AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಶೇಕಡಾ 50ಕ್ಕೂ ಹೆಚ್ಚಿನ ಮಕ್ಕಳಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಕಂಡುಬಂದಿದೆ: ಸೆರೊ ಸರ್ವೆ

ಮಾರ್ಚ್‌ನಲ್ಲಿ ನಡೆಸಿದ್ದ ಸೆರೋ ಸರ್ವೆಯಲ್ಲಿ 18 ವರ್ಷದ ಕೆಳಗಿನ ಮಕ್ಕಳಲ್ಲಿ ಶೇಕಡಾ 39.4 ಮಂದಿಯಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿತ್ತು. ಕೊರೊನಾ ಮೂರನೇ ಅಲೆಯ ಕುರಿತ ಆತಂಕದ ಕಾರಣದಿಂದ ಹಾಗೂ ಮುನ್ನೆಚ್ಚರಿಕೆಯ ಉದ್ದೇಶದಿಂದ ಈ ಅಧ್ಯಯನ ಕೈಗೊಳ್ಳಲಾಗಿತ್ತು.

ಮುಂಬೈನ ಶೇಕಡಾ 50ಕ್ಕೂ ಹೆಚ್ಚಿನ ಮಕ್ಕಳಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಕಂಡುಬಂದಿದೆ: ಸೆರೊ ಸರ್ವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 28, 2021 | 9:44 PM

Share

ಮುಂಬೈ: ನಗರದಲ್ಲಿ ನಡೆಸಿರುವ ಸೆರೋ ಗಣತಿಯ ಪ್ರಕಾರ 18 ವರ್ಷದ ಒಳಗಿನ ಶೇಕಡಾ 51.18 ರಷ್ಟು ಮಕ್ಕಳ ದೇಹದಲ್ಲಿ ರೋಗನಿರೋಧಕ‌ ಶಕ್ತಿ ಇರುವುದು ಕಂಡುಬಂದಿದೆ. ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆ ಹಾಗೂ ಕಸ್ತೂರ್ಬಾ ಮಾಲಿಕ್ಯುಲರ್ ಡಯಾಗ್ನಿಸ್ಟಿಕ್ ಲ್ಯಾಬೊರೇಟರಿ ಏಪ್ರಿಲ್ 1ರಿಂದ ಜೂನ್ 15ರ ವರೆಗೆ ನಡೆಸಿರುವ ಈ ಸರ್ವೆ ಪ್ರಕಾರ ಈ‌ಮಾಹಿತಿ ದೃಢಪಟ್ಟಿದೆ.

ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ (ಬಿಎಮ್‌ಸಿ) ಹೇಳಿಕೆಯಂತೆ, ಒಟ್ಟು 2,176 ರಕ್ತದ ಮಾದರಿಗಳನ್ನು ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ಬಹುತೇಕ ಮಕ್ಕಳ ದೇಹದಲ್ಲಿ ರೋಗನಿರೋಧಕ ಶಕ್ತಿ ಇರುವುದು ಖಚಿತವಾಗಿದೆ. ಈ‌ ಮೊದಲಿನ ಸೆರೋ ಅಧ್ಯಯನಕ್ಕಿಂತ ಈ ಬಾರಿ ಹೆಚ್ಚು ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿದೆ.

10ರಿಂದ 14 ವರ್ಷದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕಂಡುಬಂದಿದೆ. ಈ ವಯಸ್ಸಿನವರಲ್ಲಿ 53.43 ಶೇಕಡಾ ರೋಗನಿರೋಧಕ ಶಕ್ತಿ ಇದೆ. 1 ರಿಂದ 4 ವರ್ಷದ ವಯಸ್ಸಿನ‌ ಮಕ್ಕಳಲ್ಲಿ 51.04 ಶೇಕಡಾ ರೋಗನಿರೋಧಕ ಶಕ್ತಿ ಇದೆ. 5 ರಿಂದ 9 ವರ್ಷದ ಮಕ್ಕಳಲ್ಲಿ ಶೇಕಡಾ 47.33ರಷ್ಟು ರೋಗನಿರೋಧಕ ಶಕ್ತಿ ಇದೆ. 15 ರಿಂದ 18 ವರ್ಷದ ಮಕ್ಕಳಲ್ಲಿ ಶೇಕಡಾ 51.39ರಷ್ಟು ರೋಗನಿರೋಧಕ ಶಕ್ತಿ ಕಂಡುಬಂದಿದೆ.

ಮಾರ್ಚ್‌ನಲ್ಲಿ ನಡೆಸಿದ್ದ ಸೆರೋ ಸರ್ವೆಯಲ್ಲಿ 18 ವರ್ಷದ ಕೆಳಗಿನ ಮಕ್ಕಳಲ್ಲಿ ಶೇಕಡಾ 39.4 ಮಂದಿಯಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿತ್ತು. ಕೊರೊನಾ ಮೂರನೇ ಅಲೆಯ ಕುರಿತ ಆತಂಕದ ಕಾರಣದಿಂದ ಹಾಗೂ ಮುನ್ನೆಚ್ಚರಿಕೆಯ ಉದ್ದೇಶದಿಂದ ಈ ಅಧ್ಯಯನ ಕೈಗೊಳ್ಳಲಾಗಿತ್ತು.

ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾರಣದಿಂದ ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಆರ್​ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ ಎಂದು ತಿಳಿಸಿದೆ. ಕೊರೊನಾ ರೂಪಾಂತರಿ ಹರಡುವಿಕೆ ಪ್ರಮಾಣ ಕಡಿಮೆ‌ ಮಾಡುವ ಉದ್ದೇಶದಿಂದ ಜೂನ್ 28ರಿಂದ ಈ ಕ್ರಮ ಜಾರಿಯಲ್ಲಿರಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ಕೊರೊನಾ ಹೆಚ್ಚಾಗುತ್ತಿದೆ. ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಟುಬರುತ್ತಿದೆ. ಹೀಗಾಗಿ ಗಡಿಭಾಗಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೊವಿಡ್​ ಲಸಿಕೆ ಸಿದ್ಧ; ಜುಲೈ-ಅಗಸ್ಟ್​​ನಿಂದ 12 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶನ್​​

Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

Published On - 8:13 pm, Mon, 28 June 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!