AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನಿಂದ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ಶರಣು

ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಮೃತಳನ್ನು ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ.

ಗೆಳೆಯನಿಂದ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ಶರಣು
ಸ್ತುತಿImage Credit source: NDTV
ನಯನಾ ರಾಜೀವ್
|

Updated on: Mar 11, 2026 | 7:30 AM

Share

ಮುಂಬೈ, ಮಾರ್ಚ್​ 11: ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಮೃತಳನ್ನು ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಆಂಟೋಪ್ ಹಿಲ್​​ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ವಿಮಾ ಏಜೆಂಟ್ ಆಗಿರುವ ಫಜಲ್ ಮೊಹಮ್ಮದ್ ಖಾನ್ ಹೆಸರು ಕೇಳಿಬಂದಿದ್ದು, ಆತನನ್ನು ಬಂಧಿಸಲಾಗಿದೆ.

ಮುಂಬೈನ ಆಂಟೋಪ್ ಹಿಲ್ ನೆರೆಹೊರೆಯಲ್ಲಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸವಾಗಿದ್ದಳು. ನಿನ್ನೆ ಬೆಳಗ್ಗೆ 11 ಗಂಟೆಯವರೆಗೆ ಅವಳು ತನ್ನ ಕೋಣೆಯಿಂದ ಹೊರಬರದಿದ್ದಾಗ, ಅವಳ ಪೋಷಕರು ಅವಳಿಗೆ ಕರೆ ಮಾಡಿದ್ದಾರೆ, ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಅವರು ಅವಳ ಕೋಣೆಯ ಬಾಗಿಲು ಒಡೆದು ನೋಡಿದಾಗ, ಆಕೆ ಸೀಲಿಂಗ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.

ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವಳು ಸತ್ತಿದ್ದಾಳೆಂದು ಘೋಷಿಸಿದ್ದಾರೆ. ಯುವತಿ ತನ್ನ ಕೋಣೆಯಲ್ಲಿ ಆರು ಪುಟಗಳ ‘ಆತ್ಮಹತ್ಯೆ ಪತ್ರ’ವನ್ನು ಬರೆದಿಟ್ಟಿದ್ದಾಳೆ. ಅದರಲ್ಲಿ ಅವಳು ಖಾನ್ ಹೆಸರಿಸಿದ್ದಾಳೆ ಮತ್ತು ಅವನು ನಿರಂತರವಾಗಿ ತನಗೆ ಕಿರುಕುಳ ನೀಡುತ್ತಿದ್ದ ಎಂದು ಬರೆದಿದ್ದಾಳೆ ಎಂದು ಆಂಟೋಪ್ ಹಿಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಯುವತಿ ಪೋಷಕರು ನೀಡಿರುವ ದೂರಿನ ಮೇಲೆ ಆರೋಪಿಯನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 108 ಸೇರಿದಂತೆ ಸಂಬಂಧಿತ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಮೃತ ಯುವತಿ ಹಾಗೂ ಆರೋಪಿ ಡೇಟಿಂಗ್ ಆ್ಯಪ್ ಮೂಲಕ ಪರಿಷಯವಾಗಿದ್ದರು, ಕಳೆದ ಒಂದು ವರ್ಷದಿಂದ ಸಂಬಂಧದಲ್ಲಿದ್ದರು ಎಂಬುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು