AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಜಾನ್ ಕಂಪನಿಯ ಪೋಸ್ಟರ್ ಧ್ವಂಸ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಬೇಕಿರುವ ರಾಜ್ ಠಾಕ್ರೆ

ಮುಂಬೈ: ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಹರಿದು ನಾಶಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಮುಂಬೈಯ ಸ್ಥಳೀಯ ನ್ಯಾಯಾಲಯಕ್ಕೆ ಇಂದು ಹಾಜರಾಗಬೇಕಿದೆ. ಅಮೇಜಾನ್ ಆ್ಯಪ್​ನಲ್ಲಿ ಮರಾಠಿ ಭಾಷೆಯ ಆಯ್ಕೆ ನೀಡದಿರುವುದನ್ನು ಖಂಡಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಧ್ವಂಸಗೊಳಿಸಿದ್ದರು. ಈ ಕುರಿತು ಅಮೇಜಾನ್ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯ ವಿರುದ್ಧ ಅರ್ಜಿ ಸಲ್ಲಿಸಿತ್ತು. ಇತ್ತೀಚಿಗಷ್ಟೇ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅಮೇಜಾನ್ ಸಿಇಒ ಜೆಫ್ ಬಿಜೋಸ್​ಗೆ […]

ಅಮೇಜಾನ್ ಕಂಪನಿಯ ಪೋಸ್ಟರ್ ಧ್ವಂಸ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಬೇಕಿರುವ ರಾಜ್ ಠಾಕ್ರೆ
ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ
guruganesh bhat
| Edited By: |

Updated on: Jan 05, 2021 | 12:03 PM

Share

ಮುಂಬೈ: ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಹರಿದು ನಾಶಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಮುಂಬೈಯ ಸ್ಥಳೀಯ ನ್ಯಾಯಾಲಯಕ್ಕೆ ಇಂದು ಹಾಜರಾಗಬೇಕಿದೆ.

ಅಮೇಜಾನ್ ಆ್ಯಪ್​ನಲ್ಲಿ ಮರಾಠಿ ಭಾಷೆಯ ಆಯ್ಕೆ ನೀಡದಿರುವುದನ್ನು ಖಂಡಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಧ್ವಂಸಗೊಳಿಸಿದ್ದರು. ಈ ಕುರಿತು ಅಮೇಜಾನ್ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯ ವಿರುದ್ಧ ಅರ್ಜಿ ಸಲ್ಲಿಸಿತ್ತು.

ಇತ್ತೀಚಿಗಷ್ಟೇ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅಮೇಜಾನ್ ಸಿಇಒ ಜೆಫ್ ಬಿಜೋಸ್​ಗೆ ಅಮೇಜಾನ್​ನಲ್ಲಿ ಮರಾಠಿ ಭಾಷೆಯಲ್ಲಿ ಸೇವೆ ನೀಡುವಂತೆ ಪತ್ರ ಬರೆದಿದ್ದರು. ಕನ್ನಡ, ತಮಿಳು, ತೆಲುಗು ಮಲಯಾಳಂ ಭಾಷೆಗಳಲ್ಲಿ ಸೇವೆ ನೀಡಲಾಗುತ್ತಿದ್ದು, ಭಾರತದಲ್ಲೇ ಮೂರನೇ ಹೆಚ್ಚು ಬಳಕೆದಾರರಿರುವ ಮರಾಠಿಯಲ್ಲಿ ಸೇವೆ ನೀಡುತ್ತಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಪತ್ರದ ನಂತರ ಅಮೇಜಾನ್ ಸಿಇಒ ಜೆಫ್ ಬಿಜೋಸ್ ರಾಜ್ ಠಾಕ್ರೆಯವರಲ್ಲಿ ಕ್ಷಮೆ ಕೇಳಿದ್ದರು. ಅಲ್ಲದೇ, ಮುಂಬೈಯ ಅಮೇಜಾನ್ ಕಚೇರಿಯಲ್ಲಿ ಸಭೆ ನಡೆಸಿ 20 ದಿನಗಳಲ್ಲಿ ಮರಾಠಿಯಲ್ಲಿ ಸೇವೆ ನೀಡುವ ಕುರಿತು ಭರವಸೆ ನೀಡಿದ್ದರು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಯುವ ಘಟಕದ ಉಪಾಧ್ಯಕ್ಷ ಅಖಿಲ್ ಚಿತ್ರೆ ತಿಳಿಸಿದ್ದರು. ಆದರೆ, ಇದರ ನಡುವೆಯೇ ಅಮೇಜಾನ್ ನ್ಯಾಯಾಲಯದ ಮೊರೆ ಹೋಗಿತ್ತು.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ