ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ವಿಪರೀತ ಸಾಲ ಮಾಡಿಕೊಂಡು ತೀರಿಸಲಾಗದೆ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬ, ತಾನೇ ಅಪಹರಣವಾಗಿದ್ದೇನೆ ಎಂದು ನಾಟಕವಾಗಿ ತಂದೆಯ ಬಳಿ ಹಣಕ್ಕೆ ಬೇಡಿಕೆಯಿಟ್ಟ ಘಟನೆ ಮುಂಬೈನಲ್ಲಿ ನಡೆದಿದೆ.

ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ
ಪೊಲೀಸ್

Updated on: Jun 02, 2023 | 9:01 AM

ವಿಪರೀತ ಸಾಲ ಮಾಡಿಕೊಂಡು ತೀರಿಸಲಾಗದೆ ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬ, ತಾನೇ ಅಪಹರಣವಾಗಿದ್ದೇನೆ ಎಂದು ನಾಟಕವಾಗಿ ತಂದೆಯ ಬಳಿ ಹಣಕ್ಕೆ ಬೇಡಿಕೆಯಿಟ್ಟ ಘಟನೆ ಮುಂಬೈನಲ್ಲಿ ನಡೆದಿದೆ. ಸಾಲವನ್ನು ತೀರಿಸಲು ತಂದೆಯ ಬಳಿ ಸುಲಿಗೆ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಜಿತೇಂದ್ರ ಜೋಷಿ ಎಂದು ಗುರುತಿಸಲಾಗಿದೆ ಎಂದು ಮುಂಬೈ ಉಪ ಪೊಲೀಸ್ ಆಯುಕ್ತ ಅಜಯ್ ಬನ್ಸಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಿತೇಂದ್ರ ಜೋಶಿ ಎಂಬ 27 ವರ್ಷದ ವ್ಯಕ್ತಿ ತಾನೇ ಅಪಹರಣವಾಗಿದ್ದೇನೆಂದು ಸುಳ್ಳು ಹೇಳಿ ತಂದೆಯ ಬಳಿ 5 ಲಕ್ಷ ರೂ ಬೇಡಿಕೆ ಇಟ್ಟಿದ್ದ. ಜೋಶಿ ಅವರ ಪತ್ನಿಗೆ ವಾಟ್ಸ್‌ಆ್ಯಪ್ ಕರೆ ಬಂದಿದ್ದು, ಪತಿಯನ್ನು ಅಪಹರಿಸಲಾಗಿದೆ ಮತ್ತು 5 ಲಕ್ಷ ರೂ. ಪರಿಹಾರ ನೀಡುವಂತೆ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಲಾಗಿದೆ. ಆರೋಪಿಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ವೈರಲ್ ನ್ಯೂಸ್​: ಕಾಲೇಜಿನಿಂದ ಬರುವಾಗ ಯುವತಿಯ ಅಪಹರಣ, ಆ ಮೇಲೆ ಆಗಿದ್ದೇನು?

12 ಗಂಟೆಯೊಳಗೆ ಜೋಶಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ಆತ ತನ್ನ ತಂದೆಯಿಂದ ಹಣ ಪಡೆಯಲು ಅಪಹರಣ ನಾಟಕವಾಡಿದ್ದಾಗಿ ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯದಿಂದ ಜೂನ್ 3ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us