AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಜಾನ್ ಕಂಪನಿಯ ಪೋಸ್ಟರ್ ಧ್ವಂಸ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಬೇಕಿರುವ ರಾಜ್ ಠಾಕ್ರೆ

ಮುಂಬೈ: ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಹರಿದು ನಾಶಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಮುಂಬೈಯ ಸ್ಥಳೀಯ ನ್ಯಾಯಾಲಯಕ್ಕೆ ಇಂದು ಹಾಜರಾಗಬೇಕಿದೆ. ಅಮೇಜಾನ್ ಆ್ಯಪ್​ನಲ್ಲಿ ಮರಾಠಿ ಭಾಷೆಯ ಆಯ್ಕೆ ನೀಡದಿರುವುದನ್ನು ಖಂಡಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಧ್ವಂಸಗೊಳಿಸಿದ್ದರು. ಈ ಕುರಿತು ಅಮೇಜಾನ್ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯ ವಿರುದ್ಧ ಅರ್ಜಿ ಸಲ್ಲಿಸಿತ್ತು. ಇತ್ತೀಚಿಗಷ್ಟೇ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅಮೇಜಾನ್ ಸಿಇಒ ಜೆಫ್ ಬಿಜೋಸ್​ಗೆ […]

ಅಮೇಜಾನ್ ಕಂಪನಿಯ ಪೋಸ್ಟರ್ ಧ್ವಂಸ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಬೇಕಿರುವ ರಾಜ್ ಠಾಕ್ರೆ
ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ
guruganesh bhat
| Updated By: ಸಾಧು ಶ್ರೀನಾಥ್​|

Updated on: Jan 05, 2021 | 12:03 PM

Share

ಮುಂಬೈ: ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಹರಿದು ನಾಶಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಮುಂಬೈಯ ಸ್ಥಳೀಯ ನ್ಯಾಯಾಲಯಕ್ಕೆ ಇಂದು ಹಾಜರಾಗಬೇಕಿದೆ.

ಅಮೇಜಾನ್ ಆ್ಯಪ್​ನಲ್ಲಿ ಮರಾಠಿ ಭಾಷೆಯ ಆಯ್ಕೆ ನೀಡದಿರುವುದನ್ನು ಖಂಡಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಅಮೇಜಾನ್ ಕಂಪನಿಯ ಪೋಸ್ಟರ್​ಗಳನ್ನು ಧ್ವಂಸಗೊಳಿಸಿದ್ದರು. ಈ ಕುರಿತು ಅಮೇಜಾನ್ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯ ವಿರುದ್ಧ ಅರ್ಜಿ ಸಲ್ಲಿಸಿತ್ತು.

ಇತ್ತೀಚಿಗಷ್ಟೇ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅಮೇಜಾನ್ ಸಿಇಒ ಜೆಫ್ ಬಿಜೋಸ್​ಗೆ ಅಮೇಜಾನ್​ನಲ್ಲಿ ಮರಾಠಿ ಭಾಷೆಯಲ್ಲಿ ಸೇವೆ ನೀಡುವಂತೆ ಪತ್ರ ಬರೆದಿದ್ದರು. ಕನ್ನಡ, ತಮಿಳು, ತೆಲುಗು ಮಲಯಾಳಂ ಭಾಷೆಗಳಲ್ಲಿ ಸೇವೆ ನೀಡಲಾಗುತ್ತಿದ್ದು, ಭಾರತದಲ್ಲೇ ಮೂರನೇ ಹೆಚ್ಚು ಬಳಕೆದಾರರಿರುವ ಮರಾಠಿಯಲ್ಲಿ ಸೇವೆ ನೀಡುತ್ತಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಪತ್ರದ ನಂತರ ಅಮೇಜಾನ್ ಸಿಇಒ ಜೆಫ್ ಬಿಜೋಸ್ ರಾಜ್ ಠಾಕ್ರೆಯವರಲ್ಲಿ ಕ್ಷಮೆ ಕೇಳಿದ್ದರು. ಅಲ್ಲದೇ, ಮುಂಬೈಯ ಅಮೇಜಾನ್ ಕಚೇರಿಯಲ್ಲಿ ಸಭೆ ನಡೆಸಿ 20 ದಿನಗಳಲ್ಲಿ ಮರಾಠಿಯಲ್ಲಿ ಸೇವೆ ನೀಡುವ ಕುರಿತು ಭರವಸೆ ನೀಡಿದ್ದರು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಯುವ ಘಟಕದ ಉಪಾಧ್ಯಕ್ಷ ಅಖಿಲ್ ಚಿತ್ರೆ ತಿಳಿಸಿದ್ದರು. ಆದರೆ, ಇದರ ನಡುವೆಯೇ ಅಮೇಜಾನ್ ನ್ಯಾಯಾಲಯದ ಮೊರೆ ಹೋಗಿತ್ತು.

ಅಪ್ಲಿಕೇಶನ್​ನಲ್ಲಿ ಇಲ್ಲ ಮರಾಠಿ ಭಾಷೆ ಆಯ್ಕೆ; ರೊಚ್ಚಿಗೆದ್ದ MNS ಕಾರ್ಯಕರ್ತರಿಂದ ಅಮೇಜಾನ್ ಕಚೇರಿ ಧ್ವಂಸ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?