AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾರ್ಟಿ ಮುಗಿಸಿ ಕುಡಿದ ಮತ್ತಿನಲ್ಲಿ ಸ್ನೇಹಿತನಿಂದ ಬಿಎಂಡಬ್ಲ್ಯೂ ಕಾರು ಚಾಲನೆ, ಬಿಎಂಸಿ ಟ್ರಕ್​ಗೆ ಡಿಕ್ಕಿ, ಗಗನಸಖಿ ಸಾವು

ವೈಯಕ್ತಿಕ ಕೆಲಸಕ್ಕಾಗಿ ದೆಹಲಿಯಿಂದ ಮುಂಬೈಗೆ ಬಂದಿದ್ದ ಗಗನಸಖಿ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

Video: ಪಾರ್ಟಿ ಮುಗಿಸಿ ಕುಡಿದ ಮತ್ತಿನಲ್ಲಿ ಸ್ನೇಹಿತನಿಂದ ಬಿಎಂಡಬ್ಲ್ಯೂ ಕಾರು ಚಾಲನೆ, ಬಿಎಂಸಿ ಟ್ರಕ್​ಗೆ ಡಿಕ್ಕಿ, ಗಗನಸಖಿ ಸಾವು
ಪಲ್ಲವಿ
ನಯನಾ ರಾಜೀವ್
|

Updated on: May 15, 2023 | 10:32 AM

Share

ವೈಯಕ್ತಿಕ ಕೆಲಸಕ್ಕಾಗಿ ದೆಹಲಿಯಿಂದ ಮುಂಬೈಗೆ ಬಂದಿದ್ದ ಗಗನಸಖಿ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಆಕೆಯ ಸ್ನೇಹಿತ ಕುಡಿದ ಅಮಲಿನಲ್ಲಿ ಬಿಎಂಡಬ್ಲ್ಯೂ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ, ನಿಯಂತ್ರಣ ತಪ್ಪಿ ಬಿಎಂಸಿ ಟ್ರಕ್​ಗೆ ಡಿಕ್ಕಿ ಹೊಡೆದಿದ್ದಾರೆ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಜುಹು ಪ್ರದೇಶದಲ್ಲಿ ಘಟನೆ ನಡೆದಿದೆ.

ಜುಹು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮೃತರನ್ನು ಪಲ್ಲವಿ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ, ಅವರು ದೆಹಲಿ ನಿವಾಸಿಯಾಗಿದ್ದು, ಮೂಲತಃ ಪಶ್ಚಿಮ ಬಂಗಾಳದ ಕೋಲ್ಕತ್ತಾದವರು. ಅವರು ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗಷ್ಟೇ ಕೆಲಸ ಬದಲಾಯಿಸಿ ಬೇರೊಂದು ವಿಮಾನ ಕಂಪನಿಗೆ ಸೇರ್ಪಡೆಯಾಗಿದ್ದರು. ಲೇಸರ್ ಸರ್ಜರಿಗಾಗಿ ಮುಂಬೈಗೆ ಬಂದಿದ್ದರು ಎನ್ನಲಾಗಿದೆ. ಯುವಕ 120 ಕಿ.ಮೀ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಅರ್ಧವ್ಯು ಎಂಬುವವರು ಪಲ್ಲವಿಯ ಸ್ನೇಹಿತನಾಗಿದ್ದ,  ಭಾರತಿ ದಿಲ್​ಪ್ರಸಾದ್ ರೈ ಹಾಗೂ ಅಂಕಿತ್ ನರೇಂದ್ರ ಖರೆ ಎಂಬುವವರ ಜತೆ ರೆಸ್ಟೊ ಬಾರ್​ಗೆ ತೆರಳಿದ್ದರು.

ಮತ್ತಷ್ಟು ಓದಿ: Chhattisgarh Accident: ಛತ್ತೀಸ್​ಗಢದಲ್ಲಿ ಟ್ರಕ್​ ಹಾಗೂ ಪಿಕಪ್ ವ್ಯಾನ್ ನಡುವೆ ಅಪಘಾತ, 6 ಮಂದಿ ಸಾವು, 25 ಜನರಿಗೆ ಗಾಯ

ಬೆಳಗಿನ ಜಾವ ಸುಮಾರು 2.30ರ ಸಮಯದಲ್ಲಿ ಬಾಂದೇಕರ್ ಅವರ ತಾಯಿಯ ಬಿಎಂಡಬ್ಲ್ಯೂ ಕಾರಿನಲ್ಲಿ ಹಿಂದಿರುಗುತ್ತಿದ್ದರು, ಕುಡಿದು ಚಾಲನೆ ಮಾಡುತ್ತಿದ್ದರು. ಕಾರು ಬಿಎಂಸಿ ಕಸದ ಲಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲರೂ ತೀವ್ರವಾಗಿ ಗಾಯಗೊಂಡಿದ್ದಾರೆ, ಪಲ್ಲವಿ ಭಟ್ಟಾಚಾರ್ಯ ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ