AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಶೇಕಡಾ 50ಕ್ಕೂ ಹೆಚ್ಚಿನ ಮಕ್ಕಳಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಕಂಡುಬಂದಿದೆ: ಸೆರೊ ಸರ್ವೆ

ಮಾರ್ಚ್‌ನಲ್ಲಿ ನಡೆಸಿದ್ದ ಸೆರೋ ಸರ್ವೆಯಲ್ಲಿ 18 ವರ್ಷದ ಕೆಳಗಿನ ಮಕ್ಕಳಲ್ಲಿ ಶೇಕಡಾ 39.4 ಮಂದಿಯಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿತ್ತು. ಕೊರೊನಾ ಮೂರನೇ ಅಲೆಯ ಕುರಿತ ಆತಂಕದ ಕಾರಣದಿಂದ ಹಾಗೂ ಮುನ್ನೆಚ್ಚರಿಕೆಯ ಉದ್ದೇಶದಿಂದ ಈ ಅಧ್ಯಯನ ಕೈಗೊಳ್ಳಲಾಗಿತ್ತು.

ಮುಂಬೈನ ಶೇಕಡಾ 50ಕ್ಕೂ ಹೆಚ್ಚಿನ ಮಕ್ಕಳಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಕಂಡುಬಂದಿದೆ: ಸೆರೊ ಸರ್ವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 28, 2021 | 9:44 PM

Share

ಮುಂಬೈ: ನಗರದಲ್ಲಿ ನಡೆಸಿರುವ ಸೆರೋ ಗಣತಿಯ ಪ್ರಕಾರ 18 ವರ್ಷದ ಒಳಗಿನ ಶೇಕಡಾ 51.18 ರಷ್ಟು ಮಕ್ಕಳ ದೇಹದಲ್ಲಿ ರೋಗನಿರೋಧಕ‌ ಶಕ್ತಿ ಇರುವುದು ಕಂಡುಬಂದಿದೆ. ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆ ಹಾಗೂ ಕಸ್ತೂರ್ಬಾ ಮಾಲಿಕ್ಯುಲರ್ ಡಯಾಗ್ನಿಸ್ಟಿಕ್ ಲ್ಯಾಬೊರೇಟರಿ ಏಪ್ರಿಲ್ 1ರಿಂದ ಜೂನ್ 15ರ ವರೆಗೆ ನಡೆಸಿರುವ ಈ ಸರ್ವೆ ಪ್ರಕಾರ ಈ‌ಮಾಹಿತಿ ದೃಢಪಟ್ಟಿದೆ.

ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ (ಬಿಎಮ್‌ಸಿ) ಹೇಳಿಕೆಯಂತೆ, ಒಟ್ಟು 2,176 ರಕ್ತದ ಮಾದರಿಗಳನ್ನು ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ಬಹುತೇಕ ಮಕ್ಕಳ ದೇಹದಲ್ಲಿ ರೋಗನಿರೋಧಕ ಶಕ್ತಿ ಇರುವುದು ಖಚಿತವಾಗಿದೆ. ಈ‌ ಮೊದಲಿನ ಸೆರೋ ಅಧ್ಯಯನಕ್ಕಿಂತ ಈ ಬಾರಿ ಹೆಚ್ಚು ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿದೆ.

10ರಿಂದ 14 ವರ್ಷದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕಂಡುಬಂದಿದೆ. ಈ ವಯಸ್ಸಿನವರಲ್ಲಿ 53.43 ಶೇಕಡಾ ರೋಗನಿರೋಧಕ ಶಕ್ತಿ ಇದೆ. 1 ರಿಂದ 4 ವರ್ಷದ ವಯಸ್ಸಿನ‌ ಮಕ್ಕಳಲ್ಲಿ 51.04 ಶೇಕಡಾ ರೋಗನಿರೋಧಕ ಶಕ್ತಿ ಇದೆ. 5 ರಿಂದ 9 ವರ್ಷದ ಮಕ್ಕಳಲ್ಲಿ ಶೇಕಡಾ 47.33ರಷ್ಟು ರೋಗನಿರೋಧಕ ಶಕ್ತಿ ಇದೆ. 15 ರಿಂದ 18 ವರ್ಷದ ಮಕ್ಕಳಲ್ಲಿ ಶೇಕಡಾ 51.39ರಷ್ಟು ರೋಗನಿರೋಧಕ ಶಕ್ತಿ ಕಂಡುಬಂದಿದೆ.

ಮಾರ್ಚ್‌ನಲ್ಲಿ ನಡೆಸಿದ್ದ ಸೆರೋ ಸರ್ವೆಯಲ್ಲಿ 18 ವರ್ಷದ ಕೆಳಗಿನ ಮಕ್ಕಳಲ್ಲಿ ಶೇಕಡಾ 39.4 ಮಂದಿಯಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿತ್ತು. ಕೊರೊನಾ ಮೂರನೇ ಅಲೆಯ ಕುರಿತ ಆತಂಕದ ಕಾರಣದಿಂದ ಹಾಗೂ ಮುನ್ನೆಚ್ಚರಿಕೆಯ ಉದ್ದೇಶದಿಂದ ಈ ಅಧ್ಯಯನ ಕೈಗೊಳ್ಳಲಾಗಿತ್ತು.

ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾರಣದಿಂದ ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಆರ್​ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ ಎಂದು ತಿಳಿಸಿದೆ. ಕೊರೊನಾ ರೂಪಾಂತರಿ ಹರಡುವಿಕೆ ಪ್ರಮಾಣ ಕಡಿಮೆ‌ ಮಾಡುವ ಉದ್ದೇಶದಿಂದ ಜೂನ್ 28ರಿಂದ ಈ ಕ್ರಮ ಜಾರಿಯಲ್ಲಿರಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ಕೊರೊನಾ ಹೆಚ್ಚಾಗುತ್ತಿದೆ. ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಟುಬರುತ್ತಿದೆ. ಹೀಗಾಗಿ ಗಡಿಭಾಗಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೊವಿಡ್​ ಲಸಿಕೆ ಸಿದ್ಧ; ಜುಲೈ-ಅಗಸ್ಟ್​​ನಿಂದ 12 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶನ್​​

Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

Published On - 8:13 pm, Mon, 28 June 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ