AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai Bandra Terminus stampede: ಮುಂಬೈನ ಬಾಂದ್ರಾ ರೈಲು ಟರ್ಮಿನಸ್​ನ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ 6 ಗಂಟೆಗೆ ಸ್ವಲ್ಪ ಮುಂಚೆ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು,  ಕಾಲ್ತುಳಿತ; 9 ಮಂದಿಗೆ ಗಾಯ
ಬಾಂದ್ರಾ ರೈಲು ನಿಲ್ದಾಣ
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Oct 27, 2024 | 10:48 AM

Share

ಮುಂಬೈ, ಅಕ್ಟೋಬರ್ 27: ಮಹಾರಾಷ್ಟ್ರ ರಾಜಧಾನಿನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ, ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್​ನ ಒಂದನೇ ಪ್ಲಾಟ್​ಫಾರ್ಮ್​ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ಸಂಭವಿಸಿರುವುದು ತಿಳಿದುಬಂದಿದೆ.

ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಬಂದ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್​ನ ಪ್ಲಾಟ್​ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್​ಪುರ್ ಎಕ್ಸ್​ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಆದ ಕಾರಣ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್​ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ. ಗಾಯಗೊಂಡ ಒಂಬತ್ತು ಮಂದಿ ಪೈಕಿ ಏಳು ಮಂದಿ ಸ್ಥಿತಿ ಚಿಂತೆ ಪಡುವಷ್ಟು ಇಲ್ಲ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್​ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಗೆತನದಿಂದ ಉಪಯೋಗವಿಲ್ಲ, ಸಂಯಮವಿರಲಿ; ಇರಾನ್ ಮೇಲೆ ಇಸ್ರೇಲ್ ದಾಳಿಗೆ ಭಾರತ ಕಳವಳ

ಬಾಂದ್ರಾದಿಂದ ಗೋರಖ್​ಪುರಕ್ಕೆ ಹೋಗಲು ಟ್ರೈನ್ ನಂಬರ್ 22921 ನಿಂತಿತ್ತು. ಅವಘಡದ ಸ್ಥಳದ ದೃಶ್ಯಾವಳಿ ಹರಿದಾಡುತ್ತಿದ್ದು, ಒಂದನೇ ಪ್ಲಾಟ್​ಫಾರ್ಮ್​ನ ನೆಲದ ಮೇಲೆ ರಕ್ತದ ಕಲೆಗಳು ಕಾಣಸಿಗುತ್ತಿತ್ತು. ರೈಲ್ವೆ ಪೊಲೀಸ್ ಮತ್ತು ಇತರ ಪ್ರಯಾಣಿಕರು ಗಾಯಾಳುಗಳಿಗೆ ನೆರವಾಗುತ್ತಿದ್ದುದನ್ನು ಈ ದೃಶ್ಯಗಳಲ್ಲಿ ಕಂಡುಬಂದಿವೆ.

ರೈಲು ನಿಲ್ದಾಣಗಳ ಕುಖ್ಯಾತಿ…

ಮುಂಬೈನ ರೈಲು ನಿಲ್ದಾಣಗಳು ಕಾಲ್ತುಳಿತ ಘಟನೆಗಳಿಗೆ ಕುಖ್ಯಾತಿ ಪಡೆದಿವೆ. ಅಲ್ಲಿಯ ಹೆಚ್ಚಿನ ರೈಲುಗಳು ಸದಾ ಕಿಕ್ಕಿರಿದಿರುತ್ತವೆ. 2017ರ ಘಟನೆಯಲ್ಲಂತೂ 23 ಜನರು ಅಸು ನೀಗಿದ್ದರು. ಎಲ್ಫಿನ್​ಸ್ಟೋನ್ ರೋಡ್ ರೈಲ್ವೆ ನಿಲ್ದಾಣದ ಕಾಲ್ಸೇತುವೆಯೊಂದರಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತವಾಗಿ 23 ಮಂದಿ ಪ್ರಾಣ ಕಳೆದುಕೊಂಡಿದ್ದರು. 39 ಮಂದಿಗೆ ಗಾಯವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:58 am, Sun, 27 October 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!