AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashish Shelar: ಬಿಜೆಪಿ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್​​ಗೆ ಜೀವ ಬೆದರಿಕೆ; ಬಾಂದ್ರಾದಲ್ಲಿರುವ ಕಚೇರಿಗೆ ಬಂತು ಬೆದರಿಕೆ ಪತ್ರ

ಮಾಹಿತಿ ಪ್ರಕಾರ, ಆಶಿಶ್ ಶೆಲಾರ್ ಅವರ ಕಚೇರಿಯಲ್ಲಿ ಬಂದಿರುವ ಪತ್ರದಲ್ಲಿ ಬಿಜೆಪಿ ಮತ್ತು ಶಿಂಧೆ ಬಣದ ವಿರುದ್ಧವೂ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ. ಅಧ್ಯಕ್ಷರ ಕಚೇರಿಯ ಲೆಟರ್ ಬಾಕ್ಸ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಈ ಪತ್ರ ಸಿಕ್ಕಿದೆ.

Ashish Shelar: ಬಿಜೆಪಿ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್​​ಗೆ ಜೀವ ಬೆದರಿಕೆ; ಬಾಂದ್ರಾದಲ್ಲಿರುವ ಕಚೇರಿಗೆ ಬಂತು ಬೆದರಿಕೆ ಪತ್ರ
ಆಶಿಶ್ ಶೆಲಾರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 27, 2023 | 8:25 PM

Share

ಮುಂಬೈ: ಬಿಜೆಪಿ (BJP) ಮುಂಬೈ (Mumbai) ಘಟಕದ ಅಧ್ಯಕ್ಷ  ಆಶಿಶ್ ಶೆಲಾರ್ (Ashish Shelar)ಅವರಿಗೆ ಕೊಲೆ ಬೆದರಿಕೆ ಬಂದಿದೆ. ಮಾಹಿತಿ ಪ್ರಕಾರ ಬಾಂದ್ರಾದಲ್ಲಿರುವ ಅವರ ಕಚೇರಿಗೆ ಬೆದರಿಕೆ ಪತ್ರ ಬಂದಿದೆ. ಆಶಿಶ್ ಶೆಲಾರ್ ನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಲಾಗಿದೆ. ಮಾಹಿತಿ ಪ್ರಕಾರ, ಆಶಿಶ್ ಶೆಲಾರ್ ಅವರ ಕಚೇರಿಯಲ್ಲಿ ಬಂದಿರುವ ಪತ್ರದಲ್ಲಿ ಬಿಜೆಪಿ ಮತ್ತು ಶಿಂಧೆ ಬಣದ ವಿರುದ್ಧವೂ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ. ಬಿಜೆಪಿ ಅಧ್ಯಕ್ಷರ ಕಚೇರಿಯ ಲೆಟರ್ ಬಾಕ್ಸ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಈ ಪತ್ರ ಸಿಕ್ಕಿದೆ. ಈ ಪ್ರಕರಣದಲ್ಲಿ ಆಶಿಶ್ ಶೆಲಾರ್ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಲಿಖಿತ ದೂರು ನೀಡಿದ್ದಾರೆ.

ವರದಿಗಳ ಪ್ರಕಾರ, ಬಿಜೆಪಿ ನಾಯಕ ಆಶಿಶ್ ಶೆಲಾರ್ ಅವರಿಗೆ ಒಂದು ವರ್ಷದ ಹಿಂದೆಯೇ ಜೀವ ಬೆದರಿಕೆ ಹಾಕಲಾಗಿತ್ತು. ಕಳೆದ ಕೆಲವು ದಿನಗಳಿಂದ ತನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅವರು ಹೇಳಿದ್ದರು. ಆಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆಶಿಶ್ ಶೆಲಾರ್ ಅವರಿಗೂ ಮುನ್ನ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಬಂದಿತ್ತು. ಆರೋಪಿಗಳು ನಾಗ್ಪುರದ ಕಚೇರಿಯಲ್ಲಿರುವ ಸ್ಥಿರ ದೂರವಾಣಿಯಲ್ಲಿ ಕೊಲೆ ಬೆದರಿಕೆ ಹಾಕಿದ್ದರು. ನಿತಿನ್ ಗಡ್ಕರಿ ಅವರ ಕಚೇರಿಯ ಪರವಾಗಿ ನಾಗ್ಪುರ ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಗಳು ಗಡ್ಕರಿ ಅವರ ಕಚೇರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: 84ನೇ ವಯಸ್ಸಲ್ಲಿ ಒಲಿದು ಬಂತು ಪದ್ಮಶ್ರೀ; ಮೋದಿ ಭರವಸೆ ನೀಡಿದ್ದರೂ ಬೈಗಾ ಕಲೆಯ ಈ ಅಮ್ಮನಿಗೆ ಸಿಕ್ಕಿಲ್ಲ ಮನೆ

ಪೊಲೀಸರ ಪ್ರಕಾರ, ಕರ್ನಾಟಕದ ಬೆಳಗಾವಿ ಜೈಲಿನಲ್ಲಿರುವ ಕ್ರಿಮಿನಲ್ ಮತ್ತು ದರೋಡೆಕೋರ ಜಯೇಶ್ ಕಾಂತಾ ನಿತಿನ್ ಗಡ್ಕರಿ ಅವರ ಕಚೇರಿಗೆ ಬೆದರಿಕೆ ಕರೆ ಮಾಡಿ 100 ಕೋಟಿ ರೂ ಕೇಳಿದ್ದ. ಇಷ್ಟೇ ಅಲ್ಲ, ಇತ್ತೀಚೆಗೆ ಜಯೇಶ್‌ ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ನ್ಯಾಯಾಲಯ ಮರಣದಂಡನೆ ವಿಧಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:59 pm, Fri, 27 January 23

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್