Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಏರ್​ಪೋರ್ಟ್​ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದೊಳಗಿನ ಕಸದ ಬುಟ್ಟಿಯಲ್ಲಿ ಮಂಗಳವಾರ ರಾತ್ರಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10.30 ರ ಸುಮಾರಿಗೆ ಈ ಶವ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತ್ವರಿತ ಕ್ರಮ ಕೈಗೊಂಡು,ಕೂಡಲೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು. ಶಿಶುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಮುಂಬೈ ಏರ್​ಪೋರ್ಟ್​ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ಮಗು-ಸಾಂದರ್ಭಿಕ ಚಿತ್ರImage Credit source: Her View From Home
Follow us
ನಯನಾ ರಾಜೀವ್
|

Updated on: Mar 26, 2025 | 2:21 PM

ಮುಂಬೈ, ಮಾರ್ಚ್​ 26: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದೊಳಗಿನ ಕಸದ ಬುಟ್ಟಿಯಲ್ಲಿ ಮಂಗಳವಾರ ರಾತ್ರಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10.30 ರ ಸುಮಾರಿಗೆ ಈ ಶವ ಪತ್ತೆಯಾಗಿತ್ತು. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ತ್ವರಿತ ಕ್ರಮ ಕೈಗೊಂಡು,ಕೂಡಲೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು. ಶಿಶುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿವರವಾದ ತನಿಖೆ ಆರಂಭಿಸಿದ್ದಾರೆ. ನವಜಾತ ಶಿಶುವನ್ನು ಕಸದ ಬುಟ್ಟಿಗೆ ಎಸೆದವರನ್ನು ಪತ್ತೆಹಚ್ಚಲು ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಇತರ ವಿಧಿವಿಜ್ಞಾನ ಸಾಕ್ಷ್ಯಗಳನ್ನು ವಿಶ್ಲೇಷಿಸುತ್ತಿದ್ದಾರೆ.

ಶಂಕಿತರನ್ನು ಪತ್ತೆ ಹಚ್ಚಲು ಅಧಿಕಾರಿಗಳು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರ ದಾಖಲೆಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ತನಿಖೆಗೆ ಸಹಾಯವಾಗುವ ಯಾವುದೇ ಮಾಹಿತಿಯೊಂದಿಗೆ ಮುಂದೆ ಬರುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿಮಾನದಲ್ಲಿ ನಾಯಿ ಕೊಂಡೊಯ್ಯುವಂತಿಲ್ಲ ಎಂದಿದ್ದಕ್ಕೆ ಟಾಯ್ಲೆಟ್ ನೀರಿನಲ್ಲಿ ಮುಳುಗಿಸಿ ಕೊಂದ ಮಹಿಳೆ ಸಾಕು ಪ್ರಾಣಿಗಳಿಗೋಸ್ಕರ ಜೀವವನ್ನೇ ಕೊಡುವ ಜನರ ನಡುವೆ, ಇಲ್ಲೊಬ್ಬ ಸ್ವಾರ್ಥಿ ತನಗೋಸ್ಕರ ನಾಯಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೆರಿಕದ ವಿಮಾನ ನಿಲ್ದಾಣದಲ್ಲಿ ವಿಮಾನದಲ್ಲಿ ನಾಯಿಯನ್ನು ಕರೆದೊಯ್ಯುವಂತಿಲ್ಲ ಎಂದು ಸಿಬ್ಬಂದಿ ಹೇಳಿದ್ದಕ್ಕೆ, ಮಹಿಳೆ ಟಾಯ್ಲೆಟ್​ ನೀರಿನಲ್ಲಿ ನಾಯಿಯನ್ನು ಮುಳುಗಿಸಿ ಕೊಂದಿದ್ದಾರೆ. 57 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಪೆಂಡೆಂಟ್​ ವರದಿ ಮಾಡಿದೆ.

ಮತ್ತಷ್ಟು ಓದಿ: ಪುಣೆಯ ಕಸದ ರಾಶಿಯಲ್ಲಿ ಎಸೆದ ಪ್ಲಾಸ್ಟಿಕ್ ಕಂಟೇನರ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ

ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರ್ಲ್ಯಾಂಡೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಚೆಕ್​ಪೋಸ್ಟ್​ ಬಳಿ ಇರುವ ಶೌಚಾಲಯದಲ್ಲಿ ನಾಯಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿತ್ತು. ಮಹಿಳೆ ತನ್ನ ಶ್ವಾನದೊಂದಿಗೆ ವಿಮಾನ ಹತ್ತಲು ಪ್ರಯತ್ನಿಸಿದ್ದಳು ಆದರೆ ಅಗತ್ಯವಾದ ದಾಖಲೆಗಳ ಕೊರತೆ ಇತ್ತು.

ನಂತರ ಮಹಿಳೆ ತನ್ನ ನಾಯಿಯನ್ನು ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಮುಳುಗಿಸಿ ಭದ್ರತಾ ಚೆಕ್​ಪೋಸ್ಟ್​ಗಳ ಮೂಲಕ ಹೋಗುವ ಮೊದಲು ಅದರ ಅವಶೇಷಗಳನ್ನು ಕಸದ ಪುಟ್ಟಿಗೆ ಎಸೆದಿದ್ದಳು. ವಿಮಾನ ನಿಲ್ದಾಣ ಶುಚಿಗೊಳಿಸುವ ಸಿಬ್ಬಂದಿಗೆ ನಾಯಿಯ ಶವ ಕಂಡಿತ್ತು.

ಘಟನೆ ನಡೆದ ದಿನದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಲಾರೆನ್ಸ್ ಬಂಧನಕ್ಕೆ ವಾರಂಟ್ ಹೊರಡಿಸಿದ ನಂತರ ಅವರನ್ನು ಬಂಧಿಸಲಾಯಿತು. ಸುಮಾರು ಮೂರು ತಿಂಗಳ ನಂತರ ಅವರನ್ನು ಬಂಧಿಸಿ ವಶಕ್ಕೆ ಪಡೆಯಲಾಯಿತು. ಮಂಗಳವಾರದ ಬಂಧನದ ನಂತರ, ಬಂಧನ ದಾಖಲೆಯ ಪ್ರಕಾರ, ಅವರು 5,000 ಡಾಲರ್​ ಬಾಂಡ್ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ