AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಕಿಂಗ್​ಗೆಂದು ಹೋಗಿದ್ದ ವೃದ್ಧೆ ಹಿಂದಿರುಗಲೇ ಇಲ್ಲ, ಆಗಿತ್ತು ಅಪಘಾತ, ನೆಕ್ಲೇಸ್​ನಿಂದ ಜಾಗ ಪತ್ತೆ ಮಾಡಿದ ಕುಟುಂಬ

ಸಂಜೆ ಸಮಯದಲ್ಲಿ ವಾಕಿಂಗ್​​ಗೆಂದು ಹೋಗಿದ್ದ ವೃದ್ಧೆ ಮನೆಗೆ ಹಿಂದಿರುಗಿ ಬರಲೇ ಇಲ್ಲ. ಅವರು ಅಪಘಾತವಾಗಿ ಆಸ್ಪತ್ರೆ ಸೇರಿದ್ದರು. ಅವರ ಕುಟುಂಬ ಅವರಿರುವ ಜಾಗವನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದ್ದು, ಅದಕ್ಕೆ ಸಹಾಯ ಮಾಡಿದ್ದು ಅವರ ನೆಕ್ಲೇಸ್​​ನಲ್ಲಿದ್ದ ಜಿಪಿಎಸ್ ಟ್ರ್ಯಾಕರ್. ವಾಕಿಂಗ್​ಗೆ ಹೋಗಿದ್ದಾಗ ಸಾಯಿರಾ ಬಿ ತಾಜುದ್ದೀನ್ ಮುಲ್ಲಾ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು.

ವಾಕಿಂಗ್​ಗೆಂದು ಹೋಗಿದ್ದ ವೃದ್ಧೆ ಹಿಂದಿರುಗಲೇ ಇಲ್ಲ, ಆಗಿತ್ತು ಅಪಘಾತ, ನೆಕ್ಲೇಸ್​ನಿಂದ ಜಾಗ ಪತ್ತೆ ಮಾಡಿದ ಕುಟುಂಬ
ವೃದ್ಧೆ-ಸಾಂದರ್ಭಿಕ ಚಿತ್ರImage Credit source: unsplash
ನಯನಾ ರಾಜೀವ್
|

Updated on: Dec 09, 2025 | 11:45 AM

Share

ಮುಂಬೈ, ಡಿಸೆಂಬರ್ 09: ಸಂಜೆ ಸಮಯದಲ್ಲಿ ವಾಕಿಂಗ್​​ಗೆಂದು ಹೋಗಿದ್ದ ವೃದ್ಧೆ ಮನೆಗೆ ಹಿಂದಿರುಗಿ ಬರಲೇ ಇಲ್ಲ. ಅವರು ಅಪಘಾತ(Accident)ವಾಗಿ ಆಸ್ಪತ್ರೆ ಸೇರಿದ್ದರು. ಅವರ ಕುಟುಂಬ ಅವರಿರುವ ಜಾಗವನ್ನು ಪತ್ತೆ ಹಚ್ಚಲು ಯಶಸ್ವಿಯಾಗಿದ್ದು, ಅದಕ್ಕೆ ಸಹಾಯ ಮಾಡಿದ್ದು ಅವರ ನೆಕ್ಲೇಸ್​​ನಲ್ಲಿದ್ದ ಜಿಪಿಎಸ್ ಟ್ರ್ಯಾಕರ್. ವಾಕಿಂಗ್​ಗೆ ಹೋಗಿದ್ದಾಗ ಸಾಯಿರಾ ಬಿ ತಾಜುದ್ದೀನ್ ಮುಲ್ಲಾ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು.

ಮನೆಯಲ್ಲಿ ಅವರು ಮನೆಗೆ ಬಾರದ್ದನ್ನು ಕಂಡು ಆತಂಕಕ್ಕೊಳಗಾಗಿದ್ದರು. ಅಲ್ಲೆಲ್ಲೇ ಹುಡುಕಿದರೂ ಅವರ ಸುಳಿವು ಪತ್ತೆಯಾಗಿರಲಿಲ್ಲ. ಕೊನೆಗೆ ಒಂದು ನೆಕ್ಲೇಸ್​​ನಿಂದ ಅವರಿರುವ ಜಾಗವನ್ನು ಪತ್ತೆ ಹಚ್ಚಲಾಯಿತು. ಆ ಮಹಿಳೆಯ ಮೊಮ್ಮಗ ನೆಕ್ಲೇಸ್​​ನಲ್ಲಿ ಜಿಪಿಎಸ್ ಟ್ರ್ಯಾಕರ್ ಅನ್ನು ಅಳವಡಿಸಿದ್ದರು.

ಮನೆಯಲ್ಲಿ ಎಲ್ಲರೂ ಬೇಸರದಿಂದ ಕುಳಿತಿದ್ದರು ಆಗ ಮೊಮ್ಮಗ ವಾಸಿಮ್ ಅಯೂಬ್ ಮುಲ್ಲಾ ಮನೆಗೆ ಬಂದವರೇ ವಿಷಯ ತಿಳಿದು ತಕ್ಷಣ ಟ್ರ್ಯಾಕರ್ ಆನ್ ಮಾಡಿದ್ದಾರೆ. ಆಗ ಮನೆಯಿಂದ 5 ಕಿ.ಮೀ ದೂರದಲ್ಲಿ ಅವರು ಇರುವ ಕುರಿತು ಕುರುಹು ದೊರೆತಿದೆ. ರೇಲ್‌ನಲ್ಲಿರುವ ಕೆಇಎಂ ಆಸ್ಪತ್ರೆಗೆ ಕೂಡಲೇ ಹೋಗಿದ್ದಾರೆ.

ಮತ್ತಷ್ಟು ಓದಿ: ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದೇಗೆ?

ತಲೆಗೆ ಗಾಯವಾಗಿದ್ದ ಮುಲ್ಲಾ ಅವರನ್ನು ಜೆಜೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಾಸಿಮ್ ಮುಲ್ಲಾ ನಲ್ಲಸೋಪಾರಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ವಾಸಿಮ್ ಅಂದು ಮಾಡಿದ್ದ ಆ ಕಾರ್ಯದಿಂದ ಇಂದು ಮಹಿಳೆಯನ್ನು ಪತ್ತೆ ಹಚ್ಚಲು ಸಾಧ್ಯವಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್