AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಬಿಎಂಡಬ್ಲ್ಯು ಗುದ್ದೋಡು ಪ್ರಕರಣ: ಆರೋಪಿ ಮಿಹಿರ್ ಶಾಗೆ ಜುಲೈ 30ರವರೆಗೆ ನ್ಯಾಯಾಂಗ ಬಂಧನ

ಪೊಲೀಸ್ ತನಿಖೆಯ ಪ್ರಕಾರ, ಮಿಹಿರ್ ಶಾ ಕಾರಲ್ಲಿ ಬಾಂದ್ರಾ ವರ್ಲಿ ಸಮುದ್ರ ಸಂಪರ್ಕದ ಕಡೆಗೆ ವೇಗವಾಗಿ ಹೋಗುತ್ತಿದ್ದನು ಎಂದು ಹೇಳಲಾಗುತ್ತದೆ. ಅಪಘಾತ ಸಂಭವಿಸಿ ಮಹಿಳೆ ಕಾರಿನ ಬಾನೆಟ್ ಮೇಲೆ ಬಿದ್ದಿದ್ದು ನಂತರ 1.5 ಕಿಲೋಮೀಟರ್ ದೂರದವರೆಗೆ ಕಾರು ಆಕೆಯನ್ನು ಎಳೆದೊಯ್ದಿದೆ. ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಶಾ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಿದ್ದಾರೆ.

ಮುಂಬೈ ಬಿಎಂಡಬ್ಲ್ಯು ಗುದ್ದೋಡು ಪ್ರಕರಣ: ಆರೋಪಿ ಮಿಹಿರ್ ಶಾಗೆ ಜುಲೈ 30ರವರೆಗೆ ನ್ಯಾಯಾಂಗ ಬಂಧನ
ಮಿಹಿರ್ ಶಾ
ರಶ್ಮಿ ಕಲ್ಲಕಟ್ಟ
|

Updated on: Jul 16, 2024 | 4:43 PM

Share

ಮುಂಬೈ ಜುಲೈ 16: ವರ್ಲಿ ಬಿಎಂಡಬ್ಲ್ಯು ಹಿಟ್ ಅಂಡ್ ರನ್ (BMW Hit and Run case)  ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾಗೆ (Mihir Shah) ಮುಂಬೈ ನ್ಯಾಯಾಲಯ ಜುಲೈ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 24ರ ಹರೆಯದ ಮಿಹಿರ್ ಶಾ ಶಿವಸೇನಾ ರಾಜಕಾರಣಿ ರಾಜೇಶ್ ಶಾ (Rajesh Shah) ಅವರ ಪುತ್ರ. ಈತ ಮದ್ಯದ ಅಮಲಿನಲ್ಲಿ BMW ಅನ್ನು ಚಲಾಯಿಸಿದ್ದು, ಈ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 45 ವರ್ಷದ ಕಾವೇರಿ ನಖ್ವಾ ಎಂಬ ಮಹಿಳೆ ಸಾವಿಗೀಡಾಗಿದ್ದರು. ವರ್ಲಿಯ ಆರ್ಟಿರಿಯಲ್ ಅನ್ನಿ ಬೆಸೆಂಟ್ ರಸ್ತೆಯಲ್ಲಿ ಬೆಳಿಗ್ಗೆ 5:30 ಕ್ಕೆ ಬಿಎಂಡಬ್ಲ್ಯು ಸ್ಕೂಟರ್​​ಗೆ ಹಿಂಬದಿಯಿಂದ ಗುದ್ದಿದ್ದರಿಂದ ಮಹಿಳೆ ಸಾವಿಗೀಡಾಗಿದ್ದು, ಆಕೆಯ ಪತಿ ಪ್ರದೀಪ್ ನಖ್ವಾ ಗಾಯಗೊಂಡಿದ್ದಾರೆ.

ಪೊಲೀಸ್ ತನಿಖೆಯ ಪ್ರಕಾರ, ಮಿಹಿರ್ ಶಾ ಕಾರಲ್ಲಿ ಬಾಂದ್ರಾ ವರ್ಲಿ ಸಮುದ್ರ ಸಂಪರ್ಕದ ಕಡೆಗೆ ವೇಗವಾಗಿ ಹೋಗುತ್ತಿದ್ದನು ಎಂದು ಹೇಳಲಾಗುತ್ತದೆ. ಅಪಘಾತ ಸಂಭವಿಸಿ ಮಹಿಳೆ ಕಾರಿನ ಬಾನೆಟ್ ಮೇಲೆ ಬಿದ್ದಿದ್ದು ನಂತರ 1.5 ಕಿಲೋಮೀಟರ್ ದೂರದವರೆಗೆ ಕಾರು ಆಕೆಯನ್ನು ಎಳೆದೊಯ್ದಿದೆ. ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಶಾ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮುಂಬೈ ಪೊಲೀಸ್ ತಂಡವು ಅಪಘಾತದ ದೃಶ್ಯವನ್ನು ಮರುಸೃಷ್ಟಿಸಿತ್ತು.

ಕೋರ್ಟ್ ಹೊರಗೆ ಮಿಹಿರ್ ಶಾ

ಪ್ರಕರಣದಲ್ಲಿ ಮಿಹಿರ್ ಶಾ (24) ಅವರ ಕುಟುಂಬದ ಚಾಲಕ ರಾಜಋಷಿ ಬಿಡಾವತ್ ಕೂಡಾ ಆರೋಪಿಯಾಗಿದ್ದಾರೆ. ಅಪಘಾತದ ವೇಳೆ ಬಿಡಾವತ್ ಕಾರಿನಲ್ಲಿದ್ದರು. ಶಿವಸೇನಾ ರಾಜಕಾರಣಿ ರಾಜೇಶ್ ಶಾ ಅವರ ಸೂಚನೆ ಮೇರೆಗೆ ಚಾಲಕ ಮಿಹಿರ್ ಜೊತೆ ಚಾಲಕನ ಸೀಟನ್ನು ಬದಲಾಯಿಸಿಕೊಂಡಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ಅಲ್ಲದೆ, ಪೊಲೀಸರ ವಿಚಾರಣೆ ವೇಳೆ ಮಿಹಿರ್ ಶಾ ಮದ್ಯಪಾನ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪೊಲೀಸರ ಪ್ರಕಾರ, ಅವರು ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಕ್ಷೌರಿಕನ ಅಂಗಡಿಯಲ್ಲಿ ಗಡ್ಡವನ್ನು ಬೋಳಿಸಿಕೊಂಡಿದ್ದಾರೆ. ಗಿರ್‌ಗಾಂವ್‌ನಿಂದ ಘಟನೆ ನಡೆದ ವರ್ಲಿಯಲ್ಲಿನ ಸಮುದ್ರ ಸಂಪರ್ಕದ ಪ್ರವೇಶ ಬಿಂದುವಿಗೆ ಮಿಹಿರ್ ಶಾ ತಾನೇ ಕಾರನ್ನು ಓಡಿಸಿದ್ದಾನೆ ಎಂದು ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಬ್ಯಾಂಕ್ ಸರ್ವರ್​ಗೆ ಕನ್ನ ಹಾಕಿ 6.71 ಕೋಟಿ ದೋಚಿದ ವಂಚಕರು

ದಂಪತಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದ ನಂತರ, ಮಹಿಳೆ ಐಷಾರಾಮಿ ಕಾರಿನ ಟೈರ್ ಒಂದರಲ್ಲಿ ಸಿಲುಕಿಕೊಂಡಿದ್ದಾಳೆ ಎಂದು ಶಾಗೆ ಗೊತ್ತಿತ್ತು. ಆದರೆ ಅವನು ಅಜಾಗರೂಕತೆಯಿಂದ ಚಾಲನೆ ಮಾಡಿದ್ದಾನೆ. ವಾಹನ ಚಾಲಕರು ಸಿಗ್ನಲ್ ಮಾಡಿ ಕೂಗಿದರು, ನಿಲ್ಲಿಸಲು ಕೇಳಿದರೂ ಅವ ಕಿವಿಗೊಡಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ