AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಶೇಕಡಾ 50ಕ್ಕೂ ಹೆಚ್ಚಿನ ಮಕ್ಕಳಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಕಂಡುಬಂದಿದೆ: ಸೆರೊ ಸರ್ವೆ

ಮಾರ್ಚ್‌ನಲ್ಲಿ ನಡೆಸಿದ್ದ ಸೆರೋ ಸರ್ವೆಯಲ್ಲಿ 18 ವರ್ಷದ ಕೆಳಗಿನ ಮಕ್ಕಳಲ್ಲಿ ಶೇಕಡಾ 39.4 ಮಂದಿಯಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿತ್ತು. ಕೊರೊನಾ ಮೂರನೇ ಅಲೆಯ ಕುರಿತ ಆತಂಕದ ಕಾರಣದಿಂದ ಹಾಗೂ ಮುನ್ನೆಚ್ಚರಿಕೆಯ ಉದ್ದೇಶದಿಂದ ಈ ಅಧ್ಯಯನ ಕೈಗೊಳ್ಳಲಾಗಿತ್ತು.

ಮುಂಬೈನ ಶೇಕಡಾ 50ಕ್ಕೂ ಹೆಚ್ಚಿನ ಮಕ್ಕಳಲ್ಲಿ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಕಂಡುಬಂದಿದೆ: ಸೆರೊ ಸರ್ವೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Jun 28, 2021 | 9:44 PM

ಮುಂಬೈ: ನಗರದಲ್ಲಿ ನಡೆಸಿರುವ ಸೆರೋ ಗಣತಿಯ ಪ್ರಕಾರ 18 ವರ್ಷದ ಒಳಗಿನ ಶೇಕಡಾ 51.18 ರಷ್ಟು ಮಕ್ಕಳ ದೇಹದಲ್ಲಿ ರೋಗನಿರೋಧಕ‌ ಶಕ್ತಿ ಇರುವುದು ಕಂಡುಬಂದಿದೆ. ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆ ಹಾಗೂ ಕಸ್ತೂರ್ಬಾ ಮಾಲಿಕ್ಯುಲರ್ ಡಯಾಗ್ನಿಸ್ಟಿಕ್ ಲ್ಯಾಬೊರೇಟರಿ ಏಪ್ರಿಲ್ 1ರಿಂದ ಜೂನ್ 15ರ ವರೆಗೆ ನಡೆಸಿರುವ ಈ ಸರ್ವೆ ಪ್ರಕಾರ ಈ‌ಮಾಹಿತಿ ದೃಢಪಟ್ಟಿದೆ.

ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ (ಬಿಎಮ್‌ಸಿ) ಹೇಳಿಕೆಯಂತೆ, ಒಟ್ಟು 2,176 ರಕ್ತದ ಮಾದರಿಗಳನ್ನು ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ಬಹುತೇಕ ಮಕ್ಕಳ ದೇಹದಲ್ಲಿ ರೋಗನಿರೋಧಕ ಶಕ್ತಿ ಇರುವುದು ಖಚಿತವಾಗಿದೆ. ಈ‌ ಮೊದಲಿನ ಸೆರೋ ಅಧ್ಯಯನಕ್ಕಿಂತ ಈ ಬಾರಿ ಹೆಚ್ಚು ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿದೆ.

10ರಿಂದ 14 ವರ್ಷದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕಂಡುಬಂದಿದೆ. ಈ ವಯಸ್ಸಿನವರಲ್ಲಿ 53.43 ಶೇಕಡಾ ರೋಗನಿರೋಧಕ ಶಕ್ತಿ ಇದೆ. 1 ರಿಂದ 4 ವರ್ಷದ ವಯಸ್ಸಿನ‌ ಮಕ್ಕಳಲ್ಲಿ 51.04 ಶೇಕಡಾ ರೋಗನಿರೋಧಕ ಶಕ್ತಿ ಇದೆ. 5 ರಿಂದ 9 ವರ್ಷದ ಮಕ್ಕಳಲ್ಲಿ ಶೇಕಡಾ 47.33ರಷ್ಟು ರೋಗನಿರೋಧಕ ಶಕ್ತಿ ಇದೆ. 15 ರಿಂದ 18 ವರ್ಷದ ಮಕ್ಕಳಲ್ಲಿ ಶೇಕಡಾ 51.39ರಷ್ಟು ರೋಗನಿರೋಧಕ ಶಕ್ತಿ ಕಂಡುಬಂದಿದೆ.

ಮಾರ್ಚ್‌ನಲ್ಲಿ ನಡೆಸಿದ್ದ ಸೆರೋ ಸರ್ವೆಯಲ್ಲಿ 18 ವರ್ಷದ ಕೆಳಗಿನ ಮಕ್ಕಳಲ್ಲಿ ಶೇಕಡಾ 39.4 ಮಂದಿಯಲ್ಲಿ ರೋಗನಿರೋಧಕ ಶಕ್ತಿ ಕಂಡುಬಂದಿತ್ತು. ಕೊರೊನಾ ಮೂರನೇ ಅಲೆಯ ಕುರಿತ ಆತಂಕದ ಕಾರಣದಿಂದ ಹಾಗೂ ಮುನ್ನೆಚ್ಚರಿಕೆಯ ಉದ್ದೇಶದಿಂದ ಈ ಅಧ್ಯಯನ ಕೈಗೊಳ್ಳಲಾಗಿತ್ತು.

ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾರಣದಿಂದ ನೆರೆಯ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಆರ್​ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ ಎಂದು ತಿಳಿಸಿದೆ. ಕೊರೊನಾ ರೂಪಾಂತರಿ ಹರಡುವಿಕೆ ಪ್ರಮಾಣ ಕಡಿಮೆ‌ ಮಾಡುವ ಉದ್ದೇಶದಿಂದ ಜೂನ್ 28ರಿಂದ ಈ ಕ್ರಮ ಜಾರಿಯಲ್ಲಿರಲಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಿ ಕೊರೊನಾ ಹೆಚ್ಚಾಗುತ್ತಿದೆ. ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಟುಬರುತ್ತಿದೆ. ಹೀಗಾಗಿ ಗಡಿಭಾಗಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೊವಿಡ್​ ಲಸಿಕೆ ಸಿದ್ಧ; ಜುಲೈ-ಅಗಸ್ಟ್​​ನಿಂದ 12 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶನ್​​

Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

Published On - 8:13 pm, Mon, 28 June 21

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್