AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ದಾಳಿಯ ಮಾಸ್ಟರ್​​ಮೈಂಡ್​ ರಾಣಾಗೆ NIA ಕಚೇರಿಯಲ್ಲಿ ಭಾರಿ ಭದ್ರತೆ: 24/7 ಪೊಲೀಸ್​ ಸೇರಿ ಸಿಸಿಟಿವಿ ಕಣ್ಗಾವಲು

ಮುಂಬೈನಲ್ಲಿ 2008ರಂದು ಉಗ್ರರ ದಾಳಿಯ ರೂವಾರಿ ಆಗಿರುವ ರಾಣಾನನ್ನು ಸೂಕ್ತ ಭದ್ರತೆಯೊಂದಿಗೆ ದೆಹಲಿಯ ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಧಾನ ಕಚೇರಿಯ ನೆಲಮಡಿಯಲ್ಲಿ ಆತ್ಮಹತ್ಯೆ ಕಣ್ಗಾವಲಿನಲ್ಲಿ ಇರಿಸಲಾಗಿದೆ. ಸದ್ಯ ರಾಣಾನನ್ನು 18 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಎನ್ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.

ಮುಂಬೈ ದಾಳಿಯ ಮಾಸ್ಟರ್​​ಮೈಂಡ್​ ರಾಣಾಗೆ NIA ಕಚೇರಿಯಲ್ಲಿ ಭಾರಿ ಭದ್ರತೆ: 24/7 ಪೊಲೀಸ್​ ಸೇರಿ ಸಿಸಿಟಿವಿ ಕಣ್ಗಾವಲು
ತಹವ್ವುರ್ ರಾಣಾ
Follow us
ಗಂಗಾಧರ​ ಬ. ಸಾಬೋಜಿ
|

Updated on: Apr 12, 2025 | 10:39 AM

ದೆಹಲಿ, ಏಪ್ರಿಲ್​ 12: ಭಾರತಕ್ಕೆ ಬಂದಿಳಿದಿರುವ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು (Tahawwur Rana) ಎನ್​ಐಎ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಮೊನ್ನೆಯಷ್ಟೇ ಕೋರ್ಟ್​ಗೆ ಹಾಜರು ಪಡಿಸಲಾಗಿದ್ದು, ಜಡ್ಜ್ 18 ದಿನಗಳ ಕಾಲ ರಾಣಾನನ್ನು NIA ಕಸ್ಟಡಿಗೆ ನೀಡಿ ಆದೇಶಿಸಿತ್ತು. ಸದ್ಯ ದೆಹಲಿಯ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಧಾನ ಕಚೇರಿಯ ನೆಲ ಮಹಡಿಯಲ್ಲಿರುವ 14×14 ಅಡಿ ಸೆಲ್‌ನಲ್ಲಿ ಇರಿಸಲಾಗಿದ್ದು, ತಮಗೆ ತಾವೇ ಹಾನಿ ಮಾಡಿಕೊಳ್ಳದಂತೆ ಆತ್ಮಹತ್ಯೆ ಕಣ್ಗಾವಲಿನಲ್ಲಿ ಇರಿಸಲಾಗಿದೆ. ಜೊತೆಗೆ 24 ಗಂಟೆ ಪೊಲೀಸ್​ ಸೇರಿದಂತೆ ಸಿಸಿಟಿವಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ವರದಿ ಆಗಿದೆ.

ರಾಣಾನನ್ನು ಬರೋಬ್ಬರಿ 17 ವರ್ಷಗಳ ಬಳಿಕ ಭಾರತಕ್ಕೆ ಕರೆತರಲಾಗಿದೆ. ಎನ್​ಐಎ ಅಧಿಕಾರಿಗಳು ಕೋಳ ತೊಡಿಸಿ ಆತನನ್ನು ಎಳೆದು ತಂದಿದ್ದಾರೆ. ತಹವ್ವುರ್ ರಾಣಾ ಪಾಕ್ ಮೂಲತಃ ಪಾಕಿಸ್ತಾನ ಮೂಲದವನಾಗಿದ್ದಾನೆ. ಸದ್ಯ ಈತನನ್ನು ಲೋಧಿ ರಸ್ತೆಯಲ್ಲಿರುವ ಎನ್‌ಐಎ ಪ್ರಧಾನ ಕಚೇರಿಯ ನೆಲ ಮಹಡಿಯಲ್ಲಿ ಸೂಕ್ತ ಭದ್ರತೆಯಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಬಂಧನ

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಸದ್ಯ ರಾಣಾನನ ವಿಚಾರಣೆ ನಡೆಸುತ್ತಿರುವ ಎನ್​ಐಎ ತಂಡ ಇತ್ತ ಪಾಕಿಸ್ತಾನ ಆರ್ಮಿಯಲ್ಲಿ ವೈದ್ಯನಾಗಿ ಸಲ್ಲಿಸಿದ ಸೇವೆಯಿಂದ ಹಿಡಿದು, ಮುಂಬೈ ದಾಳಿಯ ಸುಪಾರಿ ಕೊಟಿದ್ದು ಯಾರು ಮತ್ತು ಹೇಗೆ ಕೊಟ್ಟರು, ಪಾಕಿಸ್ತಾನದ ಐಎಸ್​ಐ ಜತೆ ಸಂಪರ್ಕದಲ್ಲಿದ್ದನಾ? ಅಥವಾ ಇತನೇ ಐಎಸ್‌ಎ ಎಜೆಂಟ್‌ನಾ? ಇತನ ಜತೆ ಭಾರತದಲ್ಲಿ ಸಂಪರ್ಕದಲ್ಲಿದ್ದವರು ಯಾರು ಯಾರು? ಸ್ಲಿಪರ್‌ ಸೆಲ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದವರು ಯಾರು? ಇನ್ನೂ ಈ ಸ್ಲೀಪರ್‌ ಸೆಲ್‌ಗಳು ಆ್ಯಕ್ಟಿವ್ ಆಗಿವೆಯಾ? ಎಂಬ ಹತ್ತು ಹಲವಾರು ಪ್ರಶ್ನೆಗಳು ಮತ್ತು ಆಯಾಮಗಳ ಮೇಲೆ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಅಮೆರಿಕದಿಂದ ಭಾರತಕ್ಕೆ ಬಂದಿಳಿದ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ

ಮುಂಬೈನಲ್ಲಿ 2008ರಂದು ಉಗ್ರರ ದಾಳಿಯ ರೂವಾರಿ ಆಗಿರುವ ರಾಣಾಗೆ ಎನ್​ಐಎ ವಿಚಾರಣೆ ನಡೆಸಿ ಸತ್ಯ ಕಕ್ಕಿಸುತ್ತಿದೆ. 26/11ರಂದು 166ಕ್ಕೂ ಹೆಚ್ಚು ಅಮಾಯಕ ಪ್ರಾಣ ತೆಗೆದಿದ್ದ ರಾಣಾ ಮತ್ತಷ್ಟು ಸ್ಪೋಟಕ ಸಂಗತಿ ಬಾಯಿ ಬಿಡುವ ಸಾಧ್ಯತೆ ಇದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ 

ಇನ್ನು ಮುಂಬೈ ದಾಳಿ ಮಾಸ್ಟರ್ ಮೈಂಡ್ ತಹವ್ವುರ್ ರಾಣಾನನ್ನು ಭಾರತಕ್ಕೆ ಕರೆದುಕೊಂಡು ಬಂದಿರುವುದು ಸದ್ಯ ಕೇಂದ್ರ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬೆಳವಣಿಗೆಗಳಿಂದ ಪ್ರಧಾನಿ ಮೋದಿ ಸರ್ಕಾರ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿದೆ ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು