AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಯೊಂದರಲ್ಲಿ ಶುಲ್ಕ ಕಟ್ಟಿಲ್ಲವೆಂದು 4 ತಿಂಗಳುಗಳ ಕಾಲ ವಿದ್ಯಾರ್ಥಿನಿಗೆ ಇದೆಂಥಾ ಶಿಕ್ಷೆ

ಖಾಸಗಿ ಶಾಲೆಗಳು ಹಣದ ಆಸೆಯಲ್ಲಿ ಮಾನವೀಯತೆ ಮರೆತಂತಿದೆ. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಶಾಲಾ ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿರುವ ಶುಲ್ಕದ ಹೊರೆಯನ್ನು ಹೊತ್ತುಕೊಳ್ಳಲಾಗದೆ ಪ್ರತಿಭಟಿಸಿರುವ ಹಲವು ನಿದರ್ಶನಗಳಿವೆ.  

ಖಾಸಗಿ ಶಾಲೆಯೊಂದರಲ್ಲಿ ಶುಲ್ಕ ಕಟ್ಟಿಲ್ಲವೆಂದು  4 ತಿಂಗಳುಗಳ ಕಾಲ ವಿದ್ಯಾರ್ಥಿನಿಗೆ ಇದೆಂಥಾ ಶಿಕ್ಷೆ
ನಯನಾ ರಾಜೀವ್
|

Updated on:Apr 12, 2023 | 11:09 AM

Share

ಖಾಸಗಿ ಶಾಲೆಗಳು ಹಣದ ಆಸೆಯಲ್ಲಿ ಮಾನವೀಯತೆ ಮರೆತಂತಿದೆ. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ಶಾಲಾ ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿರುವ ಶುಲ್ಕದ ಹೊರೆಯನ್ನು ಹೊತ್ತುಕೊಳ್ಳಲಾಗದೆ ಪ್ರತಿಭಟಿಸಿರುವ ಹಲವು ನಿದರ್ಶನಗಳಿವೆ.  ಹಾಗೆಯೇ ಏಕಾಏಕಿ ಶುಲ್ಕ ಹೆಚ್ಚಳ ಮಾಡಿರುವ ಹಲವು ಶಾಲೆಗಳ ವಿರುದ್ಧ ಪೋಷಕರು ಪ್ರತಿಭಟನೆಗಳು ಸಾಮಾನ್ಯವಾಗಿವೆ. ಆದರೆ ಶಾಲಾ ಶುಲ್ಕ ಕಟ್ಟಿಲ್ಲವೆಂದು ಶಿಕ್ಷಕರು ವಿದ್ಯಾರ್ಥಿನಿಗೆ ನೀಡಿರುವ ಶಿಕ್ಷೆ ವಿದ್ಯಾರ್ಥಿನಿಯನ್ನು ಮುಜುಗರಕ್ಕೀಡು ಮಾಡಿದೆ. ಮಾನವೀಯತೆ ಮರೆತು ಶಾಲಾ ಸಿಬ್ಬಂದಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ.

ಶಾಲೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯನ್ನು 4 ತಿಂಗಳುಗಳ ಕಾಲ ತರಗತಿಯ ಹೊರಗೆ ನೆಲಕ್ಕೆ ಕುಳಿತು ಪಾಠ ಕೇಳುವ ಶಿಕ್ಷೆಯನ್ನು ವಿಧಿಸಿತ್ತು. ಇದೀಗ ಶಿಕ್ಷಕರಿಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಶುಲ್ಕ ಪಾವತಿಸದ ಕಾರಣಕ್ಕೆ ಮಗು ಮತ್ತು ಪೋಷಕರಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ವಾಸ್ತವವಾಗಿ, ದೇಶದ ಆರ್ಥಿಕ ರಾಜಧಾನಿ ಮುಂಬೈನ ಆಂಗ್ಲ ಮಾಧ್ಯಮ ಶಾಲೆಯ ಪ್ರಕರಣ ಮುನ್ನೆಲೆಗೆ ಬಂದಿದೆ.

ಮತ್ತಷ್ಟು ಓದಿ: ಮಗಳ ಸ್ಕೂಲ್ ಫೀಸ್ ಪಾವತಿಸಲು ಬಡ್ಡಿಗೆ ಸಾಲ ತಂದ ತಾಯಿ; ಶುಲ್ಕ ವಸೂಲಿ ಮಾಡುತ್ತಿರುವ ಹೆಚ್​ಎಂಆರ್ ಶಾಲೆ ವಿರುದ್ಧ ದೂರು ದಾಖಲು

ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಆಕೆಯ ಇಬ್ಬರು ಶಿಕ್ಷಕಿಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಶಾಲಾ ವಿದ್ಯಾರ್ಥಿಯ ತಾಯಿಯ ಪರವಾಗಿ ಪೊಲೀಸರಲ್ಲಿ ಶಾಲೆಯ ಆಡಳಿತದ ವಿರುದ್ಧ ದೂರು ನೀಡಲಾಗಿದೆ.

ಈ ದೂರಿನ ಆಧಾರದ ಮೇಲೆ ಪೊಲೀಸರು ಸೋಮವಾರ ಮುಂಬೈನ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಇಬ್ಬರು ಮಹಿಳಾ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ದೂರಿನಲ್ಲಿ ಪಾಲಕರು 8ನೇ ತರಗತಿಗೆ 7,500 ರೂಶುಲ್ಕಗಳುಶುಲ್ಕ ಪಾವತಿಸದ ಕಾರಣಕ್ಕೆ ವಿದ್ಯಾರ್ಥಿಯನ್ನು 4 ತಿಂಗಳ ಕಾಲ ತರಗತಿಯ ಹೊರಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದ್ದಾನೆ ಎಂದು ಆರೋಪಿಸಿದ್ದಾನೆ. ಇದರ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Wed, 12 April 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?