AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2011ರ ದಾವೂದ್ ಇಬ್ರಾಹಿಂ ಸಹೋದರನ ಚಾಲಕನ ಹತ್ಯೆ ಪ್ರಕರಣ; ಭೂಗತ ಪಾತಕಿ ಛೋಟಾ ರಾಜನ್ ಖುಲಾಸೆ

ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ಪ್ರಕರಣದಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. 2011ರಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನ ಚಾಲಕನ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ನನ್ನು ಮುಂಬೈ ನ್ಯಾಯಾಲಯ ಇಂದು ಖುಲಾಸೆಗೊಳಿಸಿದೆ.

2011ರ ದಾವೂದ್ ಇಬ್ರಾಹಿಂ ಸಹೋದರನ ಚಾಲಕನ ಹತ್ಯೆ ಪ್ರಕರಣ; ಭೂಗತ ಪಾತಕಿ ಛೋಟಾ ರಾಜನ್ ಖುಲಾಸೆ
Chhota Rajan
ಸುಷ್ಮಾ ಚಕ್ರೆ
|

Updated on: Mar 17, 2025 | 10:31 PM

Share

ನವದೆಹಲಿ, ಮಾರ್ಚ್ 17: 2011ರಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನ ಚಾಲಕನ ಹತ್ಯೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ರಾಜನ್ ನನ್ನು ಇಂದು ಮುಂಬೈನ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಮೋಕಾ) ಅಡಿಯಲ್ಲಿ ಗೊತ್ತುಪಡಿಸಲಾದ ವಿಶೇಷ ನ್ಯಾಯಾಧೀಶ ಎ.ಎಂ. ಪಾಟೀಲ್ ಛೋಟಾ ರಾಜನ್ ಅವರನ್ನು ಖುಲಾಸೆಗೊಳಿಸಿದ್ದಾರೆ. ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.ಈ ಪ್ರಕರಣದಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

“ಯಾವುದೇ ಅಪರಾಧ ಅಥವಾ ಪ್ರಕರಣದಲ್ಲಿ ಅವರ ಅಗತ್ಯವಿಲ್ಲದಿದ್ದರೆ ಛೋಟಾ ರಾಜನ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ನ್ಯಾಯಾಲಯ ಹೇಳಿದೆ. ಮೇ 17, 2011ರಂದು ದಕ್ಷಿಣ ಮುಂಬೈನಲ್ಲಿ ಇಬ್ಬರು ವ್ಯಕ್ತಿಗಳು ಆರಿಫ್ ಅಬುನಾಕರ್ ಸಯ್ಯದ್ ಎಂಬುವವರ ಮೇಲೆ ಗುಂಡು ಹಾರಿಸಿದರು. ಸಯ್ಯದ್ ಪರಾರಿಯಾಗಿರುವ ದರೋಡೆಕೋರ ದಾವೂದ್ ಇಬ್ರಾಹಿಂನ ಕಿರಿಯ ಸಹೋದರ ಇಕ್ಬಾಲ್ ಹಸನ್ ಶೇಖ್ ಇಬ್ರಾಹಿಂ ಶೇಖ್ ಕಸ್ಕರ್ ಅವರ ಚಾಲಕ ಮತ್ತು ಅಂಗರಕ್ಷಕರಾಗಿದ್ದರು.

ಇದನ್ನೂ ಓದಿ: ಛೋಟಾ ರಾಜನ್ ಕೊರೊನಾದಿಂದ ಗುಣಮುಖ, ಏಮ್ಸ್​ನಿಂದ ಡಿಸ್ಚಾರ್ಜ್; ತಿಹಾರ್ ಜೈಲಿಗೆ ವಾಪಸ್

ಪೊಲೀಸರ ಪ್ರಕಾರ, ಭಾರತೀಯ ದಂಡ ಸಂಹಿತೆ, MCOCA ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಕೊಲೆ ಮತ್ತು ಕ್ರಿಮಿನಲ್ ಪಿತೂರಿಗಾಗಿ ಛೋಟಾ ರಾಜನ್ ಅವರ ಸೂಚನೆಯ ಮೇರೆಗೆ ಈ ಕೊಲೆ ನಡೆದಿದೆ. ಪತ್ರಕರ್ತ ಜ್ಯೋತಿರ್ಮಯ್ ಡೇ ಅವರ ಹತ್ಯೆಗೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವುದರಿಂದ ರಾಜನ್ ಜೈಲಿನಲ್ಲಿಯೇ ಇದ್ದಾರೆ. ಛೋಟಾ ರಾಜನ್ ಇತರ ಕ್ರಿಮಿನಲ್ ಪ್ರಕರಣಗಳಲ್ಲಿಯೂ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ