AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಲ್ಯಾಂಬೊರ್ಗಿನಿ, ಭಯಾನಕ ವಿಡಿಯೋ ನೋಡಿ

ವೇಗವಾಗಿ ಚಲಿಸುತ್ತಿದ್ದ ಐಷಾರಾಮಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಕಿತ್ತಳೆ ಬಣ್ಣದ ಲ್ಯಾಂಬೊರ್ಗಿನಿ ಕಾರು ಜಖಂಗೊಂಡ ಸ್ಥಿತಿಯಲ್ಲಿರುವುದನ್ನು ಕಾಣಬಹುದು. ಅಪಘಾತ(Accident) ಸಂಭವಿಸುವ ಕೆಲ ಸಮಯದ ಮೊದಲು ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿಯಾಗಿ ಹೋಗುತ್ತಿದ್ದ ಕಾರನ್ನು ಕೂಡ ಕಾಣಬಹುದು.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಲ್ಯಾಂಬೊರ್ಗಿನಿ, ಭಯಾನಕ ವಿಡಿಯೋ ನೋಡಿ
ಕಾರು
ನಯನಾ ರಾಜೀವ್
|

Updated on:Sep 22, 2025 | 12:46 PM

Share

ಮುಂಬೈ, ಸೆಪ್ಟೆಂಬರ್ 22: ವೇಗವಾಗಿ ಚಲಿಸುತ್ತಿದ್ದ ಐಷಾರಾಮಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಕಿತ್ತಳೆ ಬಣ್ಣದ ಲ್ಯಾಂಬೊರ್ಗಿನಿ ಕಾರು ಜಖಂಗೊಂಡ ಸ್ಥಿತಿಯಲ್ಲಿರುವುದನ್ನು ಕಾಣಬಹುದು. ಅಪಘಾತ(Accident) ಸಂಭವಿಸುವ ಕೆಲ ಸಮಯದ ಮೊದಲು ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿಯಾಗಿ ಹೋಗುತ್ತಿದ್ದ ಕಾರನ್ನು ಕೂಡ ಕಾಣಬಹುದು.

ಈ ಐಷಾರಾಮಿ ಕಾರಿನ ಮುಂಭಾಗಕ್ಕೆ ಹೆಚ್ಚಿನ ಹಾನಿಯಾಗಿದೆ. ಬಂಪರ್​ಗೆ ಹಾನಿಯಾಗಿದೆ. ಮುಂಭಾಗದ ಟ್ರಂಕ್ ತೆರೆದಿರುವುದನ್ನು ಕಾಣಬಹುದು. ಮಾಹಿತಿ ಪಡೆದ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದು, ಯಾರಿಗೂ ಗಾಯಗಳಾಗಿರುವ ಕುರಿತು ವರದಿಯಾಗಿಲ್ಲ. ರೇಮಂಡ್ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನಿಯಾ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಮತ್ತಷ್ಟು ಓದಿ: ಗದಗ ಭೀಕರ ಅಪಘಾತ: ಹಸೆಮಣೆ ಏರಬೇಕಿದ್ದ ಇಬ್ಬರು ಪೊಲೀಸ್​ ಕಾನ್ಸ್​​ಟೇಬಲ್​​​ ಸೇರಿ ಮೂವರು ಸಾವು

ಪಿಟಿಐ ವರದಿ ಮಾಡಿರುವ ಪೊಲೀಸರ ಪ್ರಕಾರ, ಮಳೆಯಿಂದ ನೆನೆದ ರಸ್ತೆಗಳಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಕಾರಿನ ಚಾಲಕನನ್ನು 52 ವರ್ಷದ ಅತಿಶ್ ಶಾ ಎಂದು ಗುರುತಿಸಲಾಗಿದ್ದು, ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆಯಲ್ಲಿ ಸ್ಕಿಡ್ ಆಗಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಾರು ಅಪಘಾತದ ವಿಡಿಯೋ

ಶಾ ಅವರು ನೆಪಿಯನ್ ಸಮುದ್ರ ಬಳಿಯ ರಸ್ತೆಯಿಂದ ದಕ್ಷಿಣ ಮುಂಬೈನ ಕೊಲಾಬಾಗೆ ಕಾರಿನಲ್ಲಿ ಹೋಗುತ್ತಿದ್ದರು. ಅಧಿಕಾರಿಯ ಪ್ರಕಾರ, ಹಾನಿಗೊಳಗಾದ ಕಾರನ್ನು ನಂತರ ರಸ್ತೆಯಿಂದ ದೂರಕ್ಕೆ ಎಳೆದುಕೊಂಡು ಹೋಗಲಾಯಿತು. ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬೆಳಗಿನ ಜಾವ ಮಳೆ ಸುರಿದ ನಂತರ ರಸ್ತೆ ಒದ್ದೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:43 pm, Mon, 22 September 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!