ಮುಂಬೈ ಮಹಾ ಸಾಧನೆ; ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯ

ಕೊವಿಡ್​ 19 ಲಸಿಕೆ ಮೊದಲ ಡೋಸ್ ನೀಡಿಕೆ ಶೇ.100ರಷ್ಟು ಮುಗಿದಿದ್ದು ನಿಜಕ್ಕೂ ಮುಂಬೈ ಪಾಲಿಗೆ ಶುಭಸಮಾಚಾರ. ಒಂದು ಹಂತದಲ್ಲಿ ಮುಂಬೈ ನಗರವೀಗ ಕೊರೊನಾದಿಂದ ಹೆಚ್ಚು ಸುರಕ್ಷಿತವಾಗಿದೆ ಎಂದು ಮಹಾರಾಷ್ಟ್ರ ಕೊವಿಡ್​ 19 ಟಾಸ್ಕ್​ ಫೋರ್ಸ್​​ನ ಸದಸ್ಯ ಡಾ. ಓಂ ಶ್ರೀವಾಸ್ತವ್ ಹೇಳಿದ್ದಾರೆ.

ಮುಂಬೈ ಮಹಾ ಸಾಧನೆ; ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯ
ಸಾಂಕೇತಿಕ ಚಿತ್ರ
Follow us
| Updated By: Lakshmi Hegde

Updated on: Nov 13, 2021 | 3:43 PM

ದೇಶದಲ್ಲೀಗ ಕೊವಿಡ್​ 19 ಲಸಿಕೆ ಅಭಿಯಾನ (Covid 19 Vaccine Drive) ಶುರುವಾಗಿ 10 ತಿಂಗಳು ಕಳೆದಿವೆ. ಆದರೆ ಇನ್ನೂ ಎಲ್ಲರಿಗೂ ಮೊದಲ ಡೋಸ್​ ಲಸಿಕೆಯೇ ಆಗಿಲ್ಲ. ಹೀಗಿರುವಾಗ ಮುಂಬೈ ಒಂದು ಸಾಧನೆ ಮಾಡಿದೆ. ಮುಂಬೈನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್​ ಕೊವಿಡ್​ 19 ಲಸಿಕೆ ನೀಡಿ ಮುಗಿದಿದೆ. ಅಂದರೆ ಮೊದಲ ಡೋಸ್​ ಕೊರೊನಾ ಲಸಿಕೆ ನೀಡಿಕೆಯಲ್ಲಿ ಪ್ರತಿಶತ ನೂರರಷ್ಟು ಸಾಧನೆ ಮಾಡಿದ ನಗರ ಅದಾಗಿದೆ. ಮುಂಬೈನಲ್ಲಿ ಶನಿವಾರ ಮಧ್ಯಾಹ್ನದ ಹೊತ್ತಿಗೆ 9,239,902 ಜನರಿಗೆ ಮೊದಲ ಡೋಸ್​ ಲಸಿಕೆ ನೀಡಲಾಗಿದೆ ಎಂದು ಕೊವಿನ್ ವೆಬ್​ಸೈಟ್​​ನಲ್ಲಿ ದಾಖಲಾಗಿದ್ದು, ಇದು ನಗರದ ಒಟ್ಟಾರೆ ವಯಸ್ಕ ಜನಸಂಖ್ಯೆ  9,236,546ಕ್ಕೆ ಸಮಾನವಾಗಿದೆ ಎಂದು ಹೇಳಲಾಗಿದೆ. ಇನ್ನು ನಗರದಲ್ಲಿ ಶೇ.65 ಜನರಿಗೆ ಅಂದರೆ 5,983,452 ಜನರಿಗೆ ಎರಡೂ ಡೋಸ್​ ಕೊವಿಡ್​ 19 ಲಸಿಕೆ ನೀಡಿ ಮುಗಿದಿದೆ. ಲಸಿಕಾ ಕೇಂದ್ರಗಳ ವಿಕೇಂದ್ರೀಕರಣ ಕೊರೊನಾ ಲಸಿಕೆ ನೀಡಿಕೆಯ ವೇಗವನ್ನು ಹೆಚ್ಚಿಸುವಲ್ಲಿ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಪುರಸಭೆ ಹೆಚ್ಚುವರಿ ಆಯುಕ್ತ ಸುರೇಶ್​ ಕಕಣಿ ಹೇಳಿದ್ದಾರೆ.   

ಮುಂಬೈನ ಈ ಸಾಧನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾಂಕ್ರಾಮಿಕ ಕಾಯಿಲೆಗಳ ತಜ್ಞ, ಮಹಾರಾಷ್ಟ್ರ ಕೊವಿಡ್​ 19 ಟಾಸ್ಕ್​ ಫೋರ್ಸ್​​ನ ಸದಸ್ಯ ಡಾ. ಓಂ ಶ್ರೀವಾಸ್ತವ್​, ಕೊವಿಡ್​ 19 ಲಸಿಕೆ ಮೊದಲ ಡೋಸ್ ನೀಡಿಕೆ ಶೇ.100ರಷ್ಟು ಮುಗಿದಿದ್ದು ನಿಜಕ್ಕೂ ಮುಂಬೈ ಪಾಲಿಗೆ ಶುಭಸಮಾಚಾರ. ಒಂದು ಹಂತದಲ್ಲಿ ಮುಂಬೈ ನಗರವೀಗ ಕೊರೊನಾದಿಂದ ಹೆಚ್ಚು ಸುರಕ್ಷಿತವಾಗಿದೆ. ಹಾಗಂತ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆತು, ನಿರ್ಲಕ್ಷ್ಯದಿಂದ ವರ್ತನೆ ಮಾಡಬಾರದು ಎಂದು ಹೇಳಿದ್ದಾರೆ. ಕೊರೊನಾ ವೈರಸ್​ ಎಂಬುದು ಊಹೆಗೂ ನಿಲುಕದ ಒಂದು ಸಾಂಕ್ರಾಮಿಕ. ಈಗಲೂ ಕೂಡ ಹಲವು ರಾಷ್ಟ್ರಗಳಲ್ಲಿ, ಲಸಿಕೆಗಳು ಇದ್ದಾಗ್ಯೂ ಕೂಡ ಪ್ರತಿದಿನ ದೊಡ್ಡ ಸಂಖ್ಯೆಯ ಕೊರೊನಾ ಕೇಸ್​ಗಳು ದಾಖಲಾಗುತ್ತಿವೆ. ಫ್ರಾನ್ಸ್​ ದೇಶವಂತೂ ತಮ್ಮಲ್ಲಿ ಐದನೇ ಅಲೆಯ ಅಬ್ಬರ ಶುರುವಾಗಿದ್ದಾಗಿ ಹೇಳಿಕೊಂಡಿದೆ. ಹಾಗಾಗಿ ತುಂಬ ಎಚ್ಚರಿಕೆಯಿಂದ ಇರಬೇಕು ಎಂದೂ ಕೂಡ ಶ್ರೀವಾಸ್ತವ್​ ಹೇಳಿದ್ದಾರೆ.

ಇನ್ನು ಉಳಿದೆಲ್ಲ ದೇಶಗಳಂತೆ ಮುಂಬೈನಲ್ಲೂ ಕೂಡ ಮೊದಲ ಹಂತದ ಕೊರೊನಾ ಲಸಿಕೆ ಅಭಿಯಾನ 2021ರ ಜನವರಿ 16ರಂದು ಪ್ರಾರಂಭವಾಯಿತು. ಆಗ ನಗರದಾದ್ಯಂತ ಕೇವಲ 10 ಕೊವಿಡ್​ 19 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಆದರೆ ಬರುಬರುತ್ತ ವ್ಯಾಕ್ಸಿನ್​ ಸೆಂಟರ್​​ಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಈಗಂತೂ ಸಾರ್ವಜನಿಕ ಮತ್ತು ಖಾಸಗಿ ಎರಡೂ ಸೇರಿ 462 ಕೊವಿಡ್​ 19 ಲಸಿಕಾ ಕೇಂದ್ರಗಳಿವೆ. ಈ ಎರಡೂ ಮಾದರಿಯ ಕೇಂದ್ರಗಳು ಸಂಯೋಜಿತವಾಗಿ ದಿನಕ್ಕೆ 1,23,000 ಡೋಸ್​ ಲಸಿಕೆ ನೀಡುತ್ತಿವೆ.  ಇನ್ನು ಒಟ್ಟಾರೆ ದೇಶದಲ್ಲಿ ಶೇ.80ರಷ್ಟು ವಯಸ್ಕರಿಗೆ ಮೊದಲ ಡೋಸ್ ನೀಡಲಾಗಿದ್ದು, ಶೇ.38 ಮಂದಿಗೆ ಎರಡೂ ಡೋಸ್​ ನೀಡಲಾಗಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಉಗ್ರರ ದಾಳಿ; ನಾಲ್ವರು ಯೋಧರು, ಕಮಾಂಡಿಂಗ್​ ಅಧಿಕಾರಿ ಕುಟುಂಬ ದುರ್ಮರಣ

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ