AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai Bandra Terminus stampede: ಮುಂಬೈನ ಬಾಂದ್ರಾ ರೈಲು ಟರ್ಮಿನಸ್​ನ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ 6 ಗಂಟೆಗೆ ಸ್ವಲ್ಪ ಮುಂಚೆ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು,  ಕಾಲ್ತುಳಿತ; 9 ಮಂದಿಗೆ ಗಾಯ
ಬಾಂದ್ರಾ ರೈಲು ನಿಲ್ದಾಣ
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Oct 27, 2024 | 10:48 AM

Share

ಮುಂಬೈ, ಅಕ್ಟೋಬರ್ 27: ಮಹಾರಾಷ್ಟ್ರ ರಾಜಧಾನಿನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ, ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್​ನ ಒಂದನೇ ಪ್ಲಾಟ್​ಫಾರ್ಮ್​ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ಸಂಭವಿಸಿರುವುದು ತಿಳಿದುಬಂದಿದೆ.

ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಬಂದ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್​ನ ಪ್ಲಾಟ್​ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್​ಪುರ್ ಎಕ್ಸ್​ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಆದ ಕಾರಣ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್​ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ. ಗಾಯಗೊಂಡ ಒಂಬತ್ತು ಮಂದಿ ಪೈಕಿ ಏಳು ಮಂದಿ ಸ್ಥಿತಿ ಚಿಂತೆ ಪಡುವಷ್ಟು ಇಲ್ಲ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್​ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಗೆತನದಿಂದ ಉಪಯೋಗವಿಲ್ಲ, ಸಂಯಮವಿರಲಿ; ಇರಾನ್ ಮೇಲೆ ಇಸ್ರೇಲ್ ದಾಳಿಗೆ ಭಾರತ ಕಳವಳ

ಬಾಂದ್ರಾದಿಂದ ಗೋರಖ್​ಪುರಕ್ಕೆ ಹೋಗಲು ಟ್ರೈನ್ ನಂಬರ್ 22921 ನಿಂತಿತ್ತು. ಅವಘಡದ ಸ್ಥಳದ ದೃಶ್ಯಾವಳಿ ಹರಿದಾಡುತ್ತಿದ್ದು, ಒಂದನೇ ಪ್ಲಾಟ್​ಫಾರ್ಮ್​ನ ನೆಲದ ಮೇಲೆ ರಕ್ತದ ಕಲೆಗಳು ಕಾಣಸಿಗುತ್ತಿತ್ತು. ರೈಲ್ವೆ ಪೊಲೀಸ್ ಮತ್ತು ಇತರ ಪ್ರಯಾಣಿಕರು ಗಾಯಾಳುಗಳಿಗೆ ನೆರವಾಗುತ್ತಿದ್ದುದನ್ನು ಈ ದೃಶ್ಯಗಳಲ್ಲಿ ಕಂಡುಬಂದಿವೆ.

ರೈಲು ನಿಲ್ದಾಣಗಳ ಕುಖ್ಯಾತಿ…

ಮುಂಬೈನ ರೈಲು ನಿಲ್ದಾಣಗಳು ಕಾಲ್ತುಳಿತ ಘಟನೆಗಳಿಗೆ ಕುಖ್ಯಾತಿ ಪಡೆದಿವೆ. ಅಲ್ಲಿಯ ಹೆಚ್ಚಿನ ರೈಲುಗಳು ಸದಾ ಕಿಕ್ಕಿರಿದಿರುತ್ತವೆ. 2017ರ ಘಟನೆಯಲ್ಲಂತೂ 23 ಜನರು ಅಸು ನೀಗಿದ್ದರು. ಎಲ್ಫಿನ್​ಸ್ಟೋನ್ ರೋಡ್ ರೈಲ್ವೆ ನಿಲ್ದಾಣದ ಕಾಲ್ಸೇತುವೆಯೊಂದರಲ್ಲಿ ನೂಕುನುಗ್ಗಲಿನಿಂದ ಕಾಲ್ತುಳಿತವಾಗಿ 23 ಮಂದಿ ಪ್ರಾಣ ಕಳೆದುಕೊಂಡಿದ್ದರು. 39 ಮಂದಿಗೆ ಗಾಯವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:58 am, Sun, 27 October 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್