ತೊಂದರೆ ಇದ್ದಿದ್ದು ಬಲಗೈಯಲ್ಲಿ, ಬಾಲಕನ ಎಡಗೈಗೆ ಶಸ್ತ್ರ ಚಿಕಿತ್ಸೆ ಮಾಡಿ ಬೆರಳು ಕತ್ತರಿಸಿದ ವೈದ್ಯರು

ಸಮಸ್ಯೆ ಇರುವ ಬಲಗೈಗೆ ಬಿಟ್ಟು ವೈದ್ಯರು ಬಾಲಕನ ಎಡಗೈಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಲ್ಲದೆ, ಬೆರಳನ್ನು ಕೂಡ ಕತ್ತರಿಸಿರುವ ಘಟನೆ ಮಹಾರಾಷ್ಟ್ರದ ಪಂಢರಪುರದಲ್ಲಿ ನಡೆದಿದೆ. ಸಾಮಾನ್ಯವಾಗಿ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡುವಾಗ ರೋಗಿಯ ಸಮಸ್ಯೆಯ ಬಗ್ಗೆ ಇದ್ದ ಫೈಲ್ ಅನ್ನು ಒಮ್ಮೆ ಓದಿದ ಬಳಿಕವೇ ಆಪರೇಷನ್ ಮಾಡುತ್ತಾರೆ. ಆದರೆ ಈ ವೈದ್ಯರು ಹಾಗೆ ಮಾಡಲೇ ಇಲ್ಲ. ಬಾಲಕ ಪೋಸ್ಟಾಕ್ಸಿಯಲ್ ಪಾಲಿಡಾಕ್ಟಿಲಿಯಿಂದ ಬಳಲುತ್ತಿತ್ತು, ಎರಡೂ ಕೈಗಳಲ್ಲಿ ಹೆಚ್ಚುವರಿ ಕಿರುಬೆರಳುಗಳಿದ್ದವು, ಬಲಗೈಯ ಒಂದು ಬೆರಳಿನಲ್ಲಿ ಬಿಗಿತ, ನೋವು ಇದ್ದ ಕಾರಣ ಆಸ್ಪತ್ರೆಗೆ ಬಂದಿದ್ದರು.

ತೊಂದರೆ ಇದ್ದಿದ್ದು ಬಲಗೈಯಲ್ಲಿ, ಬಾಲಕನ ಎಡಗೈಗೆ ಶಸ್ತ್ರ ಚಿಕಿತ್ಸೆ ಮಾಡಿ ಬೆರಳು ಕತ್ತರಿಸಿದ ವೈದ್ಯರು
ಬಾಲಕ
Image Credit source: India TV

Updated on: Mar 30, 2026 | 10:25 AM

ಮುಂಬೈ, ಮಾರ್ಚ್​ 30: ಸಮಸ್ಯೆ ಇರುವ ಬಲಗೈಗೆ ಬಿಟ್ಟು ವೈದ್ಯರು ಬಾಲಕನ ಎಡಗೈಗೆ ಶಸ್ತ್ರ ಚಿಕಿತ್ಸೆ(Operation) ಮಾಡಿದ್ದಲ್ಲದೆ, ಬೆರಳನ್ನು ಕೂಡ ಕತ್ತರಿಸಿರುವ ಘಟನೆ ಮಹಾರಾಷ್ಟ್ರದ ಪಂಢರಪುರದಲ್ಲಿ ನಡೆದಿದೆ. ಸಾಮಾನ್ಯವಾಗಿ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡುವಾಗ ರೋಗಿಯ ಸಮಸ್ಯೆಯ ಬಗ್ಗೆ ಇದ್ದ ಫೈಲ್ ಅನ್ನು ಒಮ್ಮೆ ಓದಿದ ಬಳಿಕವೇ ಆಪರೇಷನ್ ಮಾಡುತ್ತಾರೆ. ಆದರೆ ಈ ವೈದ್ಯರು ಹಾಗೆ ಮಾಡಲೇ ಇಲ್ಲ.
ಬಾಲಕ ಪೋಸ್ಟಾಕ್ಸಿಯಲ್ ಪಾಲಿಡಾಕ್ಟಿಲಿಯಿಂದ ಬಳಲುತ್ತಿತ್ತು, ಎರಡೂ ಕೈಗಳಲ್ಲಿ ಹೆಚ್ಚುವರಿ ಕಿರುಬೆರಳುಗಳಿದ್ದವು, ಬಲಗೈಯ ಒಂದು ಬೆರಳಿನಲ್ಲಿ ಬಿಗಿತ, ನೋವು ಇದ್ದ ಕಾರಣ ಆಸ್ಪತ್ರೆಗೆ ಬಂದಿದ್ದರು.

ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರು ಸಲಹೆ ನಿಡಿದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಾಲಕನ ಬಲಗೈಗೆ ಶಸ್ತ್ರ ಚಿಕಿತ್ಸೆ ಮಾಡಬೇಕಿತ್ತು, ಆದರೆ, ವೈದ್ಯರು ಎಡಗೈಗೆ ತಪ್ಪಾಗಿ ತಪ್ಪಾಗಿ ಶಸ್ತ್ರ ಚಿಕಿತ್ಸೆ ನಡೆಸಿ ತಪ್ಪು ಬೆರಳನ್ನು ತೆಗೆದಿದ್ದಾರೆ. ದೋಷ ಕಂಡುಬಂದ ನಂತರ ಬಾಲಕನ ಕುಟುಂಬವು ತಕ್ಷಣ ದೂರು ದಾಖಲಿಸಿದೆ.

ಆಸ್ಪತ್ರೆ ಅಧಿಕಾರಿಗಳು ಮಗುವಿನ ಎರಡೂ ಕೈಯಲ್ಲೂ ದೋಷವಿತ್ತು ಎಂದು ಹೇಳಿಕೊಂಡಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಬೇಕಿತ್ತು ಎಂದಿದ್ದಾರೆ.ಆದರೆ ಕುಟುಂಬವು ಆತನ ಎಡಗೈಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ, ಎಂದು ಹೇಳಿದ್ದಾರೆ. ಈ ಆರೋಪಗಳ ನಂತರ, ಆರೋಗ್ಯ ಇಲಾಖೆ ವಿವರವಾದ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿತು.

ಮತ್ತಷ್ಟು ಓದಿ: ಅಪರೂಪದ ಹೃದ್ರೋಗಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ: ಜಯದೇವ ವೈದ್ಯರ ಮತ್ತೊಂದು ಸಾಧನೆ

ಬಲಗೈಯಲ್ಲಿ ಶಸ್ತ್ರಚಿಕಿತ್ಸೆಗೆ ಅನುಮತಿ ನೀಡುವ NOCಗೆ ಸ್ಪಷ್ಟವಾಗಿ ಸಹಿ ಹಾಕಿದ್ದೇವೆ ಎಂದು ಮಗುವಿನ ಕುಟುಂಬ ಹೇಳಿದೆ. ಇದರ ಹೊರತಾಗಿಯೂ, ವೈದ್ಯರು ಎಡಗೈಯಲ್ಲಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು. ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us