AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai Bandra Terminus stampede: ಮುಂಬೈನ ಬಾಂದ್ರಾ ರೈಲು ಟರ್ಮಿನಸ್​ನ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ 6 ಗಂಟೆಗೆ ಸ್ವಲ್ಪ ಮುಂಚೆ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು,  ಕಾಲ್ತುಳಿತ; 9 ಮಂದಿಗೆ ಗಾಯ
ಬಾಂದ್ರಾ ರೈಲು ನಿಲ್ದಾಣ
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Oct 27, 2024 | 10:48 AM

Share

ಮುಂಬೈ, ಅಕ್ಟೋಬರ್ 27: ಮಹಾರಾಷ್ಟ್ರ ರಾಜಧಾನಿನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ, ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್​ನ ಒಂದನೇ ಪ್ಲಾಟ್​ಫಾರ್ಮ್​ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ಸಂಭವಿಸಿರುವುದು ತಿಳಿದುಬಂದಿದೆ.

ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಬಂದ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್​ನ ಪ್ಲಾಟ್​ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್​ಪುರ್ ಎಕ್ಸ್​ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಆದ ಕಾರಣ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್​ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ. ಗಾಯಗೊಂಡ ಒಂಬತ್ತು ಮಂದಿ ಪೈಕಿ ಏಳು ಮಂದಿ ಸ್ಥಿತಿ ಚಿಂತೆ ಪಡುವಷ್ಟು ಇಲ್ಲ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್​ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಗೆತನದಿಂದ ಉಪಯೋಗವಿಲ್ಲ, ಸಂಯಮವಿರಲಿ; ಇರಾನ್ ಮೇಲೆ ಇಸ್ರೇಲ್ ದಾಳಿಗೆ ಭಾರತ ಕಳವಳ

ಬಾಂದ್ರಾದಿಂದ ಗೋರಖ್​ಪುರಕ್ಕೆ ಹೋಗಲು ಟ್ರೈನ್ ನಂಬರ್ 22921 ನಿಂತಿತ್ತು. ಅವಘಡದ ಸ್ಥಳದ ದೃಶ್ಯಾವಳಿ ಹರಿದಾಡುತ್ತಿದ್ದು, ಒಂದನೇ ಪ್ಲಾಟ್​ಫಾರ್ಮ್​ನ ನೆಲದ ಮೇಲೆ ರಕ್ತದ ಕಲೆಗಳು ಕಾಣಸಿಗುತ್ತಿತ್ತು. ರೈಲ್ವೆ ಪೊಲೀಸ್ ಮತ್ತು ಇತರ ಪ್ರಯಾಣಿಕರು ಗಾಯಾಳುಗಳಿಗೆ ನೆರವಾಗುತ್ತಿದ್ದುದನ್ನು ಈ ದೃಶ್ಯಗಳಲ್ಲಿ ಕಂಡುಬಂದಿವೆ.

ರೈಲು ನಿಲ್ದಾಣಗಳ ಕುಖ್ಯಾತಿ…

ಮುಂಬೈನ ರೈಲು ನಿಲ್ದಾಣಗಳು ಕಾಲ್ತುಳಿತ ಘಟನೆಗಳಿಗೆ ಕುಖ್ಯಾತಿ ಪಡೆದಿವೆ. ಅಲ್ಲಿಯ ಹೆಚ್ಚಿನ ರೈಲುಗಳು ಸದಾ ಕಿಕ್ಕಿರಿದಿರುತ್ತವೆ. 2017ರ ಘಟನೆಯಲ್ಲಂತೂ 23 ಜನರು ಅಸು ನೀಗಿದ್ದರು. ಎಲ್ಫಿನ್​ಸ್ಟೋನ್ ರೋಡ್ ರೈಲ್ವೆ ನಿಲ್ದಾಣದ ಕಾಲ್ಸೇತುವೆಯೊಂದರಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತವಾಗಿ 23 ಮಂದಿ ಪ್ರಾಣ ಕಳೆದುಕೊಂಡಿದ್ದರು. 39 ಮಂದಿಗೆ ಗಾಯವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:58 am, Sun, 27 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ