AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ

Mumbai Fire: ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಕಟ್ಟಡದೊಳಗೆ ಸಾಕಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ.

ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಭಾರೀ ಅಗ್ನಿ ದುರಂತ; ಓರ್ವ ಸಾವು, 26 ಜನರ ರಕ್ಷಣೆ
ಮುಂಬೈನಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 22, 2021 | 3:02 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿ ಮತ್ತೊಮ್ಮೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿ ಕಟ್ಟಡವೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಮುಂಬೈನ ಕರೇ ರಸ್ತೆಯಲ್ಲಿರುವ ಲೋವರ್ ಪರೇಲ್ ಏರಿಯಾದ ಅವಿಜ್ಞಾ ಪಾರ್ಕ್ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ, ಬೆಂಕಿ ನಂದಿಸುವ ಪ್ರಯತ್ನದಲ್ಲಿವೆ. ಈ ದುರಂತದಲ್ಲಿ ಬೆಂಕಿ ಹೊತ್ತಿಕೊಂಡಿರುವ ಫ್ಲಾಟ್​ನ ಕಿಟಕಿಯಿಂದ ಬಚಾವಾಗಲು ಪ್ರಯತ್ನಿಸಿದ ವ್ಯಕ್ತಿಯೊಬ್ಬ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. 

ಇದು ರೆಸಿಡೆನ್ಷಿಯಲ್ ಕಟ್ಟಡವಾಗಿರುವುದರಿಂದ ಕಟ್ಟಡದೊಳಗೆ ಕುಟುಂಬಗಳು ವಾಸವಾಗಿದ್ದಾರೆ. ಹೀಗಾಗಿ, ಬೆಂಕಿ ಹೊತ್ತಿಕೊಂಡ ಕಟ್ಟಡದೊಳಗೆ ಸಾಕಷ್ಟು ಜನರು ಸಿಲುಕಿರುವ ಸಾಧ್ಯತೆಯಿದೆ. ಮುಂಬೈನ 60 ಮಹಡಿಯ ಅಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಅಗ್ನಿ ಆಕಸ್ಮಿಕ ನಡೆದಿದ್ದು, 17ರಿಂದ 25ನೇ ಮಹಡಿಯವರೆಗೂ ಬೆಂಕಿ ವ್ಯಾಪಿಸಿದೆ. ಕಟ್ಟಡದ ಮೇಲಿಂದ ಬಿದ್ದು ಸಾವನನ್ಪ್ಪಿದ ವ್ಯಕ್ತಿಯನ್ನು 30 ವರ್ಷದ ಅರುಣ್​ ತಿವಾರಿ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ರಕ್ಷಿಸಿಕೊಳ್ಳುವಾಗ ಕೆಳಗೆ ಬಿದ್ದು ಆತ ಸಾವನ್ನಪ್ಪಿದ್ದಾನೆ.

60 ಮಹಡಿಗಳಿರುವ ಈ ಪಾರ್ಟ್​ಮೆಂಟ್​ನ 19ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ 26 ಜನರನ್ನು ರಕ್ಷಿಸಲಾಗಿದೆ. ಮೇಯರ್ ಸೇರಿದಂತೆ ಬಿಎಂಸಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ  ನಡೆಸಿದ್ದಾರೆ. ವ್ಯಾಪಿಸುತ್ತಲೇ ಇರುವ ಬೆಂಕಿಯನ್ನು ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಈ ಅಗ್ನಿ ಅವಘಡದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಸಿಂಗ್ ಚಹಾಲ್ ಆದೇಶ ನೀಡಿದ್ದಾರೆ. ಅಪಾರ್ಟ್​ಮೆಂಟ್​ ನಿವಾಸಿಗಳ ಪ್ರಕಾರ ಆ ಅಪಾರ್ಟ್​ಮೆಂಟ್​ನಲ್ಲಿ ಎಲ್ಲ ರೀತಿಯ ಬೆಂಕಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿತ್ತು. ಆದರೂ ಬೆಂಕಿ ದುರಂತ ಸಂಭವಿಸಿದೆ.

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ

ಸೂರತ್​ನ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಇಬ್ಬರು ಸಾವು, 125 ಮಂದಿಗೆ ಗಾಯ

Published On - 12:43 pm, Fri, 22 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ