AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ರೈಲಿನ ಬಾತ್ ರೂಂ ಒಳಗೆ 3 ವರ್ಷದ ಬಾಲಕನ ನಿಗೂಢ ಸಾವು

ಮುಂಬೈನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಕುಶಿನಗರ ಎಕ್ಸ್​ಪ್ರೆಸ್ ರೈಲಿನ ಬಾತ್ ರೂಮ್​​ನಲ್ಲಿ ಕಸದ ತೊಟ್ಟಿಯೊಳಗೆ 3 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಈ ನಿಗೂಢ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ರೈಲು ಮುಂಬೈನಲ್ಲಿ ತನ್ನ ಕೊನೆಯ ನಿಲ್ದಾಣವನ್ನು ತಲುಪಿದ ನಂತರ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೋಚ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಮಗುವಿನ ಶವ ಪತ್ತೆಯಾಗಿದೆ. ತನಿಖೆಯ ಭಾಗವಾಗಿ ಪೊಲೀಸರು ಪ್ರಸ್ತುತ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

ಮುಂಬೈನಲ್ಲಿ ರೈಲಿನ ಬಾತ್ ರೂಂ ಒಳಗೆ 3 ವರ್ಷದ ಬಾಲಕನ ನಿಗೂಢ ಸಾವು
Bathroom Dustbin
ಸುಷ್ಮಾ ಚಕ್ರೆ
|

Updated on: Aug 23, 2025 | 9:50 PM

Share

ಮುಂಬೈ, ಆಗಸ್ಟ್ 23: ಮಹಾರಾಷ್ಟ್ರದ ಮುಂಬೈನಲ್ಲಿ (Mumbai Crime News) ತೀವ್ರ ಆತಂಕಕಾರಿ ಘಟನೆಯೊಂದು ನಡೆದಿದೆ. ಇಂದು (ಶನಿವಾರ) ಮುಂಜಾನೆ ಕುಶಿನಗರ ಎಕ್ಸ್‌ಪ್ರೆಸ್ ನ ಎಸಿ ಕೋಚ್ ಬಿ 2ರ ಬಾತ್ ರೂಂನಲ್ಲಿನ ಕಸದ ತೊಟ್ಟಿಯೊಳಗೆ (Railway Dustbin) 3 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಗೋರಖ್‌ಪುರದಿಂದ ಪ್ರಯಾಣ ಬೆಳೆಸಿದ ರೈಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ (ಎಲ್‌ಟಿಟಿ)ಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಗೋರಖ್‌ಪುರ ಮತ್ತು ಮುಂಬೈನ ಎಲ್‌ಟಿಟಿ ನಡುವೆ ಪ್ರತಿದಿನ ಚಲಿಸುವ ಕುಶಿನಗರ ಎಕ್ಸ್‌ಪ್ರೆಸ್ ರೈಲಿನ ಎಸಿ ಬಿ2 ಕೋಚ್‌ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ರೈಲು ತನ್ನ ಕೊನೆಯ ನಿಲ್ದಾಣವನ್ನು ತಲುಪಿದ ನಂತರ ಬೆಳಿಗ್ಗೆ 6 ಗಂಟೆ ಸುಮಾರಿಗೆ ರೈಲ್ವೆ ಕೋಚ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಮೃತದೇಹವನ್ನು ನೋಡಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಕಚ್ಚಿದ್ದರಿಂದ ಕಾನ್ಪುರದ ಕಾಲೇಜು ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ!

ಶವ ಪತ್ತೆಯಾದ ತಕ್ಷಣ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಗೆ ಶುಚಿಗೊಳಿಸುವ ಸಿಬ್ಬಂದಿ ಎಚ್ಚರಿಕೆ ನೀಡಿದರು. ಆರ್‌ಪಿಎಫ್, ಸರ್ಕಾರಿ ರೈಲ್ವೆ ಪೊಲೀಸರಿಗೆ (ಜಿಆರ್‌ಪಿ) ಮಾಹಿತಿ ನೀಡಿತು. ಅವರು ಸ್ಥಳಕ್ಕೆ ತಲುಪಿ ಪ್ರಕರಣ ದಾಖಲಿಸಿದ್ದಾರೆ. “ಜಿಆರ್‌ಪಿ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ. ಮೃತದೇಹ ಪತ್ತೆಯಾದ ನಂತರ ಆರ್‌ಪಿಎಫ್ ದೂರು ದಾಖಲಿಸಿದೆ” ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕುಶಿನಗರ ಎಕ್ಸ್‌ಪ್ರೆಸ್ ಮುಂಬೈಯನ್ನು ಗೋರಖ್‌ಪುರ ಮತ್ತು ಉತ್ತರ ಪ್ರದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಅತ್ಯಂತ ಜನನಿಬಿಡ ರೈಲುಗಳಲ್ಲಿ ಒಂದಾಗಿದೆ. ರೈಲಿನ ಶೌಚಾಲಯದ ಕಸದ ತೊಟ್ಟಿಯೊಳಗೆ ಮಗುವಿನ ಮೃತದೇಹ ಹೇಗೆ ಬಿದ್ದಿತು ಎಂಬುದನ್ನು ಅಧಿಕಾರಿಗಳು ಇನ್ನೂ ಕಂಡುಹಿಡಿದಿಲ್ಲ. ಆ ಮಗು ಯಾರದ್ದು ಎಂಬುದು ಕೂಡ ತಿಳಿದುಬಂದಿಲ್ಲ.

ಇದನ್ನೂ ಓದಿ: ಗೆಳೆಯನ ಹೆಂಡತಿಯನ್ನು ತಾನಿಟ್ಟುಕೊಂಡು ತನ್ನ ಪತ್ನಿಯನ್ನು ಆತನಿಗೆ ಕೊಟ್ಟ ಸ್ನೇಹಿತ!

“ಮಗುವಿಗೆ ಸುಮಾರು 3 ವರ್ಷ ವಯಸ್ಸು. ಜಿಆರ್‌ಪಿ ಮತ್ತು ರಾಜ್ಯ ನಾಗರಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮಗು ಎಲ್ಲಿಂದ ರೈಲು ಹತ್ತಿತು ಮತ್ತು ಮಗು ಎಲ್ಲಿಗೆ ಹೋಗುತ್ತಿತ್ತು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಅವನೊಂದಿಗೆ ಬೇರೆ ಯಾರಾದರೂ ಇದ್ದರಾ? ಎಂದು ತಿಳಿಯಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಆರಂಭದಲ್ಲಿ ಮಗುವಿನ ಕುತ್ತಿಗೆಯ ಬಳಿ ಕೆಲವು ಗಾಯದ ಗುರುತುಗಳು ಕಂಡುಬಂದಿವೆ” ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ