AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಾಕ್​ಡೌನ್ ವೇಳೆ ಕಾರ್ಯ ನಿರ್ವಹಿಸುವ ಮುಂಬೈ ಪೊಲೀಸರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ

ಇಲ್ಲಿಯವರೆಗೆ ಕೇತನ್​ ರಾವಲ್ ಹೊಂದಿರುವ 50 ವ್ಯಾನ್​ಗಳಲ್ಲಿ 12 ವ್ಯಾನ್​ಗಳನ್ನು ಪೊಲೀಸ್​ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಒದಗಿಸಿದ್ದಾರೆ.

ಕೊವಿಡ್ ಲಾಕ್​ಡೌನ್ ವೇಳೆ ಕಾರ್ಯ ನಿರ್ವಹಿಸುವ ಮುಂಬೈ ಪೊಲೀಸರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ
ಮುಂಬೈ ಪೊಲೀಸರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಉಚಿತ ವ್ಯಾನಿಟಿ ವ್ಯಾನ್​ ನೀಡಿದ ಉದ್ಯಮಿ
shruti hegde
|

Updated on:Apr 25, 2021 | 5:03 PM

Share

ಮುಂಬೈ: ನಗರದ ಉದ್ಯಮಿ ಕೇತನ್​ ರಾವಲ್​ ಮುಂಬೈ ಪೊಲೀಸರಿಗೆ ತಮ್ಮ ವ್ಯಾನಿಟಿ ವ್ಯಾನ್​​ಗಳನ್ನು ಉಚಿತವಾಗಿ ನೀಡಲು ಮುಂದಾಗಿದ್ದಾರೆ. ಪೊಲೀಸರು ಮತ್ತು ಆರೋಗ್ಯ ಕಾರ್ಯಕರ್ತರು ಲಾಕ್​ಡೌನ್​ ಇದ್ದ ಸಮಯದಲ್ಲಿ ಸೇವೆ ಸಲ್ಲಿಸುತ್ತಿರುವಾಗ ಆಹಾರ ಸೇವಿಸಲು ಸಹಾಯವಾಗುವುದಾಗಿ ತನ್ನಲ್ಲಿರುವ ವ್ಯಾನಿಟ್​ ವ್ಯಾನ್​ಗಳನ್ನು ನೀಡಿದ್ದಾರೆ. ಸುದ್ದಿ ಸಂಸ್ಥೆ ಎಎನ್​ಐ ಜೊತೆ ಮಾತನಾಡಿದ ಕೇತನ್​ ರಾವಲ್​, ‘ನಾನು ಈ ವ್ಯಾನಿಟಿ ವ್ಯಾನ್​ಗಳನ್ನು ಪೊಲೀಸ್​ ಸಿಬ್ಬಂದಿಗೆ ನೀಡುತ್ತಿದ್ದೇನೆ. ಇದರಿಂದ ಅವರು ವಿಶ್ರಾಂತಿ ಪಡೆಯಬಹುದು. ವ್ಯಾನ್​ನಲ್ಲಿ ಕುಳಿತು ಆಹಾರ ಸೇವಿಸಬಹುದು ಮತ್ತು ಕರ್ತವ್ಯದಲ್ಲಿದ್ದಾಗ ವಾಶ್​ರೂಂಗಳನ್ನು ಬಳಸಿಕೊಳ್ಳಬಹುದು’ ಎಂದು ಹೇಳಿದ್ದಾರೆ.

‘ಈ ವ್ಯಾನಿಟಿ ವ್ಯಾನ್​ಗಳಲ್ಲಿ ಮಲಗುವ ಕೋಣೆ, ವಾಶ್​ರೂಂ, ಡ್ರೆಸ್ಸಿಂಗ್​ ಟೇಬಲ್​ ಮತ್ತು ಎಸಿ ಗಳಿವೆ. ಇವೆಲ್ಲವೂ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಸಹಾಯವಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ. ಆರೋಗ್ಯ ಕಾರ್ಯಕರ್ತರಿಗೆ ಅವರು ಹೇಗೆ ಸಹಾಯ ಮಾಡುತ್ತಿದ್ದಾರೆ ಎಂಬುದನ್ನು ತಿಳಿಸುತ್ತಿದ್ದ ಕೇತನ್​ ರಾವಲ್​​, ತಲಾ ಮೂರು ಕೊಠಡಿಗಳನ್ನು ಹೊಂದಿರುವ ಮೂರು ವ್ಯಾನಿಟಿ ವ್ಯಾನ್​ಗಳನ್ನು  24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಿಗೆ, ಸಹಾಯಕ ಸಿಬ್ಬಂದಿಗೆ ಮತ್ತು ಆರೋಗ್ಯ ಕಾರ್ಯಕರ್ತರಾಗಿ ಕೆಲಸ ನಿರ್ವಹಿಸುತ್ತಿರುವವರಿಗೆ ಒದಗಿಸಿದ್ದೇನೆ. ವ್ಯಾನ್​ಗಳನ್ನು ಪ್ರತಿನಿತ್ಯ ಸ್ವಚ್ಛಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆಸ್ಪತ್ರೆಗಳಿಗೂ ತನ್ನಲ್ಲಿರುವ ವ್ಯಾನಿಟಿ ವ್ಯಾನ್​ಗಳನ್ನು ಒದಗಿಸಲು ಸಿದ್ಧ ಎಂದು ಕೇತನ್​ ರಾವಲ್​​ ಹೇಳಿದ್ದಾರೆ. ಕೊವಿಡ್​ ಸೋಂಕಿತ ರೋಗಿಗಳಿಗೆ ಅಗತ್ಯವಾದ ಚಿಕಿತ್ಸೆಯನ್ನು ಒದಗಿಸಿದರೆ ಜನರ ಜೀವ ಉಳಿಸಲು ನನ್ನ ವ್ಯಾನ್​ಗಳನ್ನು ನೀಡಲು ನಾನು ಸಿದ್ಧನಿದ್ಧೇನೆ ಎಂದು ತಿಳಿಸಿದ್ದಾರೆ.

ಇಲ್ಲಿಯವರೆಗೆ ಅವರು ಹೊಂದಿರುವ 50 ವ್ಯಾನ್​ಗಳಲ್ಲಿ 12 ವ್ಯಾನ್​ಗಳನ್ನು ಪೊಲೀಸ್​ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಒದಗಿಸಿದ್ದಾರೆ. ಏತನ್ಮಧ್ಯೆ, ಮುಂಬೈನಲ್ಲಿ 5,888 ಹೊಸ ಕೊವಿಡ್​ ಪ್ರಕರಣಗಳು, 71 ಜನರು ಬಲಿಯಾಗಿದ್ದಾರೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 6,66,109 ಆಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ವಾರಗಳಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆ

Published On - 5:00 pm, Sun, 25 April 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ