AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿ, ಹೆಗ್ಗಳಿಕೆಗೆ ಪಾತ್ರವಾದ ಜಿಲ್ಲೆ ಇದು; ಕೊವಿನ್​ ಆ್ಯಪ್​​ನಲ್ಲಿ ಮಾಹಿತಿ ಬಿಡುಗಡೆ

ಮುಂಬೈನಲ್ಲಿ ಇದುವರೆಗೆ ಒಟ್ಟು 507 ಕೇಂದ್ರಗಳಲ್ಲಿ ಕೊವಿಡ್​ 19 ಲಸಿಕೆ ನೀಡಲಾಗಿದೆ. ಅದರಲ್ಲಿ 325 ಸರ್ಕಾರಿ ಕೊರೊನಾ ಲಸಿಕೆ ಕೇಂದ್ರಗಳಾಗಿದ್ದು, 182 ಖಾಸಗಿ ಆಸ್ಪತ್ರೆಗಳ ಕೇಂದ್ರಗಳಾಗಿವೆ.

1 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿ, ಹೆಗ್ಗಳಿಕೆಗೆ ಪಾತ್ರವಾದ ಜಿಲ್ಲೆ ಇದು; ಕೊವಿನ್​ ಆ್ಯಪ್​​ನಲ್ಲಿ ಮಾಹಿತಿ ಬಿಡುಗಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 04, 2021 | 1:20 PM

Share

ಇದುವರೆಗೆ 1 ಕೋಟಿಗೂ ಅಧಿಕ ಡೋಸ್​ ಲಸಿಕೆ (Covid 19 Vaccine) ನೀಡಿದ ದೇಶದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಮುಂಬೈ (Mumbai) ಪಾತ್ರವಾಗಿದೆ. ದೇಶದಲ್ಲಿ ಜನವರಿಯಿಂದ ಕೊವಿಡ್​ 19 ಲಸಿಕೆ ಅಭಿಯಾನ ಶುರುವಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಮುಂಬೈನಲ್ಲಿ 1,00,63,497 ಡೋಸ್​ ಲಸಿಕೆ ನೀಡಲಾಗಿದೆ. 72,75,134 ಜನರಿಗೆ ಮೊದಲ ಡೋಸ್​ ಮಾತ್ರ ಲಸಿಕೆ ಪಡೆದಿದ್ದು, 27,88,363 ಜನರಿಗೆ ಎರಡೂ ಡೋಸ್​ ಸಂಪೂರ್ಣವಾಗಿದೆ. ಈ ಬಗ್ಗೆ ಕೊವಿನ್​ ಆ್ಯಪ್ (CoWIN App)​​ನಲ್ಲಿ ಅಪ್​ಡೇಟ್​ ಆಗಿದೆ.

ಮುಂಬೈನಲ್ಲಿ ಇದುವರೆಗೆ ಒಟ್ಟು 507 ಕೇಂದ್ರಗಳಲ್ಲಿ ಕೊವಿಡ್​ 19 ಲಸಿಕೆ ನೀಡಲಾಗಿದೆ. ಅದರಲ್ಲಿ 325 ಸರ್ಕಾರಿ ಕೊರೊನಾ ಲಸಿಕೆ ಕೇಂದ್ರಗಳಾಗಿದ್ದು, 182 ಖಾಸಗಿ ಆಸ್ಪತ್ರೆಗಳ ಕೇಂದ್ರಗಳಾಗಿವೆ. ಕಳೆದ 30 ದಿನಗಳಲ್ಲಿ ಆಗಸ್ಟ್​​ 27ರಂದು ಅತಿಹೆಚ್ಚು ಅಂದರೆ 1,77,017 ಜನರಿಗೆ ಕೊವಿಡ್ 19 ಲಸಿಕೆ ನೀಡಲಾಗಿದೆ. ಹಾಗೇ, ಆಗಸ್ಟ್​ 21ರಂದು 1,63,775 ಡೋಸ್, ಆಗಸ್ಟ್​ 23ರಂದು 1,53,881 ಡೋಸ್​ ಲಸಿಕೆ ನೀಡಲಾಗಿದೆ ಎಂದು ಕೊವಿನ್​​ನಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈನಲ್ಲಿ ಕಳೆದ ಮೂರು ದಿನಗಳಿಂದ, ಒಂದು ದಿನದಲ್ಲಿ 400ಕ್ಕೂ ಅಧಿಕ ಕೊವಿಡ್​ 19 ಪ್ರಕರಣಗಳು ದಾಖಲಾಗುತ್ತಿವೆ. ಹಾಗೇ, ಶುಕ್ರವಾರ ಕೂಡ 422 ಕೇಸ್​ಗಳು ದಾಖಲಾಗಿವೆ. ಇದೀಗ ಒಟ್ಟಾರೆ ಸೋಂಕಿತರ ಸಂಖ್ಯೆ  7,45,434ಕ್ಕೆ ಏರಿಕೆಯಾಗಿದ್ದು, ಇಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ  15,987ಕ್ಕೆ ಏರಿದೆ ಎಂದು ಬೃಹನ್​ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ (BMC) ಮಾಹಿತಿ ನೀಡಿದೆ.  ಏಪ್ರಿಲ್​ನಲ್ಲಿ ಮುಂಬೈನಲ್ಲಿ ಒಂದು ದಿನದಲ್ಲಿ 11,163 ಕೊವಿಡ್​ 19 ಪ್ರಕರಣಗಳು ದಾಖಲಾಗಿದ್ದು, ಸದ್ಯ ಈ ವರ್ಷದ ಅತ್ಯಂತ ಹೆಚ್ಚು ಕೇಸ್​ಗಳು ಅದೇ ಆಗಿದೆ. ಇನ್ನು ಕೊವಿಡ್​ 19 ಶುರುವಾದಾಗಿನಿಂದಲೂ ಮುಂಬೈ-ಮಹಾರಾಷ್ಟ್ರದಲ್ಲಿ ವಿಪರೀತ ಸೋಂಕಿನ ಸಂಖ್ಯೆ ಇದ್ದೇಇದೆ. ಈಗ  ತುಸು ಇಳಿಮುಖವಾಗಿದೆ. ಲಸಿಕಾ ಅಭಿಯಾನಕ್ಕೂ ವೇಗ ಸಿಕ್ಕಿದೆ.

ಇದನ್ನ ಓದಿ: SBI Internet Banking: ಇಂದು 3 ತಾಸು ಸ್ಥಗಿತಗೊಳ್ಳಲಿರುವ ಎಸ್​ಬಿಐ ಇಂಟರ್​ನೆಟ್​​ ಬ್ಯಾಂಕಿಂಗ್​, ಯೊನೊ ಆ್ಯಪ್​ ಸೇವೆಗಳು; ಸಮಯ ಹೀಗಿದೆ ನೋಡಿ

Virender Sehwag: ಕೆಬಿಸಿಯಲ್ಲಿ ಭರ್ಜರಿ ಆಟವಾಡಿದ ವೀರು- ದಾದಾ; ಸೆಹ್ವಾಗ್- ಗಂಗೂಲಿಗೆ ₹ 25 ಲಕ್ಷ ಗೆದ್ದುಕೊಟ್ಟ ಪ್ರಶ್ನೆ ಇಲ್ಲಿದೆ

Follow Us
Web contact
Web contact

TV9 Kannada

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ