಿ, ಮುಲಾಯಂ ಸಿಂಗ್ ಯಾದವ್​ ಅವರ ಕಿರಿಯ ಪುತ್ರ ಪ್ರತೀಕ್​ ಯಾದವ್ ಪತ್ನಿ ಅಪರ್ಣಾ ಯಾದವ್​ ಬುಧವಾರ ಬಿಜೆಪಿ ಸೇರಲಿದ್ದಾರೆ. ಈ ವೇಳೆ ಯೋಗಿ ಆದಿತ್ಯನಾಥ್​ ಕೂಡ ಇರುವರು ಎಂದು ತಿಳಿಸಿದ್ದಾರೆ.

ಸಾಲುಸಾಲು ಬಿಜೆಪಿ ಶಾಸಕರು ಪಕ್ಷ ಬಿಟ್ಟಿದ್ದರಿಂದ ಉಂಟಾಗಿರುವ ಹಾನಿಯನ್ನು ಸರಿಪಡಿಸಿಕೊಳ್ಳಲು ಬಿಜೆಪಿಗೆ ಇದೊಂದು ಸದಾವಕಾಶ. ಹಿಂದುಳಿದ ವರ್ಗಗಳ ನಾಯಕರಾಗಿದ್ದ ಸ್ವಾಮಿ ಪ್ರಸಾದ್​ ಮೌರ್ಯ ಬಿಜೆಪಿ ಸೇರುತ್ತಿದ್ದಂತೆ, ಅವರ ಹಿಂದೆ ಹಲವರು ಹೋಗಿದ್ದರು. ಇದು ಬಿಜೆಪಿ ಪಾಲಿಗೂ ನುಂಗಲಾರದ ತುತ್ತು. ಅವರು ಬಿಜೆಪಿ ಬಿಡುತ್ತಿದ್ದಂತೆ,  ಇತರ ಹಿಂದುಳಿದ ವರ್ಗಕ್ಕೆ ಸೇರಿದವರ ಮತ ಗಳಿಸಲು ಬಿಜೆಪಿ ಇನ್ನಿಲ್ಲದಂತೆ ಪ್ರಯತ್ನ ಮಾಡುವ ಸ್ಥಿತಿ ಬಂದಿದೆ. ಇನ್ನು ಅಪರ್ಣಾ ಯಾದವ್​ ಸಮಾಜವಾದಿ ಪಕ್ಷ ಬಿಟ್ಟಿದ್ದು ಆ ಪಕ್ಷಕ್ಕೆ ಹಿನ್ನೆಡೆಯೂ ಹೌದು. ಫೆ.10ರಿಂದ ಒಟ್ಟು ಏಳುಹಂತದಲ್ಲಿ ಉತ್ತರಪ್ರದೇಶ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಡಿಯೋಡರೆಂಟ್ ಬಳಕೆ ಕ್ಯಾನ್ಸರ್​ಗೆ ಕಾರಣವಾಗುತ್ತದೆಯೇ? ಇಲ್ಲಿದೆ ಮಾಹಿತಿ ಪರಿಶೀಲಿಸಿ

Published On - 7:53 am, Wed, 19 January 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?