AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿ, ಹೆಗ್ಗಳಿಕೆಗೆ ಪಾತ್ರವಾದ ಜಿಲ್ಲೆ ಇದು; ಕೊವಿನ್​ ಆ್ಯಪ್​​ನಲ್ಲಿ ಮಾಹಿತಿ ಬಿಡುಗಡೆ

ಮುಂಬೈನಲ್ಲಿ ಇದುವರೆಗೆ ಒಟ್ಟು 507 ಕೇಂದ್ರಗಳಲ್ಲಿ ಕೊವಿಡ್​ 19 ಲಸಿಕೆ ನೀಡಲಾಗಿದೆ. ಅದರಲ್ಲಿ 325 ಸರ್ಕಾರಿ ಕೊರೊನಾ ಲಸಿಕೆ ಕೇಂದ್ರಗಳಾಗಿದ್ದು, 182 ಖಾಸಗಿ ಆಸ್ಪತ್ರೆಗಳ ಕೇಂದ್ರಗಳಾಗಿವೆ.

1 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿ, ಹೆಗ್ಗಳಿಕೆಗೆ ಪಾತ್ರವಾದ ಜಿಲ್ಲೆ ಇದು; ಕೊವಿನ್​ ಆ್ಯಪ್​​ನಲ್ಲಿ ಮಾಹಿತಿ ಬಿಡುಗಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 04, 2021 | 1:20 PM

Share

ಇದುವರೆಗೆ 1 ಕೋಟಿಗೂ ಅಧಿಕ ಡೋಸ್​ ಲಸಿಕೆ (Covid 19 Vaccine) ನೀಡಿದ ದೇಶದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಮುಂಬೈ (Mumbai) ಪಾತ್ರವಾಗಿದೆ. ದೇಶದಲ್ಲಿ ಜನವರಿಯಿಂದ ಕೊವಿಡ್​ 19 ಲಸಿಕೆ ಅಭಿಯಾನ ಶುರುವಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಮುಂಬೈನಲ್ಲಿ 1,00,63,497 ಡೋಸ್​ ಲಸಿಕೆ ನೀಡಲಾಗಿದೆ. 72,75,134 ಜನರಿಗೆ ಮೊದಲ ಡೋಸ್​ ಮಾತ್ರ ಲಸಿಕೆ ಪಡೆದಿದ್ದು, 27,88,363 ಜನರಿಗೆ ಎರಡೂ ಡೋಸ್​ ಸಂಪೂರ್ಣವಾಗಿದೆ. ಈ ಬಗ್ಗೆ ಕೊವಿನ್​ ಆ್ಯಪ್ (CoWIN App)​​ನಲ್ಲಿ ಅಪ್​ಡೇಟ್​ ಆಗಿದೆ.

ಮುಂಬೈನಲ್ಲಿ ಇದುವರೆಗೆ ಒಟ್ಟು 507 ಕೇಂದ್ರಗಳಲ್ಲಿ ಕೊವಿಡ್​ 19 ಲಸಿಕೆ ನೀಡಲಾಗಿದೆ. ಅದರಲ್ಲಿ 325 ಸರ್ಕಾರಿ ಕೊರೊನಾ ಲಸಿಕೆ ಕೇಂದ್ರಗಳಾಗಿದ್ದು, 182 ಖಾಸಗಿ ಆಸ್ಪತ್ರೆಗಳ ಕೇಂದ್ರಗಳಾಗಿವೆ. ಕಳೆದ 30 ದಿನಗಳಲ್ಲಿ ಆಗಸ್ಟ್​​ 27ರಂದು ಅತಿಹೆಚ್ಚು ಅಂದರೆ 1,77,017 ಜನರಿಗೆ ಕೊವಿಡ್ 19 ಲಸಿಕೆ ನೀಡಲಾಗಿದೆ. ಹಾಗೇ, ಆಗಸ್ಟ್​ 21ರಂದು 1,63,775 ಡೋಸ್, ಆಗಸ್ಟ್​ 23ರಂದು 1,53,881 ಡೋಸ್​ ಲಸಿಕೆ ನೀಡಲಾಗಿದೆ ಎಂದು ಕೊವಿನ್​​ನಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈನಲ್ಲಿ ಕಳೆದ ಮೂರು ದಿನಗಳಿಂದ, ಒಂದು ದಿನದಲ್ಲಿ 400ಕ್ಕೂ ಅಧಿಕ ಕೊವಿಡ್​ 19 ಪ್ರಕರಣಗಳು ದಾಖಲಾಗುತ್ತಿವೆ. ಹಾಗೇ, ಶುಕ್ರವಾರ ಕೂಡ 422 ಕೇಸ್​ಗಳು ದಾಖಲಾಗಿವೆ. ಇದೀಗ ಒಟ್ಟಾರೆ ಸೋಂಕಿತರ ಸಂಖ್ಯೆ  7,45,434ಕ್ಕೆ ಏರಿಕೆಯಾಗಿದ್ದು, ಇಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ  15,987ಕ್ಕೆ ಏರಿದೆ ಎಂದು ಬೃಹನ್​ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ (BMC) ಮಾಹಿತಿ ನೀಡಿದೆ.  ಏಪ್ರಿಲ್​ನಲ್ಲಿ ಮುಂಬೈನಲ್ಲಿ ಒಂದು ದಿನದಲ್ಲಿ 11,163 ಕೊವಿಡ್​ 19 ಪ್ರಕರಣಗಳು ದಾಖಲಾಗಿದ್ದು, ಸದ್ಯ ಈ ವರ್ಷದ ಅತ್ಯಂತ ಹೆಚ್ಚು ಕೇಸ್​ಗಳು ಅದೇ ಆಗಿದೆ. ಇನ್ನು ಕೊವಿಡ್​ 19 ಶುರುವಾದಾಗಿನಿಂದಲೂ ಮುಂಬೈ-ಮಹಾರಾಷ್ಟ್ರದಲ್ಲಿ ವಿಪರೀತ ಸೋಂಕಿನ ಸಂಖ್ಯೆ ಇದ್ದೇಇದೆ. ಈಗ  ತುಸು ಇಳಿಮುಖವಾಗಿದೆ. ಲಸಿಕಾ ಅಭಿಯಾನಕ್ಕೂ ವೇಗ ಸಿಕ್ಕಿದೆ.

ಇದನ್ನ ಓದಿ: SBI Internet Banking: ಇಂದು 3 ತಾಸು ಸ್ಥಗಿತಗೊಳ್ಳಲಿರುವ ಎಸ್​ಬಿಐ ಇಂಟರ್​ನೆಟ್​​ ಬ್ಯಾಂಕಿಂಗ್​, ಯೊನೊ ಆ್ಯಪ್​ ಸೇವೆಗಳು; ಸಮಯ ಹೀಗಿದೆ ನೋಡಿ

Virender Sehwag: ಕೆಬಿಸಿಯಲ್ಲಿ ಭರ್ಜರಿ ಆಟವಾಡಿದ ವೀರು- ದಾದಾ; ಸೆಹ್ವಾಗ್- ಗಂಗೂಲಿಗೆ ₹ 25 ಲಕ್ಷ ಗೆದ್ದುಕೊಟ್ಟ ಪ್ರಶ್ನೆ ಇಲ್ಲಿದೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ