AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ವಿಪರೀತ ಸಾಲ ಮಾಡಿಕೊಂಡು ತೀರಿಸಲಾಗದೆ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬ, ತಾನೇ ಅಪಹರಣವಾಗಿದ್ದೇನೆ ಎಂದು ನಾಟಕವಾಗಿ ತಂದೆಯ ಬಳಿ ಹಣಕ್ಕೆ ಬೇಡಿಕೆಯಿಟ್ಟ ಘಟನೆ ಮುಂಬೈನಲ್ಲಿ ನಡೆದಿದೆ.

ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ
ಪೊಲೀಸ್
ನಯನಾ ರಾಜೀವ್
|

Updated on: Jun 02, 2023 | 9:01 AM

Share

ವಿಪರೀತ ಸಾಲ ಮಾಡಿಕೊಂಡು ತೀರಿಸಲಾಗದೆ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬ, ತಾನೇ ಅಪಹರಣವಾಗಿದ್ದೇನೆ ಎಂದು ನಾಟಕವಾಗಿ ತಂದೆಯ ಬಳಿ ಹಣಕ್ಕೆ ಬೇಡಿಕೆಯಿಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಸಾಲವನ್ನು ತೀರಿಸಲು ತಂದೆಯ ಬಳಿ ಸುಲಿಗೆ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಜಿತೇಂದ್ರ ಜೋಷಿ ಎಂದು ಗುರುತಿಸಲಾಗಿದೆ ಎಂದು ಮುಂಬೈ ಉಪ ಪೊಲೀಸ್ ಆಯುಕ್ತ ಅಜಯ್ ಬನ್ಸಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಿತೇಂದ್ರ ಜೋಶಿ ಎಂಬ 27 ವರ್ಷದ ವ್ಯಕ್ತಿ ತಾನೇ ಅಪಹರಣವಾಗಿದ್ದೇನೆಂದು ಸುಳ್ಳು ಹೇಳಿ ತಂದೆಯ ಬಳಿ 5 ಲಕ್ಷ ರೂ ಬೇಡಿಕೆ ಇಟ್ಟಿದ್ದ. ಜೋಶಿ ಅವರ ಪತ್ನಿಗೆ ವಾಟ್ಸ್‌ಆ್ಯಪ್ ಕರೆ ಬಂದಿದ್ದು, ಪತಿಯನ್ನು ಅಪಹರಿಸಲಾಗಿದೆ ಮತ್ತು 5 ಲಕ್ಷ ರೂ. ಪರಿಹಾರ ನೀಡುವಂತೆ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಲಾಗಿದೆ. ಆರೋಪಿಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ವೈರಲ್ ನ್ಯೂಸ್​: ಕಾಲೇಜಿನಿಂದ ಬರುವಾಗ ಯುವತಿಯ ಅಪಹರಣ, ಆ ಮೇಲೆ ಆಗಿದ್ದೇನು?

12 ಗಂಟೆಯೊಳಗೆ ಜೋಶಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಆತ ತನ್ನ ತಂದೆಯಿಂದ ಹಣ ಪಡೆಯಲು ಅಪಹರಣ ನಾಟಕವಾಡಿದ್ದಾಗಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯದಿಂದ ಜೂನ್ 3ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ