AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಬಾಂದ್ರಾದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ಇಂದು ಸಂಜೆ 4 ಗಂಟೆ ಸುಮಾರಿಗೆ ಬಾಂದ್ರಾದ ಬೆಹ್ರಾಂ ನಗರದಲ್ಲಿ 5 ಮಹಡಿಯ ಕಟ್ಟಡ ಕುಸಿತವಾಗಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ.

ಮುಂಬೈನ ಬಾಂದ್ರಾದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ಬಾಂದ್ರಾದಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ
TV9 Web
| Edited By: |

Updated on: Jan 26, 2022 | 6:52 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನ (Mumbai) ಬಾಂದ್ರಾ ಪೂರ್ವ ಭಾಗದ ಬೆಹ್ರಾಂ ನಗರದಲ್ಲಿ 5 ಅಂತಸ್ತಿನ ಬೃಹತ್ ಕಟ್ಟಡ ಕುಸಿದಿದೆ. ಈ ಘಟನೆಯಲ್ಲಿ ಕನಿಷ್ಠ ಐವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಅನುಮಾನ ವ್ಯಕ್ತವಾಗಿದೆ. ಈಗಾಗಲೇ ರಕ್ಷಣಾ ತಂಡಗಳು ಕಟ್ಟಡ ಕುಸಿತವಾದ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಬೆಹ್ರಾಂ ನಗರದಲ್ಲಿ 5 ಮಹಡಿಯ ಕಟ್ಟಡ ಕುಸಿತವಾಗಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ 6 ಆ್ಯಂಬುಲೆನ್ಸ್​ಗಳು ಆಗಮಿಸಿವೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಈಗಾಗಲೇ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಐದು ಅಗ್ನಿಶಾಮಕ ವಾಹನಗಳು, ಒಂದು ರಕ್ಷಣಾ ವ್ಯಾನ್ ಮತ್ತು ಆರು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಮುಂಬೈನ ಮುನ್ಸಿಪಲ್ ಕಾರ್ಪೊರೇಶನ್ (ಬಿಎಂಸಿ) ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಾಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ದಾಖಲಾಗುತ್ತಿರುವ ಹೊಸ ಕೊವಿಡ್​ 19 ಕೇಸ್​ಗಳಲ್ಲಿ ಶೇ.89ರಷ್ಟು ಒಮಿಕ್ರಾನ್​ ಪ್ರಕರಣಗಳು; ಸಮೀಕ್ಷೆ ವರದಿ

ಮುಂಬೈ: ಕಮಲಾ ಬಿಲ್ಡಿಂಗ್ ಅಗ್ನಿ ದುರಂತದ ತನಿಖೆಗೆ 4 ಸದಸ್ಯರ ಸಮಿತಿ; 15 ದಿನಗಳಲ್ಲಿ ವರದಿ ಸಲ್ಲಿಸಲು ಸೂಚನೆ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ