AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪಾರ್ಟಿ ಮುಗಿಸಿ ಕುಡಿದ ಮತ್ತಿನಲ್ಲಿ ಸ್ನೇಹಿತನಿಂದ ಬಿಎಂಡಬ್ಲ್ಯೂ ಕಾರು ಚಾಲನೆ, ಬಿಎಂಸಿ ಟ್ರಕ್​ಗೆ ಡಿಕ್ಕಿ, ಗಗನಸಖಿ ಸಾವು

ವೈಯಕ್ತಿಕ ಕೆಲಸಕ್ಕಾಗಿ ದೆಹಲಿಯಿಂದ ಮುಂಬೈಗೆ ಬಂದಿದ್ದ ಗಗನಸಖಿ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

Video: ಪಾರ್ಟಿ ಮುಗಿಸಿ ಕುಡಿದ ಮತ್ತಿನಲ್ಲಿ ಸ್ನೇಹಿತನಿಂದ ಬಿಎಂಡಬ್ಲ್ಯೂ ಕಾರು ಚಾಲನೆ, ಬಿಎಂಸಿ ಟ್ರಕ್​ಗೆ ಡಿಕ್ಕಿ, ಗಗನಸಖಿ ಸಾವು
ಪಲ್ಲವಿ
ನಯನಾ ರಾಜೀವ್
|

Updated on: May 15, 2023 | 10:32 AM

Share

ವೈಯಕ್ತಿಕ ಕೆಲಸಕ್ಕಾಗಿ ದೆಹಲಿಯಿಂದ ಮುಂಬೈಗೆ ಬಂದಿದ್ದ ಗಗನಸಖಿ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಆಕೆಯ ಸ್ನೇಹಿತ ಕುಡಿದ ಅಮಲಿನಲ್ಲಿ ಬಿಎಂಡಬ್ಲ್ಯೂ ಕಾರು ಚಲಾಯಿಸುತ್ತಿದ್ದ ಎನ್ನಲಾಗಿದೆ, ನಿಯಂತ್ರಣ ತಪ್ಪಿ ಬಿಎಂಸಿ ಟ್ರಕ್​ಗೆ ಡಿಕ್ಕಿ ಹೊಡೆದಿದ್ದಾರೆ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಜುಹು ಪ್ರದೇಶದಲ್ಲಿ ಘಟನೆ ನಡೆದಿದೆ.

ಜುಹು ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮೃತರನ್ನು ಪಲ್ಲವಿ ಭಟ್ಟಾಚಾರ್ಯ ಎಂದು ಗುರುತಿಸಲಾಗಿದೆ, ಅವರು ದೆಹಲಿ ನಿವಾಸಿಯಾಗಿದ್ದು, ಮೂಲತಃ ಪಶ್ಚಿಮ ಬಂಗಾಳದ ಕೋಲ್ಕತ್ತಾದವರು. ಅವರು ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗಷ್ಟೇ ಕೆಲಸ ಬದಲಾಯಿಸಿ ಬೇರೊಂದು ವಿಮಾನ ಕಂಪನಿಗೆ ಸೇರ್ಪಡೆಯಾಗಿದ್ದರು. ಲೇಸರ್ ಸರ್ಜರಿಗಾಗಿ ಮುಂಬೈಗೆ ಬಂದಿದ್ದರು ಎನ್ನಲಾಗಿದೆ. ಯುವಕ 120 ಕಿ.ಮೀ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಅರ್ಧವ್ಯು ಎಂಬುವವರು ಪಲ್ಲವಿಯ ಸ್ನೇಹಿತನಾಗಿದ್ದ,  ಭಾರತಿ ದಿಲ್​ಪ್ರಸಾದ್ ರೈ ಹಾಗೂ ಅಂಕಿತ್ ನರೇಂದ್ರ ಖರೆ ಎಂಬುವವರ ಜತೆ ರೆಸ್ಟೊ ಬಾರ್​ಗೆ ತೆರಳಿದ್ದರು.

ಮತ್ತಷ್ಟು ಓದಿ: Chhattisgarh Accident: ಛತ್ತೀಸ್​ಗಢದಲ್ಲಿ ಟ್ರಕ್​ ಹಾಗೂ ಪಿಕಪ್ ವ್ಯಾನ್ ನಡುವೆ ಅಪಘಾತ, 6 ಮಂದಿ ಸಾವು, 25 ಜನರಿಗೆ ಗಾಯ

ಬೆಳಗಿನ ಜಾವ ಸುಮಾರು 2.30ರ ಸಮಯದಲ್ಲಿ ಬಾಂದೇಕರ್ ಅವರ ತಾಯಿಯ ಬಿಎಂಡಬ್ಲ್ಯೂ ಕಾರಿನಲ್ಲಿ ಹಿಂದಿರುಗುತ್ತಿದ್ದರು, ಕುಡಿದು ಚಾಲನೆ ಮಾಡುತ್ತಿದ್ದರು. ಕಾರು ಬಿಎಂಸಿ ಕಸದ ಲಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲರೂ ತೀವ್ರವಾಗಿ ಗಾಯಗೊಂಡಿದ್ದಾರೆ, ಪಲ್ಲವಿ ಭಟ್ಟಾಚಾರ್ಯ ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ