AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಹೆಣ್ಣು ಶಿಶುವನ್ನು ಎಸೆಯಲು ಯತ್ನ, ತಂದೆಯ ಬಂಧನ

ನವಜಾತ ಹೆಣ್ಣು ಶಿಶುವನ್ನು ಎಸೆಯಲು ಹೋಗಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಸಂಜೆ ಗಾಂಧಿನಗರ ಜಂಕ್ಷನ್‌ನಲ್ಲಿರುವ ಭಾರತ್ ಪೆಟ್ರೋಲ್ ಪಂಪ್ ಬಳಿ ಈ ಘಟನೆ ಸಂಭವಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಸತೀಶ್ ಸಸಾನೆ ಅವರು ವ್ಯಕ್ತಯೊಬ್ಬ ಕೊಳಕು ಬಟ್ಟೆಯಲ್ಲಿ ಏನೋ ಸುತ್ತಿಕೊಂಡು ಹೊತ್ತುಕೊಂಡು ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ, ಆತನ ವರ್ತನೆ ಅನುಮಾನಾಸ್ಪದವಾಗಿತ್ತು. ರಿಕ್ಷಾವನ್ನು ನಿಲ್ಲಿಸಿ ಬಟ್ಟೆಯನ್ನು ಪರಿಶೀಲಿಸಿದಾಗ, ನವಜಾತ ಹೆಣ್ಣು ಮಗುವನ್ನು ಕಂಡು ದಿಗ್ಭ್ರಮೆಗೊಂಡರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನವಜಾತ ಹೆಣ್ಣು ಶಿಶುವನ್ನು ಎಸೆಯಲು ಯತ್ನ, ತಂದೆಯ ಬಂಧನ
ಮಗುImage Credit source: Pexels
ನಯನಾ ರಾಜೀವ್
|

Updated on:May 27, 2025 | 12:37 PM

Share

ಮುಂಬೈ, ಮೇ 27: ನವಜಾತ ಹೆಣ್ಣು ಶಿಶು(Girl Baby)ವನ್ನು ಎಸೆಯಲು ಹೋಗಿದ್ದ 28 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಸಂಜೆ ಗಾಂಧಿನಗರ ಜಂಕ್ಷನ್‌ನಲ್ಲಿರುವ ಭಾರತ್ ಪೆಟ್ರೋಲ್ ಪಂಪ್ ಬಳಿ ಈ ಘಟನೆ ಸಂಭವಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಸತೀಶ್ ಸಸಾನೆ ಅವರು ವ್ಯಕ್ತಿ ಯೊಬ್ಬ ಕೊಳಕು ಬಟ್ಟೆಯಲ್ಲಿ ಏನೋ ಸುತ್ತಿಕೊಂಡು ಹೊತ್ತುಕೊಂಡು ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ, ಆತನ ವರ್ತನೆ ಅನುಮಾನಾಸ್ಪದವಾಗಿತ್ತು. ರಿಕ್ಷಾವನ್ನು ನಿಲ್ಲಿಸಿ ಬಟ್ಟೆಯನ್ನು ಪರಿಶೀಲಿಸಿದಾಗ, ನವಜಾತ ಹೆಣ್ಣು ಮಗುವನ್ನು ಕಂಡು ದಿಗ್ಭ್ರಮೆಗೊಂಡರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಆ ವ್ಯಕ್ತಿಯೊಂದಿಗೆ ಯಾವುದೇ ಮಹಿಳೆ ಇಲ್ಲದ ಕಾರಣ, ಪೊಲೀಸರು ಅನುಮಾನಗೊಂಡು ತಕ್ಷಣ ನಿರ್ಭಯಾ ಸ್ಕ್ವಾಡ್‌ನ ಮಹಿಳಾ ಅಧಿಕಾರಿಯನ್ನು ಕರೆಸಿದರು. ಇದು ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸಲು ಮುಂಬೈ ಪೊಲೀಸ್ ವಿಶೇಷ ಉಪಕ್ರಮವಾಗಿದೆ. ಅಧಿಕಾರಿ ಆಗಮಿಸಿದ ನಂತರ, ಆರೋಪಿಯು ಆತಂಕಗೊಂಡಿದ್ದಾನೆ ಮತ್ತು ಮಗು ತನ್ನ ಸ್ವಂತ ಮಗಳು,ತನ್ನ ಅಕ್ರಮ ಸಂಬಂಧದಿಂದ ಜನಿಸಿದ ಮಗು ಎಂದು ಹೇಳಿದ್ದಾನೆ.

ಅಧಿಕಾರಿಯೊಬ್ಬರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಯು ಇತ್ತೀಚೆಗೆ ವಿವಾಹಿತನಾಗಿದ್ದು, ವರದಿಯ ಪ್ರಕಾರ, ತನ್ನ ಚಿಕ್ಕಮ್ಮನೊಂದಿಗೆ ನಾಲ್ಕು ವರ್ಷಗಳ ಕಾಲ ಸಂಬಂಧ ಹೊಂದಿದ್ದ. ಆಕೆಯು ಮಗುವಿಗೆ ಜನ್ಮ ನೀಡಿದಳು. ಸಂಬಂಧ ಬಹಿರಂಗವಾದರೆ ಸಾಮಾಜಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಭಯದಿಂದ, ಆರೋಪಿಯು ತನ್ನ ಚಿಕ್ಕಮ್ಮನನ್ನು ದಾರಿ ತಪ್ಪಿಸಿ, ಮಗುವನ್ನು ಪೊವಾಯಿಯಲ್ಲಿರುವ ಸ್ನೇಹಿತನ ಮನೆಗೆ ಕರೆದೊಯ್ಯುವುದಾಗಿ ಹೇಳಿದ್ದಾನೆ.

ಮತ್ತಷ್ಟು ಓದಿ: ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಅಪ್ರಾಪ್ತೆಗೆ ಹುಟ್ಟಿದ ಶಿಶು ಕಸದ ಬುಟ್ಟಿಗೆ..!

ಬಳಿಕ ಎಲ್ಲಾದರೂ ಎಸೆದು ಹೋಗಲು ನಿರ್ಧರಿಸಿದ್ದ. ಪಾರ್ಕ್‌ಸೈಟ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂತೋಷ್ ಘಟೇಕರ್ ಮಾತನಾಡಿ, ಮಗು ಸುರಕ್ಷಿತವಾಗಿ ತನ್ನ ತಾಯಿಯೊಂದಿಗೆ ಮತ್ತೆ ಸೇರಿಕೊಂಡಿದೆ ಮತ್ತು ಇಬ್ಬರನ್ನೂ ಆರೈಕೆ ಮತ್ತು ನಿಗಾ ಇರಿಸಲು ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 91 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂಬೈನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ 9 ವರ್ಷದ ಯುವಕನೊಬ್ಬ 17 ವರ್ಷದ ಬಾಲಕಿಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾನೆ. ಸಂಬಂಧದ ಪ್ರಸ್ತಾಪವನ್ನು ನಿರಾಕರಿಸಿದ ಕಾರಣ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಸಂಜಯ್ ನಗರದ ಗೋಸಾಲಿಯಾ ರಸ್ತೆಯಲ್ಲಿ ಹುಡುಗಿ ತನ್ನ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದಾಳಿ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:33 pm, Tue, 27 May 25

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ